Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...