Homeಅಂತರಾಷ್ಟ್ರೀಯ'ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ'; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

‘ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ’; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ, ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ ಜೊಹ್ರಾನ್ ಮಮ್ದಾನಿ ಅವರ ಗೆಲುವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ. ಜೊಹ್ರಾನ್ ಮಮ್ದಾನಿ ಅವರನ್ನು “ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ” ಎಂದು‌ ಟ್ರಂಪ್‌ ಜರೆದಿದ್ದಾರೆ.

ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಜ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಜೊಹ್ರಾನ್ ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದಾರೆ.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಜೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಮೇಯರ್‌ ಅಂತಿಮ ಆಯ್ಕೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಜೊಹ್ರಾನ್ ಅವರು ಮಾಜಿ ಮೇಯರ್, ರಿಪಬ್ಲಿಕನ್ ಪಕ್ಷದ ಎರಿಕ್ ಆ್ಯಡಮ್ಸ್ ಅವರನ್ನು ಎದುರಿಸಬೇಕಿದೆ. ಜುಲೈ 1ರಂದು ಅಧಿಕೃತ ಫಲಿತಾಂಶ ಹೊರಬೀಳಲಿದೆ.

ನ್ಯೂಯಾರ್ಕ್ ನಗರದ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ನ್ಯೂಯಾರ್ಕ್ ನಗರದ ಮೇಯರ್ ಪ್ರಾಥಮಿಕ ಚುನಾವಣೆಗೆ ಅನುಮತಿ ನೀಡಿದ ಬಳಿಕ, ಜೊಹ್ರಾನ್ ಮಮ್ದಾನಿ ಅವರು ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎಣಿಕೆಯಾದ ಶೇ.90 ರಷ್ಟು ಮತಗಳ ಪೈಕಿ, ಜೊಹ್ರಾನ್ ಮಮ್ದಾನಿ ಶೇ. 43.5ರಷ್ಟು ಮತಗಳನ್ನು ಗಳಿಸಿದ್ದಾರೆ.‌ ಮಮ್ದಾನಿ ಅಂತಿಮ ರೇಸ್‌ನಲ್ಲಿ ಗೆದ್ದರೆ, ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಲಿದ್ದಾರೆ.

ಕ್ವೀನ್ಸ್‌ನ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಮತ್ತು ಸ್ಟೇಟ್‌ ಅಸೆಂಬ್ಲಿ ಸದಸ್ಯರಾಗಿರುವ ಜೊಹ್ರಾನ್ ಅವರು ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಪುತ್ರ.

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...