Homeರಾಷ್ಟ್ರೀಯಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

ಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

- Advertisement -
- Advertisement -

ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಕಳೆದ ವಾರ ಉತ್ತರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಆದರೆ ಇಬ್ಬರು ಆರೋಪಿಗಳನ್ನು ತನಿಖೆಯಾಗಿ ಅಸ್ಸಾಂಗೆ ಕರೆದೊಯ್ಯುತ್ತಿದ್ದಾಗ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಮಾರ್ಗಗಳನ್ನು ಪತ್ತೆಹಚ್ಚಲು ಮಂಗಳವಾರದಂದು ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಕರೆದೊಯ್ಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಕೋಶ್ ನದಿಯುದ್ದಕ್ಕೂ ಸಾಗಾಣಿಕೆ ಮಾರ್ಗಗಳನ್ನು ಗುರುತಿಸಲು ಆರೋಪಿಗಳನ್ನು ಕೊಕ್ರಜಾರ್‌ ಜಿಲ್ಲೆಯ ಜಮ್ದುವಾರ್‌ ಪ್ರದೇಶಕ್ಕೆ ಕರೆದೊಯ್ಯುತ್ತಿದ್ದಾಗ ಮಧ್ಯರಾತ್ರಿ 1:15 ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ಆದಿತ್ಯನಾಥ್‌‌ ವಿರುದ್ದ ಹೇಳಿಕೆ ನೀಡಿದ್ದಾರೆಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಎಸ್‌ಪಿ ಶಾಸಕರ ಪೆಟ್ರೋಲ್ ಪಂಪ್ ಕೆಡವಿದ ಅಧಿಕಾರಿಗಳು

“ಇಬ್ಬರನ್ನು ಕರೆದೊಯ್ಯತ್ತಿದ್ದ ವಾಹನವು ಜಮ್ದುವಾರ್ ಬಳಿ ‘ಉಗ್ರರ ಹೊಂಚುದಾಳಿಗೆ ಒಳಗಾಯಿತು’. ಹೀಗಾಗಿ ಪೊಲೀಸ್‌ ಸಿಬ್ಬಂದಿ ‘ಉಗ್ರರ’ ಮೇಲೆ ಪ್ರತಿದಾಳಿ ನಡೆಸಲು ಸುರಕ್ಷಿತ ಸ್ಥಳಕ್ಕಾಗಿ ಕಾರಿನಿಂದ ಜಿಗಿದಿದ್ದಾರೆ. ಆದರೆ, ಬಂಧಿತ ಆರೋಪಿಗಳು ಕಾರಿನಿಂದ ಹೊರಬರಲು ವಿಫಲರಾಗಿದ್ದು, ಅವರ ಮೇಲೆ ಗುಂಡಿನ ದಾಳಿಯಾಗಿದೆ” ಎಂದು ಪೋಲೀಸರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಮರಗಳನ್ನು ಕಡಿದು ರಸ್ತೆ ತಡೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣೆ ಪಡೆದ ನಂತರ, ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಮತ್ತು ಎರಡು ಕಡೆಯವರ ನಡುವೆ 10-12 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಮೃತರಾದ ಅಕ್ಬರ್ ಬಂಜಾರಾ ಮತ್ತು ಸಲ್ಮಾನ್ ಅವರನ್ನು ಮೀರತ್ ಪೊಲೀಸರು ಏಪ್ರಿಲ್ 13 ರಂದು ಬಂಧಿಸಿ ಅಸ್ಸಾಂ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆರೋಪಿಗಳಿಬ್ಬರು ಮೀರತ್‌ನ ಫಲವಾಡ ಪ್ರದೇಶದ ನಿವಾಸಿಗಳಾಗಿದ್ದು, ಅವರ ವಿರುದ್ದ ಮೀರತ್ ಮತ್ತು ಕೊಕ್ರಜಾರ್ ಜಿಲ್ಲೆಗಳಲ್ಲಿ ಜಾನುವಾರು ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಾಗಿತ್ತು. ಅಸ್ಸಾಂ ಪೊಲೀಸರ ತುಕಡಿ ಮೀರತ್‌ಗೆ ಬಂದು ವಾರಂಟ್ ಸಲ್ಲಿಸಿದ ನಂತರ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಅಕ್ಬರ್ ಬಂಧನಕ್ಕೆ ಅಸ್ಸಾಂ ಪೊಲೀಸರು 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಬಹುಮಾನದ ಹಣವನ್ನು ಮೀರತ್ ಪೊಲೀಸರಿಗೆ ಅವರ ಅಸ್ಸಾಂ ಸಹವರ್ತಿಗಳಿಂದ ಹಸ್ತಾಂತರಿಸಲಾಗಿದೆ ಎಂದು ಯುಪಿ ಪೊಲೀಸರು ಏಪ್ರಿಲ್ 15 ರಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಜಾನುವಾರು ಕಳ್ಳಸಾಗಣೆದಾರರು ಸಾವನ್ನಪ್ಪಿದ್ದಾರೆ. ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ನಾವು ಸ್ಥಳದಿಂದ ಒಂದು ಎಕೆ ಸಿರೀಸ್ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೊಕ್ರಜಾರ್‌ ಎಸ್ಪಿ ತುಬೆ ಪ್ರತೀಕ್ ವಿಜಯ್ಕುಮಾರ್ ತಿಳಿಸಿದ್ದಾರೆ.

“ಯಾವುದೇ ಅಪಾಯವಿಲ್ಲ ಎಂದು ಗ್ರಹಿಸಿದ ನಂತರ, ಪೊಲೀಸರು ಗಾಯಗೊಂಡ ಆರೋಪಿಗಳನ್ನು ವಾಹನದಿಂದ ಹೊರತೆಗೆದು ಮತ್ತೊಂದು ವಾಹನದಲ್ಲಿ ಸರೈಬಿಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ಗಳ ಪ್ರಯಾಣಕ್ಕೆ ಆಂಬುಲೆನ್ಸ್ ಬಳಕೆ: ಯುಪಿ ಬಿಜೆಪಿ ನಾಯಕಿಯ ಬಂಧನ

ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಮ್ಯಾಗಜೀನ್‌ಗಳು, 35 ಸುತ್ತಿನ ಜೀವಂತ ಮದ್ದುಗುಂಡುಗಳು ಮತ್ತು 28 ಸುತ್ತುಗಳ ಖಾಲಿ ಬುಲೆಟ್ ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes. It looks like a fake encounter and framed a story. Any unrighteous act will not go unpunished. For that need to observe that person or his family for some time, you can see how they are punished by God. Most of the people do not observe this truth. 🙄

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...