Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...