Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...