Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...