Homeಮುಖಪುಟಜೂ.1ರಿಂದ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಣೆ

ಜೂ.1ರಿಂದ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಣೆ

- Advertisement -
- Advertisement -

ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದಾರೆ.

ಈಗ ಇರುವ ಹಣದುಬ್ಬರ ಪರಿಹಾರ ಶಿಬಿರಗಳನ್ನು ನೋಡಿಕೊಂಡು ಸಾರ್ವಜನಿಕರೊಂದಿಗೆ ಮಾತನಾಡಿದ ಸಿಎಂ ಗೆಹ್ಲೋಟ್ ಅವರು ವಿದ್ಯುತ್ ಬಿಲ್ ನಲ್ಲಿ ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮೇ ತಿಂಗಳಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಈಗ ಹೊಸ ನಿಯಮಗಳ ಪ್ರಕಾರ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. ಅವರು ಮುಂಗಡವಾಗಿ ಯಾವುದೇ ಬಿಲ್ ಪಾವತಿಸಬೇಕಾಗಿಲ್ಲ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬಗಳು ಅವರು 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚಿಗೆ ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ..

ಇದನ್ನೂ ಓದಿ: ವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; ‘ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ’: ರಾಜ್ಯದ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕೆಲವು ಕುಟುಂಬಗಳು ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುತ್ತವೆ ಅಂತಹ ಕುಟುಂಬಗಳಿಗೂ ಈ ರಿಯಾಯಿತಿ ನೀಡಲಾಗಿದೆ. ಇದರಲ್ಲಿ, ಮೊದಲ 100 ಯುನಿಟ್‌ಗಳು ಉಚಿತವಾಗಿರುತ್ತದೆ. ಆದರೆ ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ.

ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್‌ನಿಂದ ಜನರ ಮನಗೆಲ್ಲಲು ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ವಿದ್ಯುತ್​ ಅನ್ನು ಎಷ್ಟೇ ಬಳಕೆ ಮಾಡಿದರೂ, ಬಳಕೆದಾರರು ಮೊದಲ 100 ಯೂನಿಟ್‌ಗಳಿಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...