Homeಸಿನಿಮಾಕ್ರೀಡೆ37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ಸದ್ಯ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಸಿ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಕ್ರಿಕೆಟ್‌ಗೆ ಅಷ್ಟೇನೂ ಹೆಸರುವಾಸಿಯಲ್ಲದ ಕೇರಳ ತಂಡದ ‘ಅಜರ್’ ರನ್‌ಗಳ ಧಮಾಕಾ ಸೃಷ್ಟಿಸಿದ್ದಾನೆ.

- Advertisement -
- Advertisement -

ಅದು ಬಲಿಷ್ಠ ಮುಂಬೈ ತಂಡ. ಇವನು ಅಶಕ್ತ ಕೇರಳ ತಂಡದವನು. 54 ಎಸೆತಗಳಲ್ಲಿ ಈ ಯುವಕ 137 ರನ್ ಚಚ್ಚಿದ್ದಾನೆ. 100 ರನ್ ತಲುಪಲು ಆತನಿಗೆ ಕೇವಲ 37 ಎಸೆತ ಸಾಕಾಯಿತು. ಟ್ವೆಂಟಿ-20ಯಲ್ಲಿ ಭಾರತೀಯನೊಬ್ಬ ಗಳಿಸಿದ ವೇಗದ ಸೆಂಚುರಿಯಲ್ಲಿ ಇದೀಗ ಇದು ಮೂರನೆ ಸ್ಥಾನದಲ್ಲಿದೆ. ಹಿಂದೆ ರಿಷಬ್ ಪಂತ್ 32 ಎಸೆತಗಳಲ್ಲಿ ಮತ್ತು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್-ಕ್ರೇಜಿ ಹಿರಿಯ ಸಹೋದರ ಈ ಹುಡುಗನಿಗೆ ಹೆಚ್ಚಿನ ವೃತ್ತಿಜೀವನದ ಆಯ್ಕೆಯನ್ನು ನೀಡಲಿಲ್ಲ. ಅವನ ಹೆಸರನ್ನು ಅಜ್ಮಲ್‌ನಿಂದ ಮೊಹಮ್ಮದ್ ಅಜರುದ್ದೀನ್ ಎಂದು ಬದಲಾಯಿಸಿ ಕ್ರಿಕೆಟ್ ಅಂಗಳಕ್ಕೆ ದಬ್ಬಿಬಿಟ್ಟ!
ಇದಲ್ಲದೆ, ಈ ಅಜರ್ ಕಾಸರಗೋಡಿನ ಹೊರವಲಯದಲ್ಲಿರುವ ಕೇರಳದ ಅಪರೂಪದ ಪಟ್ಟಣವಾದ ತಲಂಗರಾದಿಂದ ಬಂದವನು. ಅಲ್ಲಿ ಮಕ್ಕಳು ಚೆಂಡನ್ನು ಬ್ಯಾಟ್‌ನಿಂದ ಹೊಡೆಯಲು ಬಯಸುತ್ತಾರೆ ಹೊರತು, ಅದನ್ನು ಕಿಕ್ ಮಾಡಲು ಅಲ್ಲ. ಕೇರಳದಲ್ಲಿ ಫುಟ್‌ಬಾಲ್ ಹೆಚ್ಚು ಜನಪ್ರಿಯ ಎಂಬುದನ್ನು ಗಮನಿಸಿ.

26ರ ಹರೆಯದ ಯುವಕ ಅಜರ್, ಭಾರತೀಯ ಬ್ಯಾಟಿಂಗ್ ಶ್ರೇಷ್ಠ ಮೊಹಮ್ಮದ್ ಅಜರುದ್ದೀನ್ ಅವರ “ಅಜೀವ ಅಭಿಮಾನಿ”ಯಾದ ತನ್ನ ಹಿರಿಯ ಸಹೋದರ ಕಮರುದ್ದೀನ್ ನಿರೀಕ್ಷೆಗೆ ತಕ್ಕಂತೆ ಏನಾದರೂ ವಿಶೇಷವಾದ ಕೆಲಸವನ್ನು ಮಾಡಬೇಕೆಂದು ನಿರ್ಧರಿಸಿದ್ದ. ತಲಂಗರಾ ಪಟ್ಟಣ ಕೂಡ ಅವರ “ನೆಕ್ಸ್ಟ್ ಅಜರ್”ನಿಂದ ಹೆಚ್ಚಿನ ಸಾಧನೆ ನಿರೀಕ್ಷಿಸಿತ್ತು.

ಮೊನ್ನೆ ಬುಧವಾರ, ಅಜರ್ ತನ್ನ ಏಳು ಸಹೋದರರು, ತನ್ನ ಸ್ವಂತೂರು ಮತ್ತು ಇಡೀ ರಾಜ್ಯ ಹೆಮ್ಮೆಪಡುವ ಆಟ ಆಡಿಬಿಟ್ಟ. ಈ ಎರಡು ದಶಕಗಳಲ್ಲಿ ಶ್ರೀಶಾಂತ್ ಬಿಟ್ಟರೆ ಕೇರಳದ ಕ್ರಿಕೆಟಿಗರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದು ಕಡಿಮೆಯೇ. ಆರ್‌ಸಿಬಿ ತಂಡಕ್ಕೆ ಆಡುವ ದೇವದತ್ತ ಪಡಿಕ್ಕಲ್ ಮೂಲತಃ ಕೇರಳದ ಹುಡುಗ. ದಶಕದಿಂದ ಬೆಂಗಳೂರು ನಿವಾಸಿಯಾಗಿರುವ ದೇವದತ್ತ ಈಗ ಟ್ವೆಂಟಿ-20 ಮಾದರಿಯಲ್ಲಿ ಗಮನ ಸೆಳೆಯುತ್ತಿರುವ ಪ್ರತಿಭೆ.

ಮುಂಬೈ ವಿರುದ್ಧ 54 ಎಸೆತಗಳಲ್ಲಿ 137 ರನ್ ಗಳಿಸಿದ ಅಜರುದ್ದೀನ್ ಅಲಿಯಾಸ್ ಅಜ್ಮಲ್, ಶತಕ ಗಳಿಸಲು 37 ಎಸೆತ ತೆಗೆದುಕೊಂಡ. ರಿಷಭ್ ಪಂತ್ (32 ಎಸೆತಗಳು) ಮತ್ತು ರೋಹಿತ್ ಶರ್ಮಾ (35 ಎಸೆತಗಳು) ನಂತರ ಭಾರತೀಯರು ಮಾಡಿದ ಮೂರನೇ ಅತಿ ವೇಗದ ಟ್ವೆಂಟಿ-20 ಶತಕ ಇದು.

“ನಾವು ಮಾತ್ರವಲ್ಲ, ಇಡೀ ತಲಂಗರಾದ ಜನ ಅವತ್ತು ಟಿವಿಗೆ ಅಂಟಿಕೊಂಡಿದ್ದರು” ಎಂದು ಹಿರಿಯ ಸಹೋದರ ಕಮರುದ್ದೀನ್ ಹೆಮ್ಮೆ ಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅಜರುದ್ದೀನ್ ಅವರ ಬ್ಯಾಟಿಂಗ್ ರೇಸಿಂಗ್‌ನ ವಿಡಿಯೊ ತುಣುಕುಗಳೊಂದಿಗೆ, ಭಾರತ ಕ್ರಿಕೆಟ್ ವಲಯಗಳು ಮತ್ತೆ ಹಳೆಯ ‘ಅಜರ್’ ಅವರನ್ನು ನೆನಪಿಸಿಕೊಂಡಿವೆ. ಬಿಗ್ ಶಾಟ್ ವೀರ ವೀರೇಂದ್ರ ಸೆಹ್ವಾಗ್, “ವಾಹ್ ಅಜರುದ್ದೀನ್, ಬೆಹ್ತರೀನ್!. ನಿನ್ನ ಆಟವನ್ನು ಆನಂದಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಲಿಷ್ಠ ಬೌಲರ್‌ಗಳ ಬೆವರಿಳಿಸಿದ

ಮುಂಬೈ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಹಿಂದೆ ಭಾರತ ತಂಡಕ್ಕೆ ಆಡಿದ್ದ ವೇಗಿ ಧವನ್ ಕುಲಕರ್ಣಿ ಮತ್ತು 2020ರ ಟ್ವೆಂಟಿ-20ಯಲ್ಲಿ ಮಿಂಚಿದ ತುಷಾರ್ ದೇಶಪಾಂಡೆ ಎಸೆತಗಳನ್ನು ಹಿಗ್ಗಾಮುಗ್ಗಾ ಬಾರಿಸಿದ ಅಜರ್, ಅವರನ್ನು ಬೌಂಡರಿ ಲೈನಿನಾಚೆಗೆ ದೂಕಿಬಿಟ್ಟ.

ಭಾರತ ತಂಡಕ್ಕೆ ಆಡಿದ್ದ ವೇಗಿ ಮತ್ತು ಸದ್ಯ ಕೇರಳ ತಂಡದ ಕೋಚ್ ಆಗಿರುವ ಟಿನು ಯೊಹಾನ್ನನ್, ‘ಅವನಿಂದ ಅಂತಹ ಒಂದು ಆಟವನ್ನು ನಿರೀಕ್ಷೆ ಮಾಡಿದ್ದೆ. ಆದರೆ ಅದು ಈ ಪ್ರಮಾಣದಲ್ಲಿ ಎಂದು ಊಹೆ ಕೂಡ ಮಾಡಿರಲಿಲ್ಲ. ಅಜರ್‌ನ ಸ್ಕ್ವೇರ್ ಲೆಗ್ ಶಾಟ್‌ಗಳಿಗಿಂತ ಅವನ ಪಿಕ್-ಅಪ್ ಶಾಟ್‌ಗಳು ನನಗೆ ಇಷ್ಟ. ಇಂತಹ ಆಟ ನೋಡುವುದೇ ಸೊಬಗು. ಆದರೆ ಬೌಲರ್‌ಗಳ ಪಾಲಿಗೆ ಇದು ನರಕ. ಅವರು ಶಾರ್ಟ್ ಆಫ್ ಲೆಂಥ್ ಎಸೆದರೆ ಇವನು ಸೀದಾ ಬೌಂಡರಿಯಾಚೆ ಚೆಂಡನ್ನು ಅಟ್ಟಿದಾಗ ಅದು ಬೌಲರ್‌ಗಳ ನೈತಿಕ ಶಕ್ತಿಯನ್ನೇ ಕಸಿದು ಬಿಟ್ಟಿತ್ತು’ ಎಂದಿದ್ದಾರೆ.

ರಣಜಿ, ಮುಷ್ತಾಕ್ ಅಲಿ ಮುಂತಾದ ದೇಸಿ ಚಾಂಪಿಯನ್‌ಶಿಪ್‌ಗಳಲ್ಲಿ ಕೇರಳ ಬೇಗ ನಿರ್ಗಮಿಸುವುದರಿಂದ ಅಜರ್‌ಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆದರೆ ಸಿಕ್ಕ ಅವಕಾಶವನ್ನು ಈ ಸಲ ಆತ ಸಮರ್ಥವಾಗಿ ಬಳಸಿಕೊಂಡಿದ್ದಾನೆ. ‘ಮತ್ತೊಬ್ಬ ಅಜರ್’ಗಾಗಿ ಕಾಯೋಣ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...