Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...