Homeರಾಷ್ಟ್ರೀಯಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

- Advertisement -
- Advertisement -

ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಸಂಘಟನೆಯು ಕಳೆದ ಡಿಸೆಂಬರ್‌ನಲ್ಲಿ ಕಾರ್ಯಕ್ರಮವೊಂದನ್ನು ಸಂಘಟಿಸಿ, ‘ಹಿಂದೂ ರಾಷ್ಟ್ರ ಕೊಲೆ ಮಾಡುವುದ’ಕ್ಕಾಗಿ ಕರೆ ನೀಡಿತ್ತು. ಆದರೆ ದೆಹಲಿ ಪೊಲೀಸರು ಈ ಕರೆ ‘ದ್ವೇಷ ಭಾಷಣವಲ್ಲ’ ಎಂದು ಕಳೆದ ವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದರು. ದೆಹಲಿ ಪೊಲೀಸರ ಈ ಹೇಳಿಕೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅತೃಪ್ತಿ ವ್ಯಕ್ತಪಡಿಸಿದ್ದು, ‘ಉತ್ತಮ ಅಫಿಡವಿಟ್’ ಸಲ್ಲಿಸುವಂತೆ ಹೇಳಿದೆ.

ಡಿಸೆಂಬರ್ 19 ರಂದು ದೇಶದ ರಾಜಧಾನಿಯಲ್ಲಿ ನಡೆದ ‘ಧರ್ಮ ಸಂಸದ್’ನಲ್ಲಿ ಯಾವುದೇ ದ್ವೇಷದ ಭಾಷಣ ಮಾಡಲಾಗಿಲ್ಲ ಎಂದು ಹೇಳುವ ತನ್ನ ಅಫಿಡವಿಟ್ ಅನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ ಮುಂದೆ ಇಂದು ಒಪ್ಪಿಕೊಂಡಿದ್ದು, ಉತ್ತಮವಾದ ಅಫಿಡವಿಟ್‌‌‌ ಸಲ್ಲಿಸುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ, “ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡುತ್ತೇವೆ. ಅದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಜನರಿಗೆ ಪ್ರತಿಜ್ಞೆ ಮಾಡಿಸಿದ್ದರು.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಈ ಕಾರ್ಯಕ್ರಮವನ್ನು ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

“ಪ್ರತಿಜ್ಞೆ ಸ್ವೀಕರಿಸಿದವರ ಉದ್ದೇಶವು ಸಮುದಾಯದ ನೈತಿಕತೆಯನ್ನು ಉಳಿಸುವುದಾಗಿತ್ತು” ಎಂಬ ದೆಹಲಿ ಪೊಲೀಸರ ಅಫಿಡವಿಟ್‌ ಅನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಇಂದು ಉಲ್ಲೇಖಿಸಿದ್ದು, ಇದರ ಅರ್ಥವೇನು ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಅಫಿಡವಿಟ್ ಅನ್ನು ಡೆಪ್ಯುಟಿ ಕಮಿಷನರ್ ಆಫ್ ಪೋಲಿಸ್ ಸಲ್ಲಿಸಿದ್ದಾರೆ. ಅವರು ಈ ನಿಲುವನ್ನು ಅನುಮೋದಿಸುತ್ತಾರೆಯೇ? ಅಥವಾ ಅವರು ಸಬ್ ಇನ್ಸ್‌ಪೆಕ್ಟರ್ ಮಟ್ಟದ ತನಿಖಾ ವರದಿಯನ್ನು ಮತ್ತೆ ತಯಾರಿಸುತ್ತಾರೆಯೆ” ಎಂದು ನ್ಯಾಯಮೂರ್ತಿ ಎ.ಎಮ್. ಖಾನ್ವಿಲ್ಕರ್ ಕೇಳಿದ್ದಾರೆ.

ಮೇ 4 ರೊಳಗೆ ದೆಹಲಿ ಪೊಲೀಸರ ಹೊಸ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಜನಾಂಗೀಯ ಹತ್ಯೆಗೆ ಮುಕ್ತವಾಗಿ ಕರೆ ನೀಡಲಾಗುತ್ತಿದೆ ಎಂದು ಅರ್ಥೈಸುವ ಅಥವಾ ಅರ್ಥೈಸಬಹುದಾದ ಯಾವುದೇ ಪದಗಳ ಬಳಕೆ ಇದರಲ್ಲಿ ಇಲ್ಲ ಎಂದು ಕಂಡುಕೊಂಡಿದ್ದೇವೆ” ಎಂದು ಕಳೆದ ವಾರ ನಡೆದ ಆಪಾದಿತ ದ್ವೇಷ ಭಾಷಣದ ವೀಡಿಯೊ ಪ್ರಕರಣದ ವಿಚಾರಣೆಯಲ್ಲಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಪೊಲೀಸರು ತಮ್ಮ ಹೇಳಿಕೆಯಲ್ಲಿ, “ವೀಡಿಯೊ ಮತ್ತು ಇತರ ವಿಷಯಗಳ ಬಗ್ಗೆ ನಡೆದ ತೀವ್ರ ತನಿಖೆಯಲ್ಲಿ ಯಾವುದೇ ಸಮುದಾಯದ ವಿರುದ್ಧ ಯಾವುದೇ ದ್ವೇಷ ಭಾಷಣವನ್ನು ನೀಡಿಲ್ಲ ಎಂದು ಕಂಡುಬಂದಿದೆ. ಆದ್ದರಿಂದ, ಉದ್ದೇಶಿತ ವೀಡಿಯೊದ ತನಿಖೆ ಮತ್ತು ಮೌಲ್ಯಮಾಪನದ ನಂತರ, ಆಪಾದಿತ ಭಾಷಣವು ನಿರ್ದಿಷ್ಟ ಸಮುದಾಯದ ವಿರುದ್ಧ ಯಾವುದೇ ದ್ವೇಷದ ಭಾಷಣವನ್ನು ಹೊಂದಿಲ್ಲ ಎಂದು ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ (ಹಿಂದೂ ಯುವ ವಾಹಿನಿಯಿಂದ) ಮತ್ತು ಹರಿದ್ವಾರದಲ್ಲಿ (ಯತಿ ನರಸಿಂಹಾನಂದರಿಂದ) ಆಯೋಜಿಸಲಾದ ಎರಡು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕಾಗಿ ಬಹಿರಂಗ ಕರೆಗಳನ್ನು ಒಳಗೊಂಡಂತೆ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...