Homeರಾಷ್ಟ್ರೀಯಕೋರ್ಟ್‌ ತಡೆ ಆದೇಶ ನೀಡಿದ ನಂತರವೂ ಮನೆಗಳನ್ನು ಒಡೆದ ದೆಹಲಿ ಪಾಲಿಕೆ: ಗಂಭೀರವಾಗಿ ಪರಿಗಣಿಸಲಾಗುವುದು ಎಂದ...

ಕೋರ್ಟ್‌ ತಡೆ ಆದೇಶ ನೀಡಿದ ನಂತರವೂ ಮನೆಗಳನ್ನು ಒಡೆದ ದೆಹಲಿ ಪಾಲಿಕೆ: ಗಂಭೀರವಾಗಿ ಪರಿಗಣಿಸಲಾಗುವುದು ಎಂದ ಸುಪ್ರೀಂ

ಎರಡು ವಾರಗಳ ನಂತರ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ

- Advertisement -
- Advertisement -

ಬುಧವಾರ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. “ನಮ್ಮ ಆದೇಶದ ನಂತರ ನಡೆದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ

ಕಳೆದ ಶನಿವಾರದಂದು ಕೋಮುಗಲಭೆ ಭುಗಿಲೆದ್ದ ದೆಹಲಿಯ ಜಹಾಂಗೀರ್‌‌ಪುರಿಗೆ ಬುಲ್ಡೋಜರ್‌ಗಳನ್ನು ಕಳುಹಿಸಲ್ಪಟ್ಟ ಒಂದು ದಿನದ ನಂತರ, ಸುಪ್ರೀಂಕೋರ್ಟ್ ತನ್ನ ಆದೇಶದ ನಂತರ ನಡೆದ ಧ್ವಂಸಗಳ ಬಗ್ಗೆ ‘ಗಂಭೀರ’ವಾಗಿ ಪರಿಗಣಿಸುವುದಾಗಿ ಹೇಳಿದೆ. ಮುಂದಿನ ಆದೇಶದವರೆಗೆ ಜಹಾಂಗೀರ್‌ಪುರಿಯಲ್ಲಿ ಯಾವುದೇ ನೆಲಸಮಗೊಳಿಸುವ ಕಾರ್ಯಾಚರಣೆ ಮಾಡಬಾರದು ಎಂದು ನ್ಯಾಯಾಲಯವು ದೆಹಲಿ ಮುನ್ಸಿಪಲ್‌ಗೆ ನೋಟಿಸ್ ಜಾರಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸುಪ್ರೀಂಕೋರ್ಟ್ ತೀರ್ಪನ್ನು ಮೇಯರ್‌ಗೆ ತಿಳಿಸಿದ ನಂತರವೂ ನಡೆದ ಎಲ್ಲಾ ಉರುಳಿಸುವಿಕೆ ಕಾರ್ಯಾಚರಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎರಡು ವಾರಗಳ ನಂತರ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ವಿಚಾರಣೆಯ ಸಂದರ್ಭದಲ್ಲಿ, “ಸಮಾಜದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಲಾಗುತ್ತಿದೆ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ.

ಜಹಾಂಗೀರ್‌ಪುರಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, “ದೆಹಲಿ ಬಿಜೆಪಿ ಮುಖ್ಯಸ್ಥರು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್‌ಗೆ ದೂರು ನೀಡಿದ ನಂತರ ಹಿಂಸಾಚಾರ ಪೀಡಿತ ಪ್ರದೇಶದಿಂದ ಅತಿಕ್ರಮಣಗಳನ್ನು ತೆಗೆದುಹಾಕಲು ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಯಾವುದೆ ಸೂಚನೆಯಿಲ್ಲದೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು” ಎಂದು ಹೇಳಿದ್ದಾರೆ.

ದೆಹಲಿ ಮುನ್ಸಿಪಲ್‌‌‌ ಬಿಜೆಪಿ ನಾಯಕರ ಆಶಯವನ್ನು “ತಮ್ಮ ಆಜ್ಞೆಯಂತೆ” ಆಗಲಿ ಎಂಬಂತೆ ವರ್ತಿಸಿದೆ ಎಂದು ವಕೀಲರು ಆರೋಪಿಸಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಮುಸ್ಲಿಂ ಗಲಭೆ ಆರೋಪಿಗಳ ಕಟ್ಟಡಗಳನ್ನು ನೆಲಸಮಗೊಳಿಸಲಾಗುತ್ತಿದೆ ಎಂದು ಜಮಿಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯನ್ನು ಗಮನಿಸಿದ ಸುಪ್ರೀಂಕೋರ್ಟ್ ಬುಧವಾರ ಅತಿಕ್ರಮಣ ವಿರೋಧಿ ಅಭಿಯಾನವನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ ಬದಲಾಯಿಸಿದ ಪೊಲೀಸರು

ಸುಪ್ರೀಂಕೋರ್ಟ್ ಆದೇಶ ಇದ್ದರೂ ಬುಲ್ಡೋಜರ್‌ಗಳು ಮಸೀದಿ ಹೊರಗಿನ ಅಂಗಡಿಗಳು, ಕಟ್ಟಡಗಳನ್ನು ಸುಪ್ರೀಂಕೋರ್ಟ್‌ ಎರಡನೇ ಬಾರಿಗೆ ಹಸ್ತಕ್ಷೇಪ ಮಾಡುವವರೆಗೂ ಧ್ವಂಸಗೊಳಿಸಲಾಗಿದೆ.  ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಅಂತಿಮವಾಗಿ ಕಾರ್ಯಚರಣೆಯನ್ನು ನಿಲ್ಲಿಸುವಂತೆ ಆದೇಶ ನೀಡಿದ್ದಾರೆ.

ಬುಲ್ಡೋಝರ್‌ಗಳು ಧ್ವಂಸಗೊಳಿಸುತ್ತಿರುವ ಪ್ರದೇಶಕ್ಕೆ ತೆರಳಿದ್ದ ಸಿಪಿಐಎಂ ನಾಯಕಿ ಬೃಂದಾ ಕಾರಟ್‌ ಹಾಗೂ ಅವರ ತಂಡ ಬುಲ್ಡೋಝರ್‌ ಮುಂದೆ ನಿಂತು ಪ್ರತಿಭಟಿಸಿದ್ದಾರೆ. ಅವರು ಸುಪ್ರೀಂಕೋರ್ಟ್‌ನ ತಡೆ ಆದೇಶವಿರುವ ಪ್ರತಿಯನ್ನು ಅಲ್ಲಿನ ಅಧಿಕಾರಿಗಳಿಗೆ ತೋರಿಸಿದ್ದರು. ಇದರ ನಂತರ ಅಧಿಕಾರಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...