Homeಸಿನಿಮಾಕ್ರೀಡೆ37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ಸದ್ಯ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಸಿ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಕ್ರಿಕೆಟ್‌ಗೆ ಅಷ್ಟೇನೂ ಹೆಸರುವಾಸಿಯಲ್ಲದ ಕೇರಳ ತಂಡದ ‘ಅಜರ್’ ರನ್‌ಗಳ ಧಮಾಕಾ ಸೃಷ್ಟಿಸಿದ್ದಾನೆ.

- Advertisement -
- Advertisement -

ಅದು ಬಲಿಷ್ಠ ಮುಂಬೈ ತಂಡ. ಇವನು ಅಶಕ್ತ ಕೇರಳ ತಂಡದವನು. 54 ಎಸೆತಗಳಲ್ಲಿ ಈ ಯುವಕ 137 ರನ್ ಚಚ್ಚಿದ್ದಾನೆ. 100 ರನ್ ತಲುಪಲು ಆತನಿಗೆ ಕೇವಲ 37 ಎಸೆತ ಸಾಕಾಯಿತು. ಟ್ವೆಂಟಿ-20ಯಲ್ಲಿ ಭಾರತೀಯನೊಬ್ಬ ಗಳಿಸಿದ ವೇಗದ ಸೆಂಚುರಿಯಲ್ಲಿ ಇದೀಗ ಇದು ಮೂರನೆ ಸ್ಥಾನದಲ್ಲಿದೆ. ಹಿಂದೆ ರಿಷಬ್ ಪಂತ್ 32 ಎಸೆತಗಳಲ್ಲಿ ಮತ್ತು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್-ಕ್ರೇಜಿ ಹಿರಿಯ ಸಹೋದರ ಈ ಹುಡುಗನಿಗೆ ಹೆಚ್ಚಿನ ವೃತ್ತಿಜೀವನದ ಆಯ್ಕೆಯನ್ನು ನೀಡಲಿಲ್ಲ. ಅವನ ಹೆಸರನ್ನು ಅಜ್ಮಲ್‌ನಿಂದ ಮೊಹಮ್ಮದ್ ಅಜರುದ್ದೀನ್ ಎಂದು ಬದಲಾಯಿಸಿ ಕ್ರಿಕೆಟ್ ಅಂಗಳಕ್ಕೆ ದಬ್ಬಿಬಿಟ್ಟ!
ಇದಲ್ಲದೆ, ಈ ಅಜರ್ ಕಾಸರಗೋಡಿನ ಹೊರವಲಯದಲ್ಲಿರುವ ಕೇರಳದ ಅಪರೂಪದ ಪಟ್ಟಣವಾದ ತಲಂಗರಾದಿಂದ ಬಂದವನು. ಅಲ್ಲಿ ಮಕ್ಕಳು ಚೆಂಡನ್ನು ಬ್ಯಾಟ್‌ನಿಂದ ಹೊಡೆಯಲು ಬಯಸುತ್ತಾರೆ ಹೊರತು, ಅದನ್ನು ಕಿಕ್ ಮಾಡಲು ಅಲ್ಲ. ಕೇರಳದಲ್ಲಿ ಫುಟ್‌ಬಾಲ್ ಹೆಚ್ಚು ಜನಪ್ರಿಯ ಎಂಬುದನ್ನು ಗಮನಿಸಿ.

26ರ ಹರೆಯದ ಯುವಕ ಅಜರ್, ಭಾರತೀಯ ಬ್ಯಾಟಿಂಗ್ ಶ್ರೇಷ್ಠ ಮೊಹಮ್ಮದ್ ಅಜರುದ್ದೀನ್ ಅವರ “ಅಜೀವ ಅಭಿಮಾನಿ”ಯಾದ ತನ್ನ ಹಿರಿಯ ಸಹೋದರ ಕಮರುದ್ದೀನ್ ನಿರೀಕ್ಷೆಗೆ ತಕ್ಕಂತೆ ಏನಾದರೂ ವಿಶೇಷವಾದ ಕೆಲಸವನ್ನು ಮಾಡಬೇಕೆಂದು ನಿರ್ಧರಿಸಿದ್ದ. ತಲಂಗರಾ ಪಟ್ಟಣ ಕೂಡ ಅವರ “ನೆಕ್ಸ್ಟ್ ಅಜರ್”ನಿಂದ ಹೆಚ್ಚಿನ ಸಾಧನೆ ನಿರೀಕ್ಷಿಸಿತ್ತು.

ಮೊನ್ನೆ ಬುಧವಾರ, ಅಜರ್ ತನ್ನ ಏಳು ಸಹೋದರರು, ತನ್ನ ಸ್ವಂತೂರು ಮತ್ತು ಇಡೀ ರಾಜ್ಯ ಹೆಮ್ಮೆಪಡುವ ಆಟ ಆಡಿಬಿಟ್ಟ. ಈ ಎರಡು ದಶಕಗಳಲ್ಲಿ ಶ್ರೀಶಾಂತ್ ಬಿಟ್ಟರೆ ಕೇರಳದ ಕ್ರಿಕೆಟಿಗರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದು ಕಡಿಮೆಯೇ. ಆರ್‌ಸಿಬಿ ತಂಡಕ್ಕೆ ಆಡುವ ದೇವದತ್ತ ಪಡಿಕ್ಕಲ್ ಮೂಲತಃ ಕೇರಳದ ಹುಡುಗ. ದಶಕದಿಂದ ಬೆಂಗಳೂರು ನಿವಾಸಿಯಾಗಿರುವ ದೇವದತ್ತ ಈಗ ಟ್ವೆಂಟಿ-20 ಮಾದರಿಯಲ್ಲಿ ಗಮನ ಸೆಳೆಯುತ್ತಿರುವ ಪ್ರತಿಭೆ.

ಮುಂಬೈ ವಿರುದ್ಧ 54 ಎಸೆತಗಳಲ್ಲಿ 137 ರನ್ ಗಳಿಸಿದ ಅಜರುದ್ದೀನ್ ಅಲಿಯಾಸ್ ಅಜ್ಮಲ್, ಶತಕ ಗಳಿಸಲು 37 ಎಸೆತ ತೆಗೆದುಕೊಂಡ. ರಿಷಭ್ ಪಂತ್ (32 ಎಸೆತಗಳು) ಮತ್ತು ರೋಹಿತ್ ಶರ್ಮಾ (35 ಎಸೆತಗಳು) ನಂತರ ಭಾರತೀಯರು ಮಾಡಿದ ಮೂರನೇ ಅತಿ ವೇಗದ ಟ್ವೆಂಟಿ-20 ಶತಕ ಇದು.

“ನಾವು ಮಾತ್ರವಲ್ಲ, ಇಡೀ ತಲಂಗರಾದ ಜನ ಅವತ್ತು ಟಿವಿಗೆ ಅಂಟಿಕೊಂಡಿದ್ದರು” ಎಂದು ಹಿರಿಯ ಸಹೋದರ ಕಮರುದ್ದೀನ್ ಹೆಮ್ಮೆ ಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅಜರುದ್ದೀನ್ ಅವರ ಬ್ಯಾಟಿಂಗ್ ರೇಸಿಂಗ್‌ನ ವಿಡಿಯೊ ತುಣುಕುಗಳೊಂದಿಗೆ, ಭಾರತ ಕ್ರಿಕೆಟ್ ವಲಯಗಳು ಮತ್ತೆ ಹಳೆಯ ‘ಅಜರ್’ ಅವರನ್ನು ನೆನಪಿಸಿಕೊಂಡಿವೆ. ಬಿಗ್ ಶಾಟ್ ವೀರ ವೀರೇಂದ್ರ ಸೆಹ್ವಾಗ್, “ವಾಹ್ ಅಜರುದ್ದೀನ್, ಬೆಹ್ತರೀನ್!. ನಿನ್ನ ಆಟವನ್ನು ಆನಂದಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಲಿಷ್ಠ ಬೌಲರ್‌ಗಳ ಬೆವರಿಳಿಸಿದ

ಮುಂಬೈ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಹಿಂದೆ ಭಾರತ ತಂಡಕ್ಕೆ ಆಡಿದ್ದ ವೇಗಿ ಧವನ್ ಕುಲಕರ್ಣಿ ಮತ್ತು 2020ರ ಟ್ವೆಂಟಿ-20ಯಲ್ಲಿ ಮಿಂಚಿದ ತುಷಾರ್ ದೇಶಪಾಂಡೆ ಎಸೆತಗಳನ್ನು ಹಿಗ್ಗಾಮುಗ್ಗಾ ಬಾರಿಸಿದ ಅಜರ್, ಅವರನ್ನು ಬೌಂಡರಿ ಲೈನಿನಾಚೆಗೆ ದೂಕಿಬಿಟ್ಟ.

ಭಾರತ ತಂಡಕ್ಕೆ ಆಡಿದ್ದ ವೇಗಿ ಮತ್ತು ಸದ್ಯ ಕೇರಳ ತಂಡದ ಕೋಚ್ ಆಗಿರುವ ಟಿನು ಯೊಹಾನ್ನನ್, ‘ಅವನಿಂದ ಅಂತಹ ಒಂದು ಆಟವನ್ನು ನಿರೀಕ್ಷೆ ಮಾಡಿದ್ದೆ. ಆದರೆ ಅದು ಈ ಪ್ರಮಾಣದಲ್ಲಿ ಎಂದು ಊಹೆ ಕೂಡ ಮಾಡಿರಲಿಲ್ಲ. ಅಜರ್‌ನ ಸ್ಕ್ವೇರ್ ಲೆಗ್ ಶಾಟ್‌ಗಳಿಗಿಂತ ಅವನ ಪಿಕ್-ಅಪ್ ಶಾಟ್‌ಗಳು ನನಗೆ ಇಷ್ಟ. ಇಂತಹ ಆಟ ನೋಡುವುದೇ ಸೊಬಗು. ಆದರೆ ಬೌಲರ್‌ಗಳ ಪಾಲಿಗೆ ಇದು ನರಕ. ಅವರು ಶಾರ್ಟ್ ಆಫ್ ಲೆಂಥ್ ಎಸೆದರೆ ಇವನು ಸೀದಾ ಬೌಂಡರಿಯಾಚೆ ಚೆಂಡನ್ನು ಅಟ್ಟಿದಾಗ ಅದು ಬೌಲರ್‌ಗಳ ನೈತಿಕ ಶಕ್ತಿಯನ್ನೇ ಕಸಿದು ಬಿಟ್ಟಿತ್ತು’ ಎಂದಿದ್ದಾರೆ.

ರಣಜಿ, ಮುಷ್ತಾಕ್ ಅಲಿ ಮುಂತಾದ ದೇಸಿ ಚಾಂಪಿಯನ್‌ಶಿಪ್‌ಗಳಲ್ಲಿ ಕೇರಳ ಬೇಗ ನಿರ್ಗಮಿಸುವುದರಿಂದ ಅಜರ್‌ಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆದರೆ ಸಿಕ್ಕ ಅವಕಾಶವನ್ನು ಈ ಸಲ ಆತ ಸಮರ್ಥವಾಗಿ ಬಳಸಿಕೊಂಡಿದ್ದಾನೆ. ‘ಮತ್ತೊಬ್ಬ ಅಜರ್’ಗಾಗಿ ಕಾಯೋಣ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...