Homeಚಳವಳಿಸೂರಿಗಾಗಿ ಕೋಟಿ ಹೆಜ್ಜೆ : ನೆಲೆ - ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ...

ಸೂರಿಗಾಗಿ ಕೋಟಿ ಹೆಜ್ಜೆ : ನೆಲೆ – ನಿವೇಶನಕ್ಕಾಗಿ ಬಡಜನರ ಬೃಹತ್‌ ಕಾಲ್ನಡಿಗೆ ಜಾಥ…

ಬಿ.ಶ್ರೀರಾಮುಲು ತನ್ನ ಮಗಳ ಅದ್ದೂರಿ ಮದುವೆಗಾಗಿ 500ಕೋಟಿ ಖರ್ಚು ಮಾಡುವ ಬದಲು ಅವರ ಮೊಳಕಾಲ್ಮೂರು ಕ್ಷೇತ್ರದಲ್ಲಿ 10000 ಕುಟುಂಬಗಳಿಗೆ ಮನೆ ಕಟ್ಟಿಸಿಕೊಡಬಹುದು - ಸಾತಿ ಸುಂದರೇಶ್‌.

- Advertisement -
- Advertisement -

ಕರ್ನಾಟಕ ಭಾರತದಲ್ಲಿಯೇ ಮುಂದುವರಿದ, ಅಭಿವೃದ್ಧಿ ಹೊಂದಿದ್ದ ರಾಜ್ಯಗಳಲ್ಲೊಂದು. ಕೇಂದ್ರ ಹೆಚ್ಚಿನ ತೆರಿಗೆ ಕಟ್ಟುವ, ಹತ್ತಾರು ನದಿಗಳಿರುವ, ಸಂಪಧ್ಭರಿತ ರಾಜ್ಯ. ಆದರೆ ಇಂತಹ ರಾಜ್ಯದಲ್ಲಿಯೂ ಸಹ ಗಾಳಿ, ಮಳೆ, ಬಿಸಿಲಿನಿಂದ ಪಾರಾಗಲು ನೆಲೆ ಇಲ್ಲದೇ ಲಕ್ಷಾಂತರ ಜನರು ಬೀದಿಯಲ್ಲಿದ್ದಾರೆ ಎಂಬುದೂ ಸಹ ವಾಸ್ತವ.

ಉಳುವವನೆ ಭೂ ಓಡೆಯ ನಂತಹ ಕಾಯ್ದೆಗಳ ಹೊರತಾಗಿಯೂ ಕೂಡ ಎಲ್ಲಾ ಕುಟುಂಬಗಳಿಗೂ ಭೂಮಿಯಿರಲಿ, ಕನಿಷ್ಟ ಸೂರು ಕೂಡ ಇಲ್ಲದೇ ಸಾವಿರಾರು ಕುಟುಂಬಗಳು ಬದುಕು ಸವೆಸುತ್ತಿರುವುದು ನಮ್ಮ ಅಭಿವೃದ್ದಿ ಮಾದರಿ ಯಾರ ಪರ ಎಂಬುದನ್ನು ತೋರಿಸುತ್ತದೆ.

ಇಂತಹ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ತುಂಡು ಭೂಮಿ, ಒಂದು ಮನೆ ಇರಬೇಕೆಂದು ಒತ್ತಾಯಿಸಿ ಹಲವು ಭೂ-ವಸತಿ ಹೋರಾಟಗಳು ನಡೆದಿವೆ. ದೊಡ್ಡ ದೊಡ್ಡ ಸಂಘರ್ಷಗಳು ಏರ್ಪಟ್ಟಿವೆ. ಆದರೆ ಯಾವ ಸರ್ಕಾರಗಳೂ ಸಹ ಬಡಜನರ ಕೂಗಿಗೆ ಸ್ಪಂದಿಸಿಲ್ಲ. ಹಾಗಂತ ಹೋರಾಟ ಮಾತ್ರ ನಿಂತಿಲ್ಲ. ಈ ಚಳವಳಿಗಳ ಕಾರಣದಿಂದಾಗಿ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಜನರಿಗೆ ಭೂಮಿ, ವಸತಿ, ಹಕ್ಕು ಪತ್ರಗಳು ಸಿಕ್ಕಿವೆ.

ಈಗ ರಾಜ್ಯದ ಎಲ್ಲಾ ನಾಗರಿಕರ ವಸತಿ ಹಕ್ಕಿಗಾಗಿ ಒತ್ತಾಯಿಸಿ ಭಾರತೀಯ ಕಮ್ಯುನಿಸ್ಟ್‌ ಪಕ್ಷದ(CPI) ನೇತೃತ್ವದಲ್ಲಿ “ಸೂರಿಗಾಗಿ ಕೋಟಿ ಹೆಜ್ಜೆ” ಎಂಬ ಬೃಹತ್‌ ಕಾಲ್ನಡಿಗೆ ಜಾಥಾದ ಹೋರಾಟ ಆರಂಭವಾಗಿದೆ. ಬಳ್ಳಾರಿಯಿಂದ ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಮಾರ್ಗವಾಗಿ ಬೆಂಗಳೂರಿನವರೆಗೂ ಕನಿಷ್ಠ ಒಂದು ಸಾವಿರ ಕಿ.ಮೀ ನಡೆದು ಬರುವ ವಿಶಿಷ್ಠ ಹೋರಾಟ ನಡೆಯುತ್ತಿದೆ. ಫೆ.02ರಂದು ಬಳ್ಳಾರಿಯಲ್ಲಿ ಆರಂಭಗೊಂಡ ಜಾಥವು ಯಶಸ್ವಿಯಾಗಿ ದಾವಣಗೆರೆ ಜಿಲ್ಲೆ ದಾಟಿ ಚಿತ್ರದುರ್ಗವನ್ನು ತಲುಪಿದೆ.

ಜಾಥಾದ ವಿಡಿಯೋ ನೋಡಿ

ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ

ವಸತಿ-ನಿವೇಶನ ರಹಿತರಿಗೆ ವಸತಿ ಹಕ್ಕಿಗಾಗಿ ಆಗ್ರಹಿಸಿ "ಸೂರಿಗಾಗಿ ಕೋಟಿ ಹೆಜ್ಜೆ – ಸಾವಿರ ಕಿ.ಮೀ ಪಾದಯಾತ್ರೆ" ಬಳ್ಳಾರಿಯಿಂದ ಆರಂಭಗೊಂಡಿದ್ದು ಚಿತ್ರದುರ್ಗ ತಲುಪಿದೆ…

Posted by Naanu Gauri on Thursday, March 12, 2020

ಪಕ್ಷದ ಮುಖಂಡರು, ಕಾರ್ಯಕರ್ತರು, ಜನರು ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾದಯಾತ್ರೆಯ ಪ್ರತಿ ಊರಿನಲ್ಲಿಯೂ ಸಹ ಜಾಗೃತಿ, ಬಹಿರಂಗ ಕಾರ್ಯಕ್ರಮಗಳು ನಡೆಯುತ್ತಿವೆ. ವಸತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ.ಸಿ ಚಂದ್ರಶೇಖರ್ ಡೋಂಗ್ರೆ, ಕಾರ್ಯದರ್ಶಿ ಸಿ. ಧರ್ಮರಾಜ, ಡಾ.ಕೆ.ಎಸ್‌ ಜನಾರ್ದನ್, ಎ.ಎಸ್‌ ಮೋನಪ್ಪ, ಪ್ರಸನ್ನಕುಮಾರ್, ಎಎಸ್‌ಎಫ್‌ಐ ಜ್ಯೋತಿ ಕೆ, ವಿಠಲ ಗಜಾಪುರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಕಾಲಜಾಥದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

“ಸೂರಿಗಾಗಿ ಸಮರ ಹೋರಾಟ ಆರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಒಂದು ಸಾವಿರ ಕಿ.ಮೀ ನಡೆಯುವ ಈ ಕಾಲ್ನಡಿಗೆ ಜಾಥ 60 ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಪ್ರತಿಯೊಬ್ಬ ಸಂಗಾತಿಯು ಕನಿಷ್ಠ ಒಂಟು ಕೋಟಿ, ನಲವತ್ತು ಲಕ್ಷ ಹೆಜ್ಜೆಗಳನ್ನು ಹಾಕಲಿದ್ದಾರೆ. ಈಗಾಗಲೇ 500 ಕಿ.ಮೀ ಕ್ರಮಿಸಿ ಹಲವು ತಾಲ್ಲೂಕುಗಳನ್ನು ದಾಟಿ ಬಂದಿದ್ದೇವೆ. ಒಂದು ಮನೆಯಲ್ಲಿ ಹಲವಾರು ಕುಟುಂಬಗಳು, ಅರ್ಜಿ ಸಲ್ಲಿಸಲೂ ಗೊತ್ತಿಲ್ಲದ ಕುಟುಂಬಗಳು ವಾಸಿಸುತ್ತಿವೆ. ಪರಿಶಿಷ್ಠ ಜಾತಿ, ವರ್ಗದ ನಿರಾಶ್ರಿತರೇ ಹೆಚ್ಚಿರುವುದು ಕಂಡುಬಂದಿದೆ ಇವೆರೆಲ್ಲರ ಪರವಾಗಿ ದನಿಯೆತ್ತುವುದು ನಮ್ಮ ಕರ್ತವ್ಯವಾಗಿದೆ ಎನ್ನುತ್ತಾರೆ ಹೋರಾಟದ ನೇತೃತ್ವ ವಹಿಸಿರುವ ಸಾತಿ ಸುಂದರೇಶ್‌‌ರವರು.

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ಬಡತನವಿದೆ. ಅಲ್ಲಿನ ಶಾಸಕ ಬಿ.ಶ್ರೀರಾಮುಲುರವರು ಸಚಿವರಾಗಿದ್ದಾರೆ. ನಾನು ವಾಲ್ಮೀಕಿ ಸಮುದಾಯದ ದೊಡ್ಡ ನಾಯಕ ಎಂದು ಹೇಳುವ ಶ್ರೀರಾಮುಲುರವರು ತಮ್ಮ ಮಗಳ ಮದುವೆಗೆ ಕನಿಷ್ಠ 500ಕೋಟಿ ರೂ ಖರ್ಚು ಮಾಡುತ್ತಿದ್ದಾರೆ. ಅದೇ ದುಡ್ಡನ್ನು ಉಳಿಸಿ ತಲಾ 5 ಲಕ್ಷ ರೂಗಳಿಗೆ ಒಂದರಂತೆ ಮನೆ ಕಟ್ಟಿಕೊಟ್ಟಿದ್ದರೆ ಆ ಕ್ಷೇತ್ರದಲ್ಲಿ ಕನಿ‌ಷ್ಟ 10000 ಕುಟುಂಬಗಳಿಗೆ ನೆಲೆ ಸಿಗುತ್ತಿತ್ತು. ಈ ದೇಶದ ನೆಲ ಜಲವನ್ನು ಲೂಟಿ ಮಾಡುತ್ತಿರುವವರು ಐಷರಾಮಿ ಜೀವನ ನಡೆಸುತ್ತಿದ್ದರೆ ಜನತೆ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಇದು ರಾಜಕೀಯ ಹೋರಾಟವಾಗಲಿದೆ ಎಂದು ಸಾತಿ ಸುಂದರೇಶ್‌ ತಿಳಿಸಿದ್ದಾರೆ.

ಹಕ್ಕೊತ್ತಾಯಗಳೇನು

ನಿವೇಶನಕ್ಕಾಗಿ ಕಾದಿರಿಸಿದ ಒತ್ತುವರಿಯಾದ ಕಂದಾಯ ಭೂಮಿಯನ್ನು ಕೂಡಲೇ ಸರ್ಕಾರ ವಶಪಡಿಸಿಕೊಂಡು ಬಡಜನರಿಗೆ ನಿವೇಶನಗಳನ್ನು ಹಂಚಬೇಕು.

ಸರ್ಕಾರ ಕಂದಾಯ ಭೂಮಿಯನ್ನು ನಿವೇಶನಕ್ಕಾಗಿ ಮಂಜೂರು ಮಾಡಬೇಕು.

ಒಂದು ವೇಳೆ ಸರ್ಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ, ಸರ್ಕಾರವು ಭೂಮಿಯ ಮಾರುಕಟ್ಟೆ ದರಕ್ಕನುಗುಣವಾಗಿ ಅನುದಾನ ಬಿಡುಗಡೆ ಮಾಡಿ, ನಿವೇಶನಕ್ಕಾಗಿ ಖಾಸಗಿ ಭೂಮಿ ಖರೀದಿಗೆ ಮುಂದಾಗಬೇಕು.

ಈ ರೀತಿ ಖಾಸಗಿ ಜಮೀನಿನ ಖರೀದಿ ಸಾಧ್ಯವಾಗಿದಿದ್ದ ಪಕ್ಷದಲ್ಲಿ, ಮನೆ ನಿವೇಶನಗಳ ಹಂಚಿಕೆಗಾಗಿ 1972ರ ವಸತಿ ನಿವೇಶನಗಳ ಮಂಜೂರಾತಿಗಾಗಿ ಕರ್ನಾಟಕ ಭೂ ಸ್ವಾಧೀನ ಕಾಯ್ದೆ (1973ರ ಕರ್ನಾಟಕ ಕಾಯ್ದೆ 18)ರ ಪ್ರಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು.

5 ಎಕರೆಗಿಂತ ಹೆಚ್ಚು ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದನ್ನು ಖುಲ್ಲಾ ಮಾಡಿಸಿ, ಅದನ್ನು ನಿವೇಶನರಹಿತರಿಗೆ ಮತ್ತು ಭೂರಹಿತರಿಗೆ ಹಂಚಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ವಸತಿ ಯೋಜಣಿಗಳ ಸಹಾಯಧನವನ್ನು 5 ಲಕ್ಷ ರೂಗಳಿಗೆ ಹಚ್ಚಿಸಬೇಕು.

ಏಪ್ರಿಲ್‌ ಮೊದಲ ವಾರದಲ್ಲಿ ಕಾಲ್ನಡಿಗೆ ಜಾಥವು ಬೆಂಗಳೂರು ತಲುಪಲಿದ್ದು ಸರ್ಕಾರಗಳ ಗಮನ ಸೆಳೆಯಲು ಬೃಹತ್‌ ಬಹಿರಂಗ ಸಮಾವೇಶ ನಡೆಯುವ ಸಾಧ್ಯತೆಯಿದೆ. ಈ ಮೂಲಕ ಭೂಮಿ ಮತ್ತು ವಸತಿ ಹೋರಾಟಕ್ಕೆ ಮತ್ತಷ್ಟು ಜೀವ ತಂದು ಕೊಡುವ ಕೆಲಸವನ್ನು ಸಿಪಿಐ ಮಾಡುತ್ತಿದೆ. ಸರ್ಕಾರಗಳು ಈ ಹೋರಾಟಕ್ಕೆ ಹೇಗೆ ಸ್ಪಂದಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...