Homeಮುಖಪುಟ'86 ದೇಶಗಳ ಜೈಲಿನಲ್ಲಿ 10,152 ಭಾರತೀಯರು..'; ಸಂಸತ್ತಿನಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

’86 ದೇಶಗಳ ಜೈಲಿನಲ್ಲಿ 10,152 ಭಾರತೀಯರು..’; ಸಂಸತ್ತಿನಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

- Advertisement -
- Advertisement -

ಪ್ರಸ್ತುತ ವಿಶ್ವದಾದ್ಯಂತ 86 ದೇಶಗಳಲ್ಲಿ ಒಟ್ಟು 10,152 ಭಾರತೀಯರು ಜೈಲಿನಲ್ಲಿದ್ದಾರೆ, ಅವರಲ್ಲಿ ಅತಿ ಹೆಚ್ಚು ಜನರು ಸೌದಿ ಅರೇಬಿಯಾ (2,633), ಯುನೈಟೆಡ್ ಅರಬ್ ಎಮಿರೇಟ್ಸ್ (2,518) ಮತ್ತು ನೇಪಾಳ (1,317) ಗಳಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿನಲ್ಲಿ ನೀಡಿದ ಮಾಹಿತಿಯ ಪ್ರಕಾರ ತಿಳಿದುಬಂದಿದೆ.

ಒಟ್ಟು ಅಂಕಿ ಅಂಶದಲ್ಲಿ ವಿದೇಶಗಳಲ್ಲಿ ವಿಚಾರಣೆ ಎದುರಿಸುತ್ತಿರುವ 2,684 ಭಾರತೀಯರು ಸೇರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

“ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿದೇಶಿ ಜೈಲುಗಳಲ್ಲಿ ವಿಚಾರಣಾಧೀನದಲ್ಲಿರುವವರು ಸೇರಿದಂತೆ ಪ್ರಸ್ತುತ ಭಾರತೀಯ ಕೈದಿಗಳ ಸಂಖ್ಯೆ 10,152” ಎಂದು ಸಿಂಗ್ ಹೇಳಿದರು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಸಾಕೇತ್ ಗೋಖಲೆ ಅವರ ಪ್ರಶ್ನೆಗೆ ಸಿಂಗ್ ನೀಡಿದ ವಿವರಗಳ ಪ್ರಕಾರ, ಅತಿ ಹೆಚ್ಚು ಭಾರತೀಯ ಕೈದಿಗಳು ಸೌದಿ ಅರೇಬಿಯಾ, ಯುಎಇ ಮತ್ತು ನೇಪಾಳದಲ್ಲಿದ್ದಾರೆ.

ಕತಾರ್ (611), ಕ್ವಾಯ್ತ್ (387), ಮಲೇಷ್ಯಾ (338), ಯುಕೆ (288), ಪಾಕಿಸ್ತಾನ (266), ಬಹ್ರೇನ್ (181), ಚೀನಾ (173), ಯುಎಸ್ (169), ಇಟಲಿ (168), ಮತ್ತು ಓಮನ್ (148) ದೇಶಗಳಲ್ಲಿಯೂ ಗಣನೀಯ ಸಂಖ್ಯೆಯ ಭಾರತೀಯ ಕೈದಿಗಳಿದ್ದರು.

ಸೌದಿ ಅರೇಬಿಯಾದಲ್ಲಿಯೂ ಅತಿ ಹೆಚ್ಚು ವಿಚಾರಣಾಧೀನ ಭಾರತೀಯ ಕೈದಿಗಳಿದ್ದು, 1,226, ಗಣನೀಯ ಸಂಖ್ಯೆಯ ವಿಚಾರಣಾಧೀನ ಕೈದಿಗಳನ್ನು ಹೊಂದಿರುವ ಇತರ ದೇಶಗಳು ಯುಎಇ (294), ಬಹ್ರೇನ್ (144), ಕತಾರ್ (123), ಮತ್ತು ಮಲೇಷ್ಯಾ (121) ದೇಶದ ಜೈಲಿನಲ್ಲಿದ್ದಾರೆ.

ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ ಶಾಸಕ ಹರಿಸ್ ಬೀರನ್ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಂಗ್, 54 ಭಾರತೀಯ ನಾಗರಿಕರಿಗೆ ವಿದೇಶಿ ನ್ಯಾಯಾಲಯಗಳು ಮರಣದಂಡನೆ ವಿಧಿಸಿವೆ. ಮರಣದಂಡನೆ ಶಿಕ್ಷೆಯಲ್ಲಿರುವ ಅತಿ ಹೆಚ್ಚು ಭಾರತೀಯರನ್ನು ಹೊಂದಿರುವ ದೇಶಗಳು ಯುಎಇ (29) ಮತ್ತು ಸೌದಿ ಅರೇಬಿಯಾ (12).

ವಿದೇಶಿ ನ್ಯಾಯಾಲಯಗಳಿಂದ ಮರಣದಂಡನೆ ಸೇರಿದಂತೆ ಶಿಕ್ಷೆಗೊಳಗಾದ ಭಾರತೀಯರಿಗೆ ಭಾರತೀಯ ರಾಯಭಾರ ಕಚೇರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತವೆ ಎಂದು ಅವರು ಹೇಳಿದರು.

ಈ ಸಹಾಯವು ಜೈಲುಗಳಿಗೆ ಭೇಟಿ ನೀಡುವ ಮೂಲಕ ಮತ್ತು ನ್ಯಾಯಾಲಯಗಳು, ಜೈಲುಗಳು, ಸಾರ್ವಜನಿಕ ಅಭಿಯೋಜಕರು ಮತ್ತು ವಿದೇಶಗಳ ಇತರ ಸಂಸ್ಥೆಗಳೊಂದಿಗೆ ಅವರ ಪ್ರಕರಣಗಳನ್ನು ಅನುಸರಿಸುವ ಮೂಲಕ ಕಾನ್ಸುಲರ್ ಪ್ರವೇಶವನ್ನು ಒಳಗೊಂಡಿದೆ. “ಜೈಲಿನಲ್ಲಿರುವ ಭಾರತೀಯ ಪ್ರಜೆಗಳಿಗೆ ಮೇಲ್ಮನವಿ ಸಲ್ಲಿಸುವುದು, ಕ್ಷಮಾದಾನ ಅರ್ಜಿ ಇತ್ಯಾದಿ ಸೇರಿದಂತೆ ವಿವಿಧ ಕಾನೂನು ಪರಿಹಾರಗಳನ್ನು ಅನ್ವೇಷಿಸುವಲ್ಲಿ ಸಹಾಯ ಮಾಡಲಾಗುತ್ತದೆ” ಎಂದು ಸಿಂಗ್ ಹೇಳಿದರು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸದಸ್ಯ ಸಂದೋಷ್ ಕುಮಾರ್ ಪಿ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಪಾಕಿಸ್ತಾನದಲ್ಲಿ 217, ಶ್ರೀಲಂಕಾದಲ್ಲಿ 58, ಸೌದಿ ಅರೇಬಿಯಾದಲ್ಲಿ 28 ಮತ್ತು ಬಹ್ರೇನ್‌ನಲ್ಲಿ ನಾಲ್ವರು ಸೇರಿದಂತೆ ಒಟ್ಟು 307 ಭಾರತೀಯ ಮೀನುಗಾರರನ್ನು ಪ್ರಸ್ತುತ ವಿದೇಶಗಳಲ್ಲಿ ಬಂಧಿಸಲಾಗಿದೆ ಎಂದು ಸಿಂಗ್ ಹೇಳಿದರು.

2024 ರಲ್ಲಿ, ಶ್ರೀಲಂಕಾ 479 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ; ಬಾಂಗ್ಲಾದೇಶ 95, ಬಹ್ರೇನ್ 47, ಕತಾರ್ 29 ಮತ್ತು ಸೌದಿ ಅರೇಬಿಯಾ 27 ಜನರನ್ನು ಬಿಡುಗಡೆ ಮಾಡಿದೆ.

ಭಾರತೀಯ ಮೀನುಗಾರರ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಮತ್ತು ವಿದೇಶಿ ಸರ್ಕಾರಗಳೊಂದಿಗೆ ರಾಜತಾಂತ್ರಿಕ ಮಾರ್ಗಗಳು, ಅಧಿಕೃತ ಸಂವಹನ ಮತ್ತು ಸ್ಥಾಪಿತ ದ್ವಿಪಕ್ಷೀಯ ಕಾರ್ಯವಿಧಾನಗಳ ಮೂಲಕ ಅವರ ದೋಣಿಗಳೊಂದಿಗೆ ಆರಂಭಿಕ ಬಿಡುಗಡೆ ಮತ್ತು ವಾಪಸಾತಿ ಮುಂತಾದ ವಿಷಯಗಳನ್ನು ತೆಗೆದುಕೊಳ್ಳುತ್ತದೆ.

“ಭಾರತೀಯ ಮೀನುಗಾರರ ಆರಂಭಿಕ ಬಿಡುಗಡೆ ಮತ್ತು ವಾಪಸಾತಿ ವಿಷಯವನ್ನು ಎಲ್ಲಾ ಹಂತಗಳಲ್ಲಿಯೂ ಆಯಾ ದೇಶಗಳೊಂದಿಗೆ ನಿರಂತರವಾಗಿ ಮಾತನಾಡಲಾಗುತ್ತದೆ. ಈ ಸಮಸ್ಯೆಯನ್ನು ಸಂಪೂರ್ಣವಾಗಿ ಮಾನವೀಯ ಮತ್ತು ಜೀವನೋಪಾಯದ ಆಧಾರದ ಮೇಲೆ ಪರಿಗಣಿಸಬಹುದು ಎಂದು ತಿಳಿಸಲಾಗಿದೆ” ಎಂದು ಸಿಂಗ್ ಹೇಳಿದರು.

ಭಾರತೀಯ ಮೀನುಗಾರರ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು, ಕಾನೂನು ನೆರವು ಸೇರಿದಂತೆ ಸಹಾಯ ಮತ್ತು ಬೆಂಬಲವನ್ನು ನೀಡಲು ಭಾರತೀಯ ಅಧಿಕಾರಿಗಳು ನಿಯಮಿತವಾಗಿ ಜೈಲುಗಳು, ಬಂಧನ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬಿಡುಗಡೆಯಾದ ಮೀನುಗಾರರನ್ನು ಹಿಂದಿರುಗಿಸಲು ಅನುಕೂಲವಾಗುವಂತೆ ಅವರು ಪ್ರಯಾಣ ದಾಖಲೆಗಳನ್ನು ಸಹ ಒದಗಿಸುತ್ತಾರೆ ಎಂದರು.

ಇದನ್ನೂ ಒದಿ; ವರ್ಷ ಪೂರೈಸಿದ ‘ದೆಹಲಿ ಚಲೋ’ ರೈತರ ಪ್ರತಿಭಟನೆ; ಖಾನೌರಿ ಗಡಿಯಲ್ಲಿ ‘ಮಹಾಪಂಚಾಯತ್ ಏಕತೆ’ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...