Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...