Homeಕರ್ನಾಟಕಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ-...

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಂದ ಮಾಸಿಕ 100 ದೇಣಿಗೆ: ಸುತ್ತೋಲೆಯ ಹಿಂದಿದೆ ಶಿಕ್ಷಣ ವಂಚಿಸುವ ಉದ್ದೇಶ- ಸಿಪಿಐ(ಎಂ)

- Advertisement -
- Advertisement -

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯಲು ಉದ್ದೇಶಿಸಿರುವ, ಬಡವರು ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)- ಸಿಪಿಐ(ಎಂ) ಒತ್ತಾಯಿಸಿದೆ.

ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುತ್ತದೆ. ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗೀ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆ ಇದಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮಪಡಿಸಲು, ಸೌಲಭ್ಯಗಳಿಂದ ಬಲಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಈ ಸುತ್ತೋಲೆಯು ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಈ ಹಣವನ್ನು ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸಲಾಗಿದೆ. ಸರಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಈ ಸುತ್ತೋಲೆ ಸಾರ್ವಜನಿಕರಿಗೆ ರವಾನಿಸಿದೆ. ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯಲೇ ಬೇಕೆಂಬುವವರನ್ನು ಖಾಸಗೀ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ ಜನವಿರೋಧಿ, ಬಡವರ ವಿರೋಧಿ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಈ ಸುತ್ತೋಲೆಯು ಖಾಸಗೀ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗೀ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ. ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ. ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕಾದದ್ದೆ ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿರಿ: ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು, ಶಿಕ್ಷಕರನ್ನು ತುಂಬುವುದಿಲ್ಲ. ಹೊಸದಾಗಿ ಖಾಲಿಯಾಗುವ ಸಿಬ್ಬಂದಿಗಳ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ ಎಂಬ ಜನ ವಿರೋಧಿ ಸಂದೇಶವನ್ನು ಈ ಸುತ್ತೋಲೆ ಬಯಲುಗೊಳಿಸುತ್ತದೆ. ಮುಂದೆ ಸಿಬ್ಬಂದಿಗಳ ಕೊರತೆ ಎದುರಿಸುವಾಗ, ಮಾತ್ರವಲ್ಲಾ ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿರೆಂದು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿರೆಂದು ಹೇಳುತ್ತದೆ. ಇದರಿಂದಾಗಿ, ಈ ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್, ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸಿದೆ. ಖಾಸಗೀ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಆದರೇ ರಾಜ್ಯದ ಬಿಜೆಪಿ ಸರಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದಿ‌ದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...