Homeಚಳವಳಿಸೂರಿಗಾಗಿ ಕೋಟಿ ಹೆಜ್ಜೆ : ನೆಲೆ - ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ...

ಸೂರಿಗಾಗಿ ಕೋಟಿ ಹೆಜ್ಜೆ : ನೆಲೆ – ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ…

ಬಿ.ಶ್ರೀರಾಮುಲು ತನ್ನ ಮಗಳ ಅದ್ದೂರಿ ಮದುವೆಗಾಗಿ 500ಕೋಟಿ ಖರ್ಚು ಮಾಡುವ ಬದಲು ಅವರ ಮೊಳಕಾಲ್ಮೂರು ಕ್ಷೇತ್ರದಲ್ಲಿ 10000 ಕುಟುಂಬಗಳಿಗೆ ಮನೆ ಕಟ್ಟಿಸಿಕೊಡಬಹುದು - ಸಾತಿ ಸುಂದರೇಶ್‌.

- Advertisement -
- Advertisement -

ಕರ್ನಾಟಕ ಭಾರತದಲ್ಲಿಯೇ ಮುಂದುವರಿದ, ಅಭಿವೃದ್ಧಿ ಹೊಂದಿದ್ದ ರಾಜ್ಯಗಳಲ್ಲೊಂದು. ಕೇಂದ್ರ ಹೆಚ್ಚಿನ ತೆರಿಗೆ ಕಟ್ಟುವ, ಹತ್ತಾರು ನದಿಗಳಿರುವ, ಸಂಪಧ್ಭರಿತ ರಾಜ್ಯ. ಆದರೆ ಇಂತಹ ರಾಜ್ಯದಲ್ಲಿಯೂ ಸಹ ಗಾಳಿ, ಮಳೆ, ಬಿಸಿಲಿನಿಂದ ಪಾರಾಗಲು ನೆಲೆ ಇಲ್ಲದೇ ಲಕ್ಷಾಂತರ ಜನರು ಬೀದಿಯಲ್ಲಿದ್ದಾರೆ ಎಂಬುದೂ ಸಹ ವಾಸ್ತವ.

ಉಳುವವನೆ ಭೂ ಓಡೆಯ ನಂತಹ ಕಾಯ್ದೆಗಳ ಹೊರತಾಗಿಯೂ ಕೂಡ ಎಲ್ಲಾ ಕುಟುಂಬಗಳಿಗೂ ಭೂಮಿಯಿರಲಿ, ಕನಿಷ್ಟ ಸೂರು ಕೂಡ ಇಲ್ಲದೇ ಸಾವಿರಾರು ಕುಟುಂಬಗಳು ಬದುಕು ಸವೆಸುತ್ತಿರುವುದು ನಮ್ಮ ಅಭಿವೃದ್ದಿ ಮಾದರಿ ಯಾರ ಪರ ಎಂಬುದನ್ನು ತೋರಿಸುತ್ತದೆ.

ಇಂತಹ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತುಂಡು ಭೂಮಿ, ಒಂದು ಮನೆ ಇರಬೇಕೆಂದು ಒತ್ತಾಯಿಸಿ ಹಲವು ಭೂ-ವಸತಿ ಹೋರಾಟಗಳು ನಡೆದಿವೆ. ದೊಡ್ಡ ದೊಡ್ಡ ಸಂಘರ್ಷಗಳು ಏರ್ಪಟ್ಟಿವೆ. ಆದರೆ ಯಾವ ಸರ್ಕಾರಗಳೂ ಸಹ ಬಡಜನರ ಕೂಗಿಗೆ ಸ್ಪಂದಿಸಿಲ್ಲ. ಹಾಗಂತ ಹೋರಾಟ ಮಾತ್ರ ನಿಂತಿಲ್ಲ. ಈ ಚಳವಳಿಗಳ ಕಾರಣದಿಂದಾಗಿ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಜನರಿಗೆ ಭೂಮಿ, ವಸತಿ, ಹಕ್ಕು ಪತ್ರಗಳು ಸಿಕ್ಕಿವೆ.

ಈಗ ರಾಜ್ಯದ ಎಲ್ಲಾ ನಾಗರಿಕರ ವಸತಿ ಹಕ್ಕಿಗಾಗಿ ಒತ್ತಾಯಿಸಿ ಭಾರತೀಯ ಕಮ್ಯುನಿಸ್ಟ್‌ ಪಕ್ಷದ(CPI) ನೇತೃತ್ವದಲ್ಲಿ “ಸೂರಿಗಾಗಿ ಕೋಟಿ ಹೆಜ್ಜೆ” ಎಂಬ ಬೃಹತ್‌ ಕಾಲ್ನಡಿಗೆ ಜಾಥಾದ ಹೋರಾಟ ಆರಂಭವಾಗಿದೆ. ಬಳ್ಳಾರಿಯಿಂದ ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಮಾರ್ಗವಾಗಿ ಬೆಂಗಳೂರಿನವರೆಗೂ ಕನಿಷ್ಠ ಒಂದು ಸಾವಿರ ಕಿ.ಮೀ ನಡೆದು ಬರುವ ವಿಶಿಷ್ಠ ಹೋರಾಟ ನಡೆಯುತ್ತಿದೆ. ಫೆ.02ರಂದು ಬಳ್ಳಾರಿಯಲ್ಲಿ ಆರಂಭಗೊಂಡ ಜಾಥವು ಯಶಸ್ವಿಯಾಗಿ ದಾವಣಗೆರೆ ಜಿಲ್ಲೆ ದಾಟಿ ಚಿತ್ರದುರ್ಗವನ್ನು ತಲುಪಿದೆ.

ಜಾಥಾದ ವಿಡಿಯೋ ನೋಡಿ

ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ

ವಸತಿ-ನಿವೇಶನ ರಹಿತರಿಗೆ ವಸತಿ ಹಕ್ಕಿಗಾಗಿ ಆಗ್ರಹಿಸಿ "ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ" ಬಳ್ಳಾರಿಯಿಂದ ಆರಂಭಗೊಂಡಿದ್ದು ಚಿತ್ರದುರ್ಗ ತಲುಪಿದೆ…

Posted by Naanu Gauri on Thursday, March 12, 2020

ಪಕ್ಷದ ಮುಖಂಡರು, ಕಾರ್ಯಕರ್ತರು, ಜನರು ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾದಯಾತ್ರೆಯ ಪ್ರತಿ ಊರಿನಲ್ಲಿಯೂ ಸಹ ಜಾಗೃತಿ, ಬಹಿರಂಗ ಕಾರ್ಯಕ್ರಮಗಳು ನಡೆಯುತ್ತಿವೆ. ವಸತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ.ಸಿ ಚಂದ್ರಶೇಖರ್ ಡೋಂಗ್ರೆ, ಕಾರ್ಯದರ್ಶಿ ಸಿ. ಧರ್ಮರಾಜ, ಡಾ.ಕೆ.ಎಸ್‌ ಜನಾರ್ದನ್, ಎ.ಎಸ್‌ ಮೋನಪ್ಪ, ಪ್ರಸನ್ನಕುಮಾರ್, ಎಎಸ್‌ಎಫ್‌ಐ ಜ್ಯೋತಿ ಕೆ, ವಿಠಲ ಗಜಾಪುರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಕಾಲಜಾಥದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

“ಸೂರಿಗಾಗಿ ಸಮರ ಹೋರಾಟ ಆರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಒಂದು ಸಾವಿರ ಕಿ.ಮೀ ನಡೆಯುವ ಈ ಕಾಲ್ನಡಿಗೆ ಜಾಥ 60 ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಪ್ರತಿಯೊಬ್ಬ ಸಂಗಾತಿಯು ಕನಿಷ್ಠ ಒಂಟು ಕೋಟಿ, ನಲವತ್ತು ಲಕ್ಷ ಹೆಜ್ಜೆಗಳನ್ನು ಹಾಕಲಿದ್ದಾರೆ. ಈಗಾಗಲೇ 500 ಕಿ.ಮೀ ಕ್ರಮಿಸಿ ಹಲವು ತಾಲ್ಲೂಕುಗಳನ್ನು ದಾಟಿ ಬಂದಿದ್ದೇವೆ. ಒಂದು ಮನೆಯಲ್ಲಿ ಹಲವಾರು ಕುಟುಂಬಗಳು, ಅರ್ಜಿ ಸಲ್ಲಿಸಲೂ ಗೊತ್ತಿಲ್ಲದ ಕುಟುಂಬಗಳು ವಾಸಿಸುತ್ತಿವೆ. ಪರಿಶಿಷ್ಠ ಜಾತಿ, ವರ್ಗದ ನಿರಾಶ್ರಿತರೇ ಹೆಚ್ಚಿರುವುದು ಕಂಡುಬಂದಿದೆ ಇವೆರೆಲ್ಲರ ಪರವಾಗಿ ದನಿಯೆತ್ತುವುದು ನಮ್ಮ ಕರ್ತವ್ಯವಾಗಿದೆ ಎನ್ನುತ್ತಾರೆ ಹೋರಾಟದ ನೇತೃತ್ವ ವಹಿಸಿರುವ ಸಾತಿ ಸುಂದರೇಶ್‌‌ರವರು.

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ಬಡತನವಿದೆ. ಅಲ್ಲಿನ ಶಾಸಕ ಬಿ.ಶ್ರೀರಾಮುಲುರವರು ಸಚಿವರಾಗಿದ್ದಾರೆ. ನಾನು ವಾಲ್ಮೀಕಿ ಸಮುದಾಯದ ದೊಡ್ಡ ನಾಯಕ ಎಂದು ಹೇಳುವ ಶ್ರೀರಾಮುಲುರವರು ತಮ್ಮ ಮಗಳ ಮದುವೆಗೆ ಕನಿಷ್ಠ 500ಕೋಟಿ ರೂ ಖರ್ಚು ಮಾಡುತ್ತಿದ್ದಾರೆ. ಅದೇ ದುಡ್ಡನ್ನು ಉಳಿಸಿ ತಲಾ 5 ಲಕ್ಷ ರೂಗಳಿಗೆ ಒಂದರಂತೆ ಮನೆ ಕಟ್ಟಿಕೊಟ್ಟಿದ್ದರೆ ಆ ಕ್ಷೇತ್ರದಲ್ಲಿ ಕನಿ‌ಷ್ಟ 10000 ಕುಟುಂಬಗಳಿಗೆ ನೆಲೆ ಸಿಗುತ್ತಿತ್ತು. ಈ ದೇಶದ ನೆಲ ಜಲವನ್ನು ಲೂಟಿ ಮಾಡುತ್ತಿರುವವರು ಐಷರಾಮಿ ಜೀವನ ನಡೆಸುತ್ತಿದ್ದರೆ ಜನತೆ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಇದು ರಾಜಕೀಯ ಹೋರಾಟವಾಗಲಿದೆ ಎಂದು ಸಾತಿ ಸುಂದರೇಶ್‌ ತಿಳಿಸಿದ್ದಾರೆ.

ಹಕ್ಕೊತ್ತಾಯಗಳೇನು

ನಿವೇಶನಕ್ಕಾಗಿ ಕಾದಿರಿಸಿದ ಒತ್ತುವರಿಯಾದ ಕಂದಾಯ ಭೂಮಿಯನ್ನು ಕೂಡಲೇ ಸರ್ಕಾರ ವಶಪಡಿಸಿಕೊಂಡು ಬಡಜನರಿಗೆ ನಿವೇಶನಗಳನ್ನು ಹಂಚಬೇಕು.

ಸರ್ಕಾರ ಕಂದಾಯ ಭೂಮಿಯನ್ನು ನಿವೇಶನಕ್ಕಾಗಿ ಮಂಜೂರು ಮಾಡಬೇಕು.

ಒಂದು ವೇಳೆ ಸರ್ಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ, ಸರ್ಕಾರವು ಭೂಮಿಯ ಮಾರುಕಟ್ಟೆ ದರಕ್ಕನುಗುಣವಾಗಿ ಅನುದಾನ ಬಿಡುಗಡೆ ಮಾಡಿ, ನಿವೇಶನಕ್ಕಾಗಿ ಖಾಸಗಿ ಭೂಮಿ ಖರೀದಿಗೆ ಮುಂದಾಗಬೇಕು.

ಈ ರೀತಿ ಖಾಸಗಿ ಜಮೀನಿನ ಖರೀದಿ ಸಾಧ್ಯವಾಗಿದಿದ್ದ ಪಕ್ಷದಲ್ಲಿ, ಮನೆ ನಿವೇಶನಗಳ ಹಂಚಿಕೆಗಾಗಿ 1972ರ ವಸತಿ ನಿವೇಶನಗಳ ಮಂಜೂರಾತಿಗಾಗಿ ಕರ್ನಾಟಕ ಭೂ ಸ್ವಾಧೀನ ಕಾಯ್ದೆ (1973ರ ಕರ್ನಾಟಕ ಕಾಯ್ದೆ 18)ರ ಪ್ರಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು.

5 ಎಕರೆಗಿಂತ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದನ್ನು ಖುಲ್ಲಾ ಮಾಡಿಸಿ, ಅದನ್ನು ನಿವೇಶನರಹಿತರಿಗೆ ಮತ್ತು ಭೂರಹಿತರಿಗೆ ಹಂಚಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ವಸತಿ ಯೋಜಣಿಗಳ ಸಹಾಯಧನವನ್ನು 5 ಲಕ್ಷ ರೂಗಳಿಗೆ ಹಚ್ಚಿಸಬೇಕು.

ಏಪ್ರಿಲ್‌ ಮೊದಲ ವಾರದಲ್ಲಿ ಕಾಲ್ನಡಿಗೆ ಜಾಥವು ಬೆಂಗಳೂರು ತಲುಪಲಿದ್ದು ಸರ್ಕಾರಗಳ ಗಮನ ಸೆಳೆಯಲು ಬೃಹತ್‌ ಬಹಿರಂಗ ಸಮಾವೇಶ ನಡೆಯುವ ಸಾಧ್ಯತೆಯಿದೆ. ಈ ಮೂಲಕ ಭೂಮಿ ಮತ್ತು ವಸತಿ ಹೋರಾಟಕ್ಕೆ ಮತ್ತಷ್ಟು ಜೀವ ತಂದು ಕೊಡುವ ಕೆಲಸವನ್ನು ಸಿಪಿಐ ಮಾಡುತ್ತಿದೆ. ಸರ್ಕಾರಗಳು ಈ ಹೋರಾಟಕ್ಕೆ ಹೇಗೆ ಸ್ಪಂದಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...