Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...