Homeಸಿನಿಮಾಕ್ರೀಡೆ37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ಸದ್ಯ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಸಿ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಕ್ರಿಕೆಟ್‌ಗೆ ಅಷ್ಟೇನೂ ಹೆಸರುವಾಸಿಯಲ್ಲದ ಕೇರಳ ತಂಡದ ‘ಅಜರ್’ ರನ್‌ಗಳ ಧಮಾಕಾ ಸೃಷ್ಟಿಸಿದ್ದಾನೆ.

- Advertisement -
- Advertisement -

ಅದು ಬಲಿಷ್ಠ ಮುಂಬೈ ತಂಡ. ಇವನು ಅಶಕ್ತ ಕೇರಳ ತಂಡದವನು. 54 ಎಸೆತಗಳಲ್ಲಿ ಈ ಯುವಕ 137 ರನ್ ಚಚ್ಚಿದ್ದಾನೆ. 100 ರನ್ ತಲುಪಲು ಆತನಿಗೆ ಕೇವಲ 37 ಎಸೆತ ಸಾಕಾಯಿತು. ಟ್ವೆಂಟಿ-20ಯಲ್ಲಿ ಭಾರತೀಯನೊಬ್ಬ ಗಳಿಸಿದ ವೇಗದ ಸೆಂಚುರಿಯಲ್ಲಿ ಇದೀಗ ಇದು ಮೂರನೆ ಸ್ಥಾನದಲ್ಲಿದೆ. ಹಿಂದೆ ರಿಷಬ್ ಪಂತ್ 32 ಎಸೆತಗಳಲ್ಲಿ ಮತ್ತು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್-ಕ್ರೇಜಿ ಹಿರಿಯ ಸಹೋದರ ಈ ಹುಡುಗನಿಗೆ ಹೆಚ್ಚಿನ ವೃತ್ತಿಜೀವನದ ಆಯ್ಕೆಯನ್ನು ನೀಡಲಿಲ್ಲ. ಅವನ ಹೆಸರನ್ನು ಅಜ್ಮಲ್‌ನಿಂದ ಮೊಹಮ್ಮದ್ ಅಜರುದ್ದೀನ್ ಎಂದು ಬದಲಾಯಿಸಿ ಕ್ರಿಕೆಟ್ ಅಂಗಳಕ್ಕೆ ದಬ್ಬಿಬಿಟ್ಟ!
ಇದಲ್ಲದೆ, ಈ ಅಜರ್ ಕಾಸರಗೋಡಿನ ಹೊರವಲಯದಲ್ಲಿರುವ ಕೇರಳದ ಅಪರೂಪದ ಪಟ್ಟಣವಾದ ತಲಂಗರಾದಿಂದ ಬಂದವನು. ಅಲ್ಲಿ ಮಕ್ಕಳು ಚೆಂಡನ್ನು ಬ್ಯಾಟ್‌ನಿಂದ ಹೊಡೆಯಲು ಬಯಸುತ್ತಾರೆ ಹೊರತು, ಅದನ್ನು ಕಿಕ್ ಮಾಡಲು ಅಲ್ಲ. ಕೇರಳದಲ್ಲಿ ಫುಟ್‌ಬಾಲ್ ಹೆಚ್ಚು ಜನಪ್ರಿಯ ಎಂಬುದನ್ನು ಗಮನಿಸಿ.

26ರ ಹರೆಯದ ಯುವಕ ಅಜರ್, ಭಾರತೀಯ ಬ್ಯಾಟಿಂಗ್ ಶ್ರೇಷ್ಠ ಮೊಹಮ್ಮದ್ ಅಜರುದ್ದೀನ್ ಅವರ “ಅಜೀವ ಅಭಿಮಾನಿ”ಯಾದ ತನ್ನ ಹಿರಿಯ ಸಹೋದರ ಕಮರುದ್ದೀನ್ ನಿರೀಕ್ಷೆಗೆ ತಕ್ಕಂತೆ ಏನಾದರೂ ವಿಶೇಷವಾದ ಕೆಲಸವನ್ನು ಮಾಡಬೇಕೆಂದು ನಿರ್ಧರಿಸಿದ್ದ. ತಲಂಗರಾ ಪಟ್ಟಣ ಕೂಡ ಅವರ “ನೆಕ್ಸ್ಟ್ ಅಜರ್”ನಿಂದ ಹೆಚ್ಚಿನ ಸಾಧನೆ ನಿರೀಕ್ಷಿಸಿತ್ತು.

ಮೊನ್ನೆ ಬುಧವಾರ, ಅಜರ್ ತನ್ನ ಏಳು ಸಹೋದರರು, ತನ್ನ ಸ್ವಂತೂರು ಮತ್ತು ಇಡೀ ರಾಜ್ಯ ಹೆಮ್ಮೆಪಡುವ ಆಟ ಆಡಿಬಿಟ್ಟ. ಈ ಎರಡು ದಶಕಗಳಲ್ಲಿ ಶ್ರೀಶಾಂತ್ ಬಿಟ್ಟರೆ ಕೇರಳದ ಕ್ರಿಕೆಟಿಗರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದು ಕಡಿಮೆಯೇ. ಆರ್‌ಸಿಬಿ ತಂಡಕ್ಕೆ ಆಡುವ ದೇವದತ್ತ ಪಡಿಕ್ಕಲ್ ಮೂಲತಃ ಕೇರಳದ ಹುಡುಗ. ದಶಕದಿಂದ ಬೆಂಗಳೂರು ನಿವಾಸಿಯಾಗಿರುವ ದೇವದತ್ತ ಈಗ ಟ್ವೆಂಟಿ-20 ಮಾದರಿಯಲ್ಲಿ ಗಮನ ಸೆಳೆಯುತ್ತಿರುವ ಪ್ರತಿಭೆ.

ಮುಂಬೈ ವಿರುದ್ಧ 54 ಎಸೆತಗಳಲ್ಲಿ 137 ರನ್ ಗಳಿಸಿದ ಅಜರುದ್ದೀನ್ ಅಲಿಯಾಸ್ ಅಜ್ಮಲ್, ಶತಕ ಗಳಿಸಲು 37 ಎಸೆತ ತೆಗೆದುಕೊಂಡ. ರಿಷಭ್ ಪಂತ್ (32 ಎಸೆತಗಳು) ಮತ್ತು ರೋಹಿತ್ ಶರ್ಮಾ (35 ಎಸೆತಗಳು) ನಂತರ ಭಾರತೀಯರು ಮಾಡಿದ ಮೂರನೇ ಅತಿ ವೇಗದ ಟ್ವೆಂಟಿ-20 ಶತಕ ಇದು.

“ನಾವು ಮಾತ್ರವಲ್ಲ, ಇಡೀ ತಲಂಗರಾದ ಜನ ಅವತ್ತು ಟಿವಿಗೆ ಅಂಟಿಕೊಂಡಿದ್ದರು” ಎಂದು ಹಿರಿಯ ಸಹೋದರ ಕಮರುದ್ದೀನ್ ಹೆಮ್ಮೆ ಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅಜರುದ್ದೀನ್ ಅವರ ಬ್ಯಾಟಿಂಗ್ ರೇಸಿಂಗ್‌ನ ವಿಡಿಯೊ ತುಣುಕುಗಳೊಂದಿಗೆ, ಭಾರತ ಕ್ರಿಕೆಟ್ ವಲಯಗಳು ಮತ್ತೆ ಹಳೆಯ ‘ಅಜರ್’ ಅವರನ್ನು ನೆನಪಿಸಿಕೊಂಡಿವೆ. ಬಿಗ್ ಶಾಟ್ ವೀರ ವೀರೇಂದ್ರ ಸೆಹ್ವಾಗ್, “ವಾಹ್ ಅಜರುದ್ದೀನ್, ಬೆಹ್ತರೀನ್!. ನಿನ್ನ ಆಟವನ್ನು ಆನಂದಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಲಿಷ್ಠ ಬೌಲರ್‌ಗಳ ಬೆವರಿಳಿಸಿದ

ಮುಂಬೈ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಹಿಂದೆ ಭಾರತ ತಂಡಕ್ಕೆ ಆಡಿದ್ದ ವೇಗಿ ಧವನ್ ಕುಲಕರ್ಣಿ ಮತ್ತು 2020ರ ಟ್ವೆಂಟಿ-20ಯಲ್ಲಿ ಮಿಂಚಿದ ತುಷಾರ್ ದೇಶಪಾಂಡೆ ಎಸೆತಗಳನ್ನು ಹಿಗ್ಗಾಮುಗ್ಗಾ ಬಾರಿಸಿದ ಅಜರ್, ಅವರನ್ನು ಬೌಂಡರಿ ಲೈನಿನಾಚೆಗೆ ದೂಕಿಬಿಟ್ಟ.

ಭಾರತ ತಂಡಕ್ಕೆ ಆಡಿದ್ದ ವೇಗಿ ಮತ್ತು ಸದ್ಯ ಕೇರಳ ತಂಡದ ಕೋಚ್ ಆಗಿರುವ ಟಿನು ಯೊಹಾನ್ನನ್, ‘ಅವನಿಂದ ಅಂತಹ ಒಂದು ಆಟವನ್ನು ನಿರೀಕ್ಷೆ ಮಾಡಿದ್ದೆ. ಆದರೆ ಅದು ಈ ಪ್ರಮಾಣದಲ್ಲಿ ಎಂದು ಊಹೆ ಕೂಡ ಮಾಡಿರಲಿಲ್ಲ. ಅಜರ್‌ನ ಸ್ಕ್ವೇರ್ ಲೆಗ್ ಶಾಟ್‌ಗಳಿಗಿಂತ ಅವನ ಪಿಕ್-ಅಪ್ ಶಾಟ್‌ಗಳು ನನಗೆ ಇಷ್ಟ. ಇಂತಹ ಆಟ ನೋಡುವುದೇ ಸೊಬಗು. ಆದರೆ ಬೌಲರ್‌ಗಳ ಪಾಲಿಗೆ ಇದು ನರಕ. ಅವರು ಶಾರ್ಟ್ ಆಫ್ ಲೆಂಥ್ ಎಸೆದರೆ ಇವನು ಸೀದಾ ಬೌಂಡರಿಯಾಚೆ ಚೆಂಡನ್ನು ಅಟ್ಟಿದಾಗ ಅದು ಬೌಲರ್‌ಗಳ ನೈತಿಕ ಶಕ್ತಿಯನ್ನೇ ಕಸಿದು ಬಿಟ್ಟಿತ್ತು’ ಎಂದಿದ್ದಾರೆ.

ರಣಜಿ, ಮುಷ್ತಾಕ್ ಅಲಿ ಮುಂತಾದ ದೇಸಿ ಚಾಂಪಿಯನ್‌ಶಿಪ್‌ಗಳಲ್ಲಿ ಕೇರಳ ಬೇಗ ನಿರ್ಗಮಿಸುವುದರಿಂದ ಅಜರ್‌ಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆದರೆ ಸಿಕ್ಕ ಅವಕಾಶವನ್ನು ಈ ಸಲ ಆತ ಸಮರ್ಥವಾಗಿ ಬಳಸಿಕೊಂಡಿದ್ದಾನೆ. ‘ಮತ್ತೊಬ್ಬ ಅಜರ್’ಗಾಗಿ ಕಾಯೋಣ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...