Homeಮುಖಪುಟಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

ಮಣಿಪುರ | ಆರು ಜಿಲ್ಲೆಗಳಲ್ಲಿ 104 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

- Advertisement -
- Advertisement -

ಮಣಿಪುರದ ಆರು ಜಿಲ್ಲೆಗಳಲ್ಲಿ ಒಟ್ಟು 104 ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಒಪ್ಪಿಸಿದ್ದಾರೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಬಂದೂಕುಗಳನ್ನು ತ್ಯಜಿಸಲು ಅಧಿಕಾರಿಗಳು ನೀಡಿದ ಏಳು ದಿನಗಳ ಅವಧಿ ಮುಗಿಯುವ ಒಂದು ದಿನ ಮೊದಲು, ಬುಧವಾರ ಕಾಂಗ್‌ಪೋಕ್ಪಿ, ಇಂಫಾಲ್ ಪೂರ್ವ, ಬಿಷ್ಣುಪುರ, ತೌಬಲ್, ಇಂಫಾಲ್ ಪಶ್ಚಿಮ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಶರಣು ಮಾಡಲಾಗಿದೆ ಎಂದು ವರದಿಯಾಗಿದೆ.

ಫೆಬ್ರವರಿ 20ರಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು, ಜನರು ಏಳು ದಿನಗಳ ಒಳಗೆ ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ವಯಂಪ್ರೇರಣೆಯಿಂದ ತಂದ ಒಪ್ಪಿಸಿ ಎಂದು ಮನವಿ ಮಾಡಿದ್ದರು. ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸುವವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಬಯಸಿದರೆ ಸ್ವಯಂ ಪ್ರೇರಣೆಯಿಂದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ಏಳು ದಿನಗಳ ಸಮಯವಕಾಶ ಸಾಕು ಎಂದು ಮುಖ್ಯ ಕಾರ್ಯದರ್ಶಿ ಪಿ.ಕೆ. ಸಿಂಗ್ ಫೆಬ್ರವರಿ 23ರಂದು ಹೇಳಿದ್ದರು. ಅವಧಿ ಮುಗಿದ ನಂತರ ಅಂತಹ ಬಂದೂಕುಗಳನ್ನು ವಶಪಡಿಸಿಕೊಳ್ಳಲು ಪಡೆಗಳು ಕ್ರಮ ಕೈಗೊಳ್ಳುತ್ತವೆ ಎಂದು ತಿಳಿಸಿದ್ದರು.

ಮೇ 2023ರಿಂದ ಮಣಿಪುರದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಝೋ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆಗೆ ಕಾರಣವಾದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಫೆಬ್ರವರಿ 13ರಂದು ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ.

2027ರವರೆಗೆ ಇದ್ದ ಮಣಿಪುರ ವಿಧಾನಸಭೆಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನಿಷೇಧಿತ ಸಂಘಟನೆಯ ಇಬ್ಬರ ಬಂಧನ

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ಇಬ್ಬರು ಸದಸ್ಯರನ್ನು ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ (ಫೆ.27) ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಜಮೇಯಿ ಮಖಾ ಕಾಕ್ವಾ ಅಸೆಮ್ ಲೈಕೈಯಿಂದ ನಿಷೇಧಿತ ಸಜ್ಜು ಪ್ರೆಪಕ್ (ಪಿಆರ್‌ಒ)ನ ಕೇಡರ್ ಅನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಸಪಮ್ ಜೇಮ್ಸ್‌ಬಾಂಡ್ (25) ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕರು, ಸರ್ಕಾರಿ ಕಚೇರಿಗಳು, ಗಣ್ಯ ವ್ಯಕ್ತಿಗಳು, ಉದ್ಯಮಿಗಳು ಮತ್ತು ಅಂಗಡಿ ಮಾಲೀಕರಿಂದ ಸುಲಿಗೆ ಮತ್ತು ಹಣ ಸಂಗ್ರಹಿಸುವಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿಂದ ಎರಡು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಇಂಫಾಲ್ ಪಶ್ಚಿಮ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿಷೇಧಿತ ಕಾಂಗ್ಲೇ ಯಾವೋಲ್ ಕನ್ನಾ ಲುಪ್‌ನ ಸಕ್ರಿಯ ಸದಸ್ಯನನ್ನು ಬಂಧಿಸಿದ್ದಾರೆ.

ಈತನನ್ನು ಶಮ್ಜೇತ್ಸಾಬಮ್ ರೊಮಾನಂದ ಸಿಂಗ್ (23) ಎಂದು ಗುರುತಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...