Homeಕರ್ನಾಟಕತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ದೌರ್ಜನ್ಯದ ಕುರಿತು ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ದಲಿತರು ಆರೋಪಿಸಿದ್ದಾರೆ

- Advertisement -
- Advertisement -

ಮುಜರಾಯಿ ಇಲಾಖೆಗೆ ಸೇರಿದ ದೇವರ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುವ ಕಾಲೊನಿಗೆ ಕಳುಹಿಸಲು ಒಪ್ಪದೆ ಜಾತಿ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಹುಣಸೆಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ದೇವರ ಮೆರವಣಿಗೆಯನ್ನು ತಮ್ಮ ಕೇರಿಗೆ ಕಳುಹಿಸಿ ಎಂದು ಕೇಳಿಕೊಂಡರೂ ಅದಕ್ಕೆ ಒಪ್ಪದ ಸವರ್ಣೀಯರು, ದಲಿತರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ಧಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆನ್ನೂ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹುಣಸೆಘಟ್ಟ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯದಲ್ಲಿ ವರ್ಷ ಪ್ರತಿ ನಡೆಯುವಂತೆ ಈ ವರ್ಷವೂ ಎಪ್ರಿಲ್‌ 22 ರಿಂದ 24ರ ವರೆಗೆ ಜಾತ್ರೆ ನಡೆದಿತ್ತು. ಜಾತ್ರೆಯಲ್ಲಿ ಗ್ರಾಮದ ದೇವರುಗಳಾದ ಆಂಜನೇಯ ಸ್ವಾಮಿ ಹಾಗೂ ದೊಡ್ಡಮ್ಮ, ಚಿಕ್ಕಮ್ಮ ದೇವರುಗಳ ಮೆರವಣಿಗೆ ನಡೆಯುತ್ತದೆ. ಆದರೆ ಈ ಮೆರವಣಿಗೆಯನ್ನು ಆದಿದ್ರಾವಿಡ ಜನಾಂಗದ ವಾಸಿಸುವ ಕಾಲೋನಿಗೆ ಕರೆದುಕೊಂಡು ಬರುವಂತೆ ಕೇಳಿದ್ದಕ್ಕಾಗಿ ಅವರ ವಿರುದ್ದ ಜಾತಿ ದೌರ್ಜನ್ಯ ಎಸಗಲಾಗಿದೆ ಎಂದು ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವರ ಮೆರವಣಿಗೆಯನ್ನು ತಮ್ಮ ಕಾಲೋನಿಯಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಕರೆದುಕೊಂಡು ಬಂದು ಅಲ್ಲಿ ಮಂಗಳಾರತಿ ಮಾಡಿಸಿಕೊಂಡು ಹೋಗುವಂತೆ ದಲಿತರು ಕೇಳಿದ್ದರು. ಆದರೆ ಸವರ್ಣೀಯರು ಅವರ ವಿರುದ್ದವೇ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದಲಿತರು ತಿಪಟೂರು ತಹಸೀಲ್ದಾರರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಕಾಲೋನಿಗೆ ದೇವರ ಮೆರವಣಿಗೆಯನ್ನು ಕಳುಹಿಸಿಕೊಡಿ ಎಂದು ಹಲವು ವರ್ಷಗಳಿಂದಲೂ ದಲಿತರು ಕೇಳುತ್ತಲೇ ಬಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ಜಾತಿ ದೌರ್ಜನ್ಯದ ವಿರುದ್ದ ದಲಿತರು ನೋಣವಿನಕೆರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಮನವಿಯನ್ನು ಕೂಡಾ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀನಿವಾಸ್ ಅವರು, “ನಾವು ಹಲವಾರು ವರ್ಷಗಳಿಂದ ನಮ್ಮ ಕಾಲೋನಿಗೆ ದೇವರ ಉತ್ಸವ ಮೂರ್ತಿ ತರಬೇಕು ಎಂದು ಕೇಳುತ್ತಲೆ ಇದ್ದೇವೆ. ಆದರೆ ಸವರ್ಣೀಯರು ಇದಕ್ಕೆ ಸೋಪ್ಪು ಹಾಕುತ್ತಿಲ್ಲ. ಈ ಬಾರಿ ನಾವು ಅಡ್ಡ ನಿಂತು ಕೇಳಿಕೊಂಡರೂ ಅವರು ನಾವು ದಲಿತರು ಎಂಬ ಕಾರಣಕ್ಕೆ ನಮಗೆ ಜಾತಿ ನಿಂದನೆ ಮಾಡಿ ಮುಂದುವರೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನವಿ ಪತ್ರ ಸ್ವೀಕರಿಸುತ್ತಿಲ್ಲ ಆರೋಪದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನೊಣವಿನಕರೆ ಪೊಲೀಸ್‌ ಠಾಣೆಯ ಪಿಎಸ್‌ಐ ಜಗದೀಶ್‌, “ಆ ರೀತಿ ಎಲ್ಲಾ ನಡೆದಿಲ್ಲ, ಅದು ತಪ್ಪು ಆರೋಪ. ಘಟನೆ ಕುರಿತು ತಹಸಿಲ್ದಾರ್‌ಗೆ ಮನವಿ ನೀಡಿದ್ದಾರೆ. ಅವರು ಹೇಳಿದ್ದನ್ನೆಲ್ಲಾ ಕೇಳಬೇಡಿ. ಇಂತಹ ಘಟನೆ ನಡೆದರೆ ನಾವು ಬೇಗನೇ ದೂರು ಸ್ವೀಕರಿಸುತ್ತೇವೆ. ಅಲ್ಲಿ ದೊಡ್ಡ ಗಲಾಟೆ ನಡೆಯುತ್ತಿರುವಾಗ ತಕ್ಷಣವೇ ನಾನು ಸ್ಥಳಕ್ಕೆ ತೆರಳಿ ಸಮಾಧಾನ ಮಾಡಿದ್ದೇನೆ. ದೇವಾಲಯ ಮುಜರಾಯಿಗೆ ಸೇರಿರುವುದರಿಂದ ನಾವು ತಹಸಿಲ್ದಾರ್‌ಗೆ ಪತ್ರ ಬರೆದಿದ್ದೇವೆ. ಅವರು ಬಂದು ಸ್ಥಳ ಪರಿಶೀಲನೆ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಕೊಡುತ್ತಾರೆ” ಎಂದು ಹೇಳಿದರು.

ಜಾತಿ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಅವರ ಮನವಿಗಳನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಬೇರೆ ಪ್ರಕರಣವೊಂದರ ತನಿಖೆಗೆ ಹೊರಗಡೆ ಹೋಗಿದ್ದೆ. ಪೊಲೀಸ್‌‌ ಸ್ಟೇಷನ್‌ ಎಸ್‌ಎಚ್‌ಓಗಳು ತಗೊಂಡಿರಬಹುದು. ಅದನ್ನು ಪರಿಶೀಲನೆ ಮಾಡಿ ಹೇಳುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ನಂತರ ಮತ್ತೇ ನಾನುಗೌರಿ.ಕಾಂಗೆ ಕರೆ ಮಾಡಿದ ಅವರು, “ಜಾತಿ ದೌರ್ಜನ್ಯದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೀಗಾಗಿ ನಾವು ಡಿಎಸ್‌ಪಿ ಅಥವಾ ಎಎಸ್‌ಪಿ ಜೊತೆಗೆ ಮಾತನಾಡಿ ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿಗೆ ನಾನುಗೌರಿ.ಕಾಂ ಜಿಲ್ಲಾ ಎಎಸ್‌ಪಿ ಸಿದ್ದಾರ್ಥ್‌ ಗೋಯೆಲ್ ಅವರಿಗೆ ಕರೆ ಮಾಡಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೇ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...