Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...