Homeಚಳವಳಿಸೂರಿಗಾಗಿ ಕೋಟಿ ಹೆಜ್ಜೆ : ನೆಲೆ - ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ...

ಸೂರಿಗಾಗಿ ಕೋಟಿ ಹೆಜ್ಜೆ : ನೆಲೆ – ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ…

ಬಿ.ಶ್ರೀರಾಮುಲು ತನ್ನ ಮಗಳ ಅದ್ದೂರಿ ಮದುವೆಗಾಗಿ 500ಕೋಟಿ ಖರ್ಚು ಮಾಡುವ ಬದಲು ಅವರ ಮೊಳಕಾಲ್ಮೂರು ಕ್ಷೇತ್ರದಲ್ಲಿ 10000 ಕುಟುಂಬಗಳಿಗೆ ಮನೆ ಕಟ್ಟಿಸಿಕೊಡಬಹುದು - ಸಾತಿ ಸುಂದರೇಶ್‌.

- Advertisement -
- Advertisement -

ಕರ್ನಾಟಕ ಭಾರತದಲ್ಲಿಯೇ ಮುಂದುವರಿದ, ಅಭಿವೃದ್ಧಿ ಹೊಂದಿದ್ದ ರಾಜ್ಯಗಳಲ್ಲೊಂದು. ಕೇಂದ್ರ ಹೆಚ್ಚಿನ ತೆರಿಗೆ ಕಟ್ಟುವ, ಹತ್ತಾರು ನದಿಗಳಿರುವ, ಸಂಪಧ್ಭರಿತ ರಾಜ್ಯ. ಆದರೆ ಇಂತಹ ರಾಜ್ಯದಲ್ಲಿಯೂ ಸಹ ಗಾಳಿ, ಮಳೆ, ಬಿಸಿಲಿನಿಂದ ಪಾರಾಗಲು ನೆಲೆ ಇಲ್ಲದೇ ಲಕ್ಷಾಂತರ ಜನರು ಬೀದಿಯಲ್ಲಿದ್ದಾರೆ ಎಂಬುದೂ ಸಹ ವಾಸ್ತವ.

ಉಳುವವನೆ ಭೂ ಓಡೆಯ ನಂತಹ ಕಾಯ್ದೆಗಳ ಹೊರತಾಗಿಯೂ ಕೂಡ ಎಲ್ಲಾ ಕುಟುಂಬಗಳಿಗೂ ಭೂಮಿಯಿರಲಿ, ಕನಿಷ್ಟ ಸೂರು ಕೂಡ ಇಲ್ಲದೇ ಸಾವಿರಾರು ಕುಟುಂಬಗಳು ಬದುಕು ಸವೆಸುತ್ತಿರುವುದು ನಮ್ಮ ಅಭಿವೃದ್ದಿ ಮಾದರಿ ಯಾರ ಪರ ಎಂಬುದನ್ನು ತೋರಿಸುತ್ತದೆ.

ಇಂತಹ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತುಂಡು ಭೂಮಿ, ಒಂದು ಮನೆ ಇರಬೇಕೆಂದು ಒತ್ತಾಯಿಸಿ ಹಲವು ಭೂ-ವಸತಿ ಹೋರಾಟಗಳು ನಡೆದಿವೆ. ದೊಡ್ಡ ದೊಡ್ಡ ಸಂಘರ್ಷಗಳು ಏರ್ಪಟ್ಟಿವೆ. ಆದರೆ ಯಾವ ಸರ್ಕಾರಗಳೂ ಸಹ ಬಡಜನರ ಕೂಗಿಗೆ ಸ್ಪಂದಿಸಿಲ್ಲ. ಹಾಗಂತ ಹೋರಾಟ ಮಾತ್ರ ನಿಂತಿಲ್ಲ. ಈ ಚಳವಳಿಗಳ ಕಾರಣದಿಂದಾಗಿ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಜನರಿಗೆ ಭೂಮಿ, ವಸತಿ, ಹಕ್ಕು ಪತ್ರಗಳು ಸಿಕ್ಕಿವೆ.

ಈಗ ರಾಜ್ಯದ ಎಲ್ಲಾ ನಾಗರಿಕರ ವಸತಿ ಹಕ್ಕಿಗಾಗಿ ಒತ್ತಾಯಿಸಿ ಭಾರತೀಯ ಕಮ್ಯುನಿಸ್ಟ್‌ ಪಕ್ಷದ(CPI) ನೇತೃತ್ವದಲ್ಲಿ “ಸೂರಿಗಾಗಿ ಕೋಟಿ ಹೆಜ್ಜೆ” ಎಂಬ ಬೃಹತ್‌ ಕಾಲ್ನಡಿಗೆ ಜಾಥಾದ ಹೋರಾಟ ಆರಂಭವಾಗಿದೆ. ಬಳ್ಳಾರಿಯಿಂದ ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಮಾರ್ಗವಾಗಿ ಬೆಂಗಳೂರಿನವರೆಗೂ ಕನಿಷ್ಠ ಒಂದು ಸಾವಿರ ಕಿ.ಮೀ ನಡೆದು ಬರುವ ವಿಶಿಷ್ಠ ಹೋರಾಟ ನಡೆಯುತ್ತಿದೆ. ಫೆ.02ರಂದು ಬಳ್ಳಾರಿಯಲ್ಲಿ ಆರಂಭಗೊಂಡ ಜಾಥವು ಯಶಸ್ವಿಯಾಗಿ ದಾವಣಗೆರೆ ಜಿಲ್ಲೆ ದಾಟಿ ಚಿತ್ರದುರ್ಗವನ್ನು ತಲುಪಿದೆ.

ಜಾಥಾದ ವಿಡಿಯೋ ನೋಡಿ

ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ

ವಸತಿ-ನಿವೇಶನ ರಹಿತರಿಗೆ ವಸತಿ ಹಕ್ಕಿಗಾಗಿ ಆಗ್ರಹಿಸಿ "ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ" ಬಳ್ಳಾರಿಯಿಂದ ಆರಂಭಗೊಂಡಿದ್ದು ಚಿತ್ರದುರ್ಗ ತಲುಪಿದೆ…

Posted by Naanu Gauri on Thursday, March 12, 2020

ಪಕ್ಷದ ಮುಖಂಡರು, ಕಾರ್ಯಕರ್ತರು, ಜನರು ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾದಯಾತ್ರೆಯ ಪ್ರತಿ ಊರಿನಲ್ಲಿಯೂ ಸಹ ಜಾಗೃತಿ, ಬಹಿರಂಗ ಕಾರ್ಯಕ್ರಮಗಳು ನಡೆಯುತ್ತಿವೆ. ವಸತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ.ಸಿ ಚಂದ್ರಶೇಖರ್ ಡೋಂಗ್ರೆ, ಕಾರ್ಯದರ್ಶಿ ಸಿ. ಧರ್ಮರಾಜ, ಡಾ.ಕೆ.ಎಸ್‌ ಜನಾರ್ದನ್, ಎ.ಎಸ್‌ ಮೋನಪ್ಪ, ಪ್ರಸನ್ನಕುಮಾರ್, ಎಎಸ್‌ಎಫ್‌ಐ ಜ್ಯೋತಿ ಕೆ, ವಿಠಲ ಗಜಾಪುರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಕಾಲಜಾಥದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

“ಸೂರಿಗಾಗಿ ಸಮರ ಹೋರಾಟ ಆರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಒಂದು ಸಾವಿರ ಕಿ.ಮೀ ನಡೆಯುವ ಈ ಕಾಲ್ನಡಿಗೆ ಜಾಥ 60 ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಪ್ರತಿಯೊಬ್ಬ ಸಂಗಾತಿಯು ಕನಿಷ್ಠ ಒಂಟು ಕೋಟಿ, ನಲವತ್ತು ಲಕ್ಷ ಹೆಜ್ಜೆಗಳನ್ನು ಹಾಕಲಿದ್ದಾರೆ. ಈಗಾಗಲೇ 500 ಕಿ.ಮೀ ಕ್ರಮಿಸಿ ಹಲವು ತಾಲ್ಲೂಕುಗಳನ್ನು ದಾಟಿ ಬಂದಿದ್ದೇವೆ. ಒಂದು ಮನೆಯಲ್ಲಿ ಹಲವಾರು ಕುಟುಂಬಗಳು, ಅರ್ಜಿ ಸಲ್ಲಿಸಲೂ ಗೊತ್ತಿಲ್ಲದ ಕುಟುಂಬಗಳು ವಾಸಿಸುತ್ತಿವೆ. ಪರಿಶಿಷ್ಠ ಜಾತಿ, ವರ್ಗದ ನಿರಾಶ್ರಿತರೇ ಹೆಚ್ಚಿರುವುದು ಕಂಡುಬಂದಿದೆ ಇವೆರೆಲ್ಲರ ಪರವಾಗಿ ದನಿಯೆತ್ತುವುದು ನಮ್ಮ ಕರ್ತವ್ಯವಾಗಿದೆ ಎನ್ನುತ್ತಾರೆ ಹೋರಾಟದ ನೇತೃತ್ವ ವಹಿಸಿರುವ ಸಾತಿ ಸುಂದರೇಶ್‌‌ರವರು.

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ಬಡತನವಿದೆ. ಅಲ್ಲಿನ ಶಾಸಕ ಬಿ.ಶ್ರೀರಾಮುಲುರವರು ಸಚಿವರಾಗಿದ್ದಾರೆ. ನಾನು ವಾಲ್ಮೀಕಿ ಸಮುದಾಯದ ದೊಡ್ಡ ನಾಯಕ ಎಂದು ಹೇಳುವ ಶ್ರೀರಾಮುಲುರವರು ತಮ್ಮ ಮಗಳ ಮದುವೆಗೆ ಕನಿಷ್ಠ 500ಕೋಟಿ ರೂ ಖರ್ಚು ಮಾಡುತ್ತಿದ್ದಾರೆ. ಅದೇ ದುಡ್ಡನ್ನು ಉಳಿಸಿ ತಲಾ 5 ಲಕ್ಷ ರೂಗಳಿಗೆ ಒಂದರಂತೆ ಮನೆ ಕಟ್ಟಿಕೊಟ್ಟಿದ್ದರೆ ಆ ಕ್ಷೇತ್ರದಲ್ಲಿ ಕನಿ‌ಷ್ಟ 10000 ಕುಟುಂಬಗಳಿಗೆ ನೆಲೆ ಸಿಗುತ್ತಿತ್ತು. ಈ ದೇಶದ ನೆಲ ಜಲವನ್ನು ಲೂಟಿ ಮಾಡುತ್ತಿರುವವರು ಐಷರಾಮಿ ಜೀವನ ನಡೆಸುತ್ತಿದ್ದರೆ ಜನತೆ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಇದು ರಾಜಕೀಯ ಹೋರಾಟವಾಗಲಿದೆ ಎಂದು ಸಾತಿ ಸುಂದರೇಶ್‌ ತಿಳಿಸಿದ್ದಾರೆ.

ಹಕ್ಕೊತ್ತಾಯಗಳೇನು

ನಿವೇಶನಕ್ಕಾಗಿ ಕಾದಿರಿಸಿದ ಒತ್ತುವರಿಯಾದ ಕಂದಾಯ ಭೂಮಿಯನ್ನು ಕೂಡಲೇ ಸರ್ಕಾರ ವಶಪಡಿಸಿಕೊಂಡು ಬಡಜನರಿಗೆ ನಿವೇಶನಗಳನ್ನು ಹಂಚಬೇಕು.

ಸರ್ಕಾರ ಕಂದಾಯ ಭೂಮಿಯನ್ನು ನಿವೇಶನಕ್ಕಾಗಿ ಮಂಜೂರು ಮಾಡಬೇಕು.

ಒಂದು ವೇಳೆ ಸರ್ಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ, ಸರ್ಕಾರವು ಭೂಮಿಯ ಮಾರುಕಟ್ಟೆ ದರಕ್ಕನುಗುಣವಾಗಿ ಅನುದಾನ ಬಿಡುಗಡೆ ಮಾಡಿ, ನಿವೇಶನಕ್ಕಾಗಿ ಖಾಸಗಿ ಭೂಮಿ ಖರೀದಿಗೆ ಮುಂದಾಗಬೇಕು.

ಈ ರೀತಿ ಖಾಸಗಿ ಜಮೀನಿನ ಖರೀದಿ ಸಾಧ್ಯವಾಗಿದಿದ್ದ ಪಕ್ಷದಲ್ಲಿ, ಮನೆ ನಿವೇಶನಗಳ ಹಂಚಿಕೆಗಾಗಿ 1972ರ ವಸತಿ ನಿವೇಶನಗಳ ಮಂಜೂರಾತಿಗಾಗಿ ಕರ್ನಾಟಕ ಭೂ ಸ್ವಾಧೀನ ಕಾಯ್ದೆ (1973ರ ಕರ್ನಾಟಕ ಕಾಯ್ದೆ 18)ರ ಪ್ರಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು.

5 ಎಕರೆಗಿಂತ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದನ್ನು ಖುಲ್ಲಾ ಮಾಡಿಸಿ, ಅದನ್ನು ನಿವೇಶನರಹಿತರಿಗೆ ಮತ್ತು ಭೂರಹಿತರಿಗೆ ಹಂಚಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ವಸತಿ ಯೋಜಣಿಗಳ ಸಹಾಯಧನವನ್ನು 5 ಲಕ್ಷ ರೂಗಳಿಗೆ ಹಚ್ಚಿಸಬೇಕು.

ಏಪ್ರಿಲ್‌ ಮೊದಲ ವಾರದಲ್ಲಿ ಕಾಲ್ನಡಿಗೆ ಜಾಥವು ಬೆಂಗಳೂರು ತಲುಪಲಿದ್ದು ಸರ್ಕಾರಗಳ ಗಮನ ಸೆಳೆಯಲು ಬೃಹತ್‌ ಬಹಿರಂಗ ಸಮಾವೇಶ ನಡೆಯುವ ಸಾಧ್ಯತೆಯಿದೆ. ಈ ಮೂಲಕ ಭೂಮಿ ಮತ್ತು ವಸತಿ ಹೋರಾಟಕ್ಕೆ ಮತ್ತಷ್ಟು ಜೀವ ತಂದು ಕೊಡುವ ಕೆಲಸವನ್ನು ಸಿಪಿಐ ಮಾಡುತ್ತಿದೆ. ಸರ್ಕಾರಗಳು ಈ ಹೋರಾಟಕ್ಕೆ ಹೇಗೆ ಸ್ಪಂದಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...