Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...