Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...