Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...