Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...