Homeಮುಖಪುಟ2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

- Advertisement -
- Advertisement -

ಹೈಕೋರ್ಟ್ ನ್ಯಾಯಾಧೀಶರಾಗಿ 2018 ರಿಂದ ನೇಮಕಗೊಂಡ 698 ಮಂದಿಯಲ್ಲಿ 108 ಮಹಿಳೆಯರಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ಈ ಅವಧಿಯಲ್ಲಿ (2018ರಿಂದ) 22 ಮಂದಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರು, 15 ಮಂದಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿದವರು, 87 ಮಂದಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದವರು ಮತ್ತು 37 ಮಂದಿ ಅಲ್ಪಸಂಖ್ಯಾತ ಸಮುದಾಯವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ದೇಶದಾದ್ಯಂತ ನ್ಯಾಯಾಲಯಗಳಲ್ಲಿ ನೇಮಕಗೊಂಡ ಒಟ್ಟು ನ್ಯಾಯಾಧೀಶರಲ್ಲಿ ಎಸ್‌ಸಿ/ಎಸ್‌ಟಿ ನ್ಯಾಯಾಧೀಶರ ಶೇಕಡಾವಾರು ಪ್ರಮಾಣ ಮತ್ತು ಹೈಕೋರ್ಟ್‌ಗಳಲ್ಲಿ ಹೆಚ್ಚಿನ ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ನ್ಯಾಯಾಧೀಶರನ್ನು ನೇಮಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಸಂಸದ ನೀರಜ್ ಡಾಂಗಿ ಅವರು ಕೇಳಿದ ಪ್ರಶ್ನೆಗೆ ಸಚಿವಾಲಯ ಉತ್ತರಿಸಿದೆ.

ಜಿಲ್ಲಾ ನ್ಯಾಯಾಂಗದ ನ್ಯಾಯಾಧೀಶರ ನೇಮಕದ ಕುರಿತಾದ ಡೇಟಾವನ್ನು ಕೇಂದ್ರೀಯವಾಗಿ ನಿರ್ವಹಿಸಲಾಗುವುದಿಲ್ಲ ಎಂದು ಸಚಿವಾಲಯ ಹೇಳಿದೆ.

ಇನ್ನು 2018 ರಿಂದ, ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಶಿಫಾರಸು ಮಾಡಲ್ಪಟ್ಟವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ನಿಗದಿತ ನಮೂನೆಯಲ್ಲಿ (ಸುಪ್ರೀಂ ಕೋರ್ಟ್‌ನೊಂದಿಗೆ ಸಮಾಲೋಚಿಸಿ ತಯಾರಿಸಲಾಗುತ್ತದೆ) ಒದಗಿಸಬೇಕಾಗುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕಾನೂನು ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿರುವ ಒಟ್ಟು 20,466 ನ್ಯಾಯಾಧೀಶರಲ್ಲಿ, 3,871 ನ್ಯಾಯಾಧೀಶರು ಎಸ್‌ಸಿ/ಎಸ್‌ಟಿ ವರ್ಗಕ್ಕೆ ಸೇರಿದವರಾಗಿದ್ದು, ಒಟ್ಟು ಬಲದ ಶೇ. 19 ರಷ್ಟಿದ್ದಾರೆ.

ದೇಶದಲ್ಲಿ ಜನಸಂಖ್ಯೆ ಅನುಪಾತದ ಪ್ರಕಾರ ಪ್ರತಿ ಲಕ್ಷ ಜನರಿಗೆ ನೇಮಕಗೊಂಡ ನ್ಯಾಯಾಧೀಶರ ಸಂಖ್ಯೆಯ ಕುರಿತ ಪ್ರಶ್ನೆಗೆ ಸಚಿವಾಲಯವು,

“2011ರ ಜನಗಣತಿಯ ಪ್ರಕಾರ 1210.19 ಮಿಲಿಯನ್ ಜನಸಂಖ್ಯೆ ಮತ್ತು 31 ಡಿಸೆಂಬರ್ 2024 ರಂತೆ ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಮತ್ತು ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಅನುಮೋದಿತ ನ್ಯಾಯಾಧೀಶರ ಬಲದ ಬಗ್ಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ನ್ಯಾಯಾಧೀಶರು – ಜನಸಂಖ್ಯಾ ಅನುಪಾತವು ಪ್ರತಿ ಮಿಲಿಯನ್ ಜನಸಂಖ್ಯೆಗೆ ಸರಿಸುಮಾರು 21 ನ್ಯಾಯಾಧೀಶರು ಎಂದು ಲೆಕ್ಕಹಾಕಲಾಗಿದೆ.” ಎಂದಿದೆ.

ಜಾತಿ ಆಧಾರಿತ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕನಿಷ್ಠ ಪಕ್ಷ ಒಪ್ಪಿಕೊಳ್ಳುತ್ತೀರಾ?: ಸಿಎಂಗೆ ಪಾ. ರಂಜಿತ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...