Homeಅಂತರಾಷ್ಟ್ರೀಯ'ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ'; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

‘ಶೇ.100ರಷ್ಟು ಕಮ್ಯೂನಿಸ್ಟ್‌ ಹುಚ್ಚ’; ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಅಭ್ಯರ್ಥಿಯನ್ನು ಟೀಕಿಸಿದ ಟ್ರಂಪ್!

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ, ಭಾರತೀಯ ಮೂಲದ ಎಡಪಂಥೀಯ ಸಮಾಜವಾದಿ ಜೊಹ್ರಾನ್ ಮಮ್ದಾನಿ ಅವರ ಗೆಲುವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ. ಜೊಹ್ರಾನ್ ಮಮ್ದಾನಿ ಅವರನ್ನು “ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚ” ಎಂದು‌ ಟ್ರಂಪ್‌ ಜರೆದಿದ್ದಾರೆ.

ಕಾಂಗ್ರೆಸ್ (ಸಂಸತ್‌) ಸದಸ್ಯೆ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕೊರ್ಟೆಜ್ (ಎಒಸಿ) ಮತ್ತು ಸೆನೆಟರ್ ಚಕ್ ಶುಮರ್ ಸೇರಿದಂತೆ, ಜೊಹ್ರಾನ್ ಮಮ್ದಾನಿ‌ ಅವರನ್ನು ಬೆಂಬಲಿಸಿದ ಇತರ ಪ್ರಗತಿಪರ ನಾಯಕರ ವಿರುದ್ದವೂ ಟ್ರಂಪ್‌ ಕಿಡಿಕಾರಿದ್ದಾರೆ.

“ಶೇ.100ರಷ್ಟು ಕಮ್ಯೂನಿಸ್ಟ್ ಹುಚ್ಚರಾದ ಜೊಹ್ರಾನ್ ಮಮ್ದಾನಿ‌ ಅವರನ್ನು ನ್ಯೂಯಾರ್ಕ್‌ ನಗರದ ಮೇಯರ್‌ ಅಭ್ಯರ್ಥಿಯ ಪ್ರಾಥಮಿಕ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ, ಡೆಮೋಕ್ರಾಟ್‌ಗಳು ತಮ್ಮ ನಿಜ ಬಣ್ಣ ಬಯಲು ಮಾಡಿದ್ದಾರೆ ” ಎಂದು ಟ್ರಂಪ್‌ ತಮ್ಮ ಟ್ರುಥ್ ಸೋಶಿಯಲ್‌ ಮಿಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಮಮ್ದಾನಿ ಭಯಾನಕವಾಗಿ ಕಾಣುತ್ತಾರೆ, ಅವರ ಧ್ವನಿ ಗಡಸುತನದಿಂದ ಕೂಡಿದೆ, ಅವರು ತುಂಬಾ ಬುದ್ಧಿವಂತರಲ್ಲ. ಆದರೆ, ಡೆಮೊಕ್ರಾಟ್‌ಗಳು ಇಂತಹವರನ್ನು ಬೆಂಬಲಿಸುತ್ತಿದ್ದಾರೆ” ಎಂದು ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಮೇಯರ್‌ ಅಂತಿಮ ಆಯ್ಕೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಜೊಹ್ರಾನ್ ಅವರು ಮಾಜಿ ಮೇಯರ್, ರಿಪಬ್ಲಿಕನ್ ಪಕ್ಷದ ಎರಿಕ್ ಆ್ಯಡಮ್ಸ್ ಅವರನ್ನು ಎದುರಿಸಬೇಕಿದೆ. ಜುಲೈ 1ರಂದು ಅಧಿಕೃತ ಫಲಿತಾಂಶ ಹೊರಬೀಳಲಿದೆ.

ನ್ಯೂಯಾರ್ಕ್ ನಗರದ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ನ್ಯೂಯಾರ್ಕ್ ನಗರದ ಮೇಯರ್ ಪ್ರಾಥಮಿಕ ಚುನಾವಣೆಗೆ ಅನುಮತಿ ನೀಡಿದ ಬಳಿಕ, ಜೊಹ್ರಾನ್ ಮಮ್ದಾನಿ ಅವರು ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಪ್ರಾಥಮಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎಣಿಕೆಯಾದ ಶೇ.90 ರಷ್ಟು ಮತಗಳ ಪೈಕಿ, ಜೊಹ್ರಾನ್ ಮಮ್ದಾನಿ ಶೇ. 43.5ರಷ್ಟು ಮತಗಳನ್ನು ಗಳಿಸಿದ್ದಾರೆ.‌ ಮಮ್ದಾನಿ ಅಂತಿಮ ರೇಸ್‌ನಲ್ಲಿ ಗೆದ್ದರೆ, ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಲಿದ್ದಾರೆ.

ಕ್ವೀನ್ಸ್‌ನ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಮತ್ತು ಸ್ಟೇಟ್‌ ಅಸೆಂಬ್ಲಿ ಸದಸ್ಯರಾಗಿರುವ ಜೊಹ್ರಾನ್ ಅವರು ಭಾರತದ ಪ್ರಖ್ಯಾತ ಸಿನಿಮಾ ನಿರ್ಮಾಪಕಿ ಮೀರಾ ನಾಯರ್ ಮತ್ತು ಭಾರತೀಯ ಮೂಲದ ಉಗಾಂಡಾದ ಮಾರ್ಕ್ಸ್‌ವಾದಿ ವಿದ್ವಾಂಸ ಮಹಮೂದ್ ಮಮ್ದಾನಿ ಅವರ ಪುತ್ರ.

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...