Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...