Homeಸಿನಿಮಾಕ್ರೀಡೆ37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ಸದ್ಯ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಸಿ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಕ್ರಿಕೆಟ್‌ಗೆ ಅಷ್ಟೇನೂ ಹೆಸರುವಾಸಿಯಲ್ಲದ ಕೇರಳ ತಂಡದ ‘ಅಜರ್’ ರನ್‌ಗಳ ಧಮಾಕಾ ಸೃಷ್ಟಿಸಿದ್ದಾನೆ.

- Advertisement -
- Advertisement -

ಅದು ಬಲಿಷ್ಠ ಮುಂಬೈ ತಂಡ. ಇವನು ಅಶಕ್ತ ಕೇರಳ ತಂಡದವನು. 54 ಎಸೆತಗಳಲ್ಲಿ ಈ ಯುವಕ 137 ರನ್ ಚಚ್ಚಿದ್ದಾನೆ. 100 ರನ್ ತಲುಪಲು ಆತನಿಗೆ ಕೇವಲ 37 ಎಸೆತ ಸಾಕಾಯಿತು. ಟ್ವೆಂಟಿ-20ಯಲ್ಲಿ ಭಾರತೀಯನೊಬ್ಬ ಗಳಿಸಿದ ವೇಗದ ಸೆಂಚುರಿಯಲ್ಲಿ ಇದೀಗ ಇದು ಮೂರನೆ ಸ್ಥಾನದಲ್ಲಿದೆ. ಹಿಂದೆ ರಿಷಬ್ ಪಂತ್ 32 ಎಸೆತಗಳಲ್ಲಿ ಮತ್ತು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್-ಕ್ರೇಜಿ ಹಿರಿಯ ಸಹೋದರ ಈ ಹುಡುಗನಿಗೆ ಹೆಚ್ಚಿನ ವೃತ್ತಿಜೀವನದ ಆಯ್ಕೆಯನ್ನು ನೀಡಲಿಲ್ಲ. ಅವನ ಹೆಸರನ್ನು ಅಜ್ಮಲ್‌ನಿಂದ ಮೊಹಮ್ಮದ್ ಅಜರುದ್ದೀನ್ ಎಂದು ಬದಲಾಯಿಸಿ ಕ್ರಿಕೆಟ್ ಅಂಗಳಕ್ಕೆ ದಬ್ಬಿಬಿಟ್ಟ!
ಇದಲ್ಲದೆ, ಈ ಅಜರ್ ಕಾಸರಗೋಡಿನ ಹೊರವಲಯದಲ್ಲಿರುವ ಕೇರಳದ ಅಪರೂಪದ ಪಟ್ಟಣವಾದ ತಲಂಗರಾದಿಂದ ಬಂದವನು. ಅಲ್ಲಿ ಮಕ್ಕಳು ಚೆಂಡನ್ನು ಬ್ಯಾಟ್‌ನಿಂದ ಹೊಡೆಯಲು ಬಯಸುತ್ತಾರೆ ಹೊರತು, ಅದನ್ನು ಕಿಕ್ ಮಾಡಲು ಅಲ್ಲ. ಕೇರಳದಲ್ಲಿ ಫುಟ್‌ಬಾಲ್ ಹೆಚ್ಚು ಜನಪ್ರಿಯ ಎಂಬುದನ್ನು ಗಮನಿಸಿ.

26ರ ಹರೆಯದ ಯುವಕ ಅಜರ್, ಭಾರತೀಯ ಬ್ಯಾಟಿಂಗ್ ಶ್ರೇಷ್ಠ ಮೊಹಮ್ಮದ್ ಅಜರುದ್ದೀನ್ ಅವರ “ಅಜೀವ ಅಭಿಮಾನಿ”ಯಾದ ತನ್ನ ಹಿರಿಯ ಸಹೋದರ ಕಮರುದ್ದೀನ್ ನಿರೀಕ್ಷೆಗೆ ತಕ್ಕಂತೆ ಏನಾದರೂ ವಿಶೇಷವಾದ ಕೆಲಸವನ್ನು ಮಾಡಬೇಕೆಂದು ನಿರ್ಧರಿಸಿದ್ದ. ತಲಂಗರಾ ಪಟ್ಟಣ ಕೂಡ ಅವರ “ನೆಕ್ಸ್ಟ್ ಅಜರ್”ನಿಂದ ಹೆಚ್ಚಿನ ಸಾಧನೆ ನಿರೀಕ್ಷಿಸಿತ್ತು.

ಮೊನ್ನೆ ಬುಧವಾರ, ಅಜರ್ ತನ್ನ ಏಳು ಸಹೋದರರು, ತನ್ನ ಸ್ವಂತೂರು ಮತ್ತು ಇಡೀ ರಾಜ್ಯ ಹೆಮ್ಮೆಪಡುವ ಆಟ ಆಡಿಬಿಟ್ಟ. ಈ ಎರಡು ದಶಕಗಳಲ್ಲಿ ಶ್ರೀಶಾಂತ್ ಬಿಟ್ಟರೆ ಕೇರಳದ ಕ್ರಿಕೆಟಿಗರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದು ಕಡಿಮೆಯೇ. ಆರ್‌ಸಿಬಿ ತಂಡಕ್ಕೆ ಆಡುವ ದೇವದತ್ತ ಪಡಿಕ್ಕಲ್ ಮೂಲತಃ ಕೇರಳದ ಹುಡುಗ. ದಶಕದಿಂದ ಬೆಂಗಳೂರು ನಿವಾಸಿಯಾಗಿರುವ ದೇವದತ್ತ ಈಗ ಟ್ವೆಂಟಿ-20 ಮಾದರಿಯಲ್ಲಿ ಗಮನ ಸೆಳೆಯುತ್ತಿರುವ ಪ್ರತಿಭೆ.

ಮುಂಬೈ ವಿರುದ್ಧ 54 ಎಸೆತಗಳಲ್ಲಿ 137 ರನ್ ಗಳಿಸಿದ ಅಜರುದ್ದೀನ್ ಅಲಿಯಾಸ್ ಅಜ್ಮಲ್, ಶತಕ ಗಳಿಸಲು 37 ಎಸೆತ ತೆಗೆದುಕೊಂಡ. ರಿಷಭ್ ಪಂತ್ (32 ಎಸೆತಗಳು) ಮತ್ತು ರೋಹಿತ್ ಶರ್ಮಾ (35 ಎಸೆತಗಳು) ನಂತರ ಭಾರತೀಯರು ಮಾಡಿದ ಮೂರನೇ ಅತಿ ವೇಗದ ಟ್ವೆಂಟಿ-20 ಶತಕ ಇದು.

“ನಾವು ಮಾತ್ರವಲ್ಲ, ಇಡೀ ತಲಂಗರಾದ ಜನ ಅವತ್ತು ಟಿವಿಗೆ ಅಂಟಿಕೊಂಡಿದ್ದರು” ಎಂದು ಹಿರಿಯ ಸಹೋದರ ಕಮರುದ್ದೀನ್ ಹೆಮ್ಮೆ ಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅಜರುದ್ದೀನ್ ಅವರ ಬ್ಯಾಟಿಂಗ್ ರೇಸಿಂಗ್‌ನ ವಿಡಿಯೊ ತುಣುಕುಗಳೊಂದಿಗೆ, ಭಾರತ ಕ್ರಿಕೆಟ್ ವಲಯಗಳು ಮತ್ತೆ ಹಳೆಯ ‘ಅಜರ್’ ಅವರನ್ನು ನೆನಪಿಸಿಕೊಂಡಿವೆ. ಬಿಗ್ ಶಾಟ್ ವೀರ ವೀರೇಂದ್ರ ಸೆಹ್ವಾಗ್, “ವಾಹ್ ಅಜರುದ್ದೀನ್, ಬೆಹ್ತರೀನ್!. ನಿನ್ನ ಆಟವನ್ನು ಆನಂದಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಲಿಷ್ಠ ಬೌಲರ್‌ಗಳ ಬೆವರಿಳಿಸಿದ

ಮುಂಬೈ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಹಿಂದೆ ಭಾರತ ತಂಡಕ್ಕೆ ಆಡಿದ್ದ ವೇಗಿ ಧವನ್ ಕುಲಕರ್ಣಿ ಮತ್ತು 2020ರ ಟ್ವೆಂಟಿ-20ಯಲ್ಲಿ ಮಿಂಚಿದ ತುಷಾರ್ ದೇಶಪಾಂಡೆ ಎಸೆತಗಳನ್ನು ಹಿಗ್ಗಾಮುಗ್ಗಾ ಬಾರಿಸಿದ ಅಜರ್, ಅವರನ್ನು ಬೌಂಡರಿ ಲೈನಿನಾಚೆಗೆ ದೂಕಿಬಿಟ್ಟ.

ಭಾರತ ತಂಡಕ್ಕೆ ಆಡಿದ್ದ ವೇಗಿ ಮತ್ತು ಸದ್ಯ ಕೇರಳ ತಂಡದ ಕೋಚ್ ಆಗಿರುವ ಟಿನು ಯೊಹಾನ್ನನ್, ‘ಅವನಿಂದ ಅಂತಹ ಒಂದು ಆಟವನ್ನು ನಿರೀಕ್ಷೆ ಮಾಡಿದ್ದೆ. ಆದರೆ ಅದು ಈ ಪ್ರಮಾಣದಲ್ಲಿ ಎಂದು ಊಹೆ ಕೂಡ ಮಾಡಿರಲಿಲ್ಲ. ಅಜರ್‌ನ ಸ್ಕ್ವೇರ್ ಲೆಗ್ ಶಾಟ್‌ಗಳಿಗಿಂತ ಅವನ ಪಿಕ್-ಅಪ್ ಶಾಟ್‌ಗಳು ನನಗೆ ಇಷ್ಟ. ಇಂತಹ ಆಟ ನೋಡುವುದೇ ಸೊಬಗು. ಆದರೆ ಬೌಲರ್‌ಗಳ ಪಾಲಿಗೆ ಇದು ನರಕ. ಅವರು ಶಾರ್ಟ್ ಆಫ್ ಲೆಂಥ್ ಎಸೆದರೆ ಇವನು ಸೀದಾ ಬೌಂಡರಿಯಾಚೆ ಚೆಂಡನ್ನು ಅಟ್ಟಿದಾಗ ಅದು ಬೌಲರ್‌ಗಳ ನೈತಿಕ ಶಕ್ತಿಯನ್ನೇ ಕಸಿದು ಬಿಟ್ಟಿತ್ತು’ ಎಂದಿದ್ದಾರೆ.

ರಣಜಿ, ಮುಷ್ತಾಕ್ ಅಲಿ ಮುಂತಾದ ದೇಸಿ ಚಾಂಪಿಯನ್‌ಶಿಪ್‌ಗಳಲ್ಲಿ ಕೇರಳ ಬೇಗ ನಿರ್ಗಮಿಸುವುದರಿಂದ ಅಜರ್‌ಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆದರೆ ಸಿಕ್ಕ ಅವಕಾಶವನ್ನು ಈ ಸಲ ಆತ ಸಮರ್ಥವಾಗಿ ಬಳಸಿಕೊಂಡಿದ್ದಾನೆ. ‘ಮತ್ತೊಬ್ಬ ಅಜರ್’ಗಾಗಿ ಕಾಯೋಣ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...