Homeಕರ್ನಾಟಕತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ದೌರ್ಜನ್ಯದ ಕುರಿತು ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ದಲಿತರು ಆರೋಪಿಸಿದ್ದಾರೆ

- Advertisement -
- Advertisement -

ಮುಜರಾಯಿ ಇಲಾಖೆಗೆ ಸೇರಿದ ದೇವರ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುವ ಕಾಲೊನಿಗೆ ಕಳುಹಿಸಲು ಒಪ್ಪದೆ ಜಾತಿ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಹುಣಸೆಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ದೇವರ ಮೆರವಣಿಗೆಯನ್ನು ತಮ್ಮ ಕೇರಿಗೆ ಕಳುಹಿಸಿ ಎಂದು ಕೇಳಿಕೊಂಡರೂ ಅದಕ್ಕೆ ಒಪ್ಪದ ಸವರ್ಣೀಯರು, ದಲಿತರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ಧಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆನ್ನೂ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹುಣಸೆಘಟ್ಟ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯದಲ್ಲಿ ವರ್ಷ ಪ್ರತಿ ನಡೆಯುವಂತೆ ಈ ವರ್ಷವೂ ಎಪ್ರಿಲ್‌ 22 ರಿಂದ 24ರ ವರೆಗೆ ಜಾತ್ರೆ ನಡೆದಿತ್ತು. ಜಾತ್ರೆಯಲ್ಲಿ ಗ್ರಾಮದ ದೇವರುಗಳಾದ ಆಂಜನೇಯ ಸ್ವಾಮಿ ಹಾಗೂ ದೊಡ್ಡಮ್ಮ, ಚಿಕ್ಕಮ್ಮ ದೇವರುಗಳ ಮೆರವಣಿಗೆ ನಡೆಯುತ್ತದೆ. ಆದರೆ ಈ ಮೆರವಣಿಗೆಯನ್ನು ಆದಿದ್ರಾವಿಡ ಜನಾಂಗದ ವಾಸಿಸುವ ಕಾಲೋನಿಗೆ ಕರೆದುಕೊಂಡು ಬರುವಂತೆ ಕೇಳಿದ್ದಕ್ಕಾಗಿ ಅವರ ವಿರುದ್ದ ಜಾತಿ ದೌರ್ಜನ್ಯ ಎಸಗಲಾಗಿದೆ ಎಂದು ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವರ ಮೆರವಣಿಗೆಯನ್ನು ತಮ್ಮ ಕಾಲೋನಿಯಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಕರೆದುಕೊಂಡು ಬಂದು ಅಲ್ಲಿ ಮಂಗಳಾರತಿ ಮಾಡಿಸಿಕೊಂಡು ಹೋಗುವಂತೆ ದಲಿತರು ಕೇಳಿದ್ದರು. ಆದರೆ ಸವರ್ಣೀಯರು ಅವರ ವಿರುದ್ದವೇ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದಲಿತರು ತಿಪಟೂರು ತಹಸೀಲ್ದಾರರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಕಾಲೋನಿಗೆ ದೇವರ ಮೆರವಣಿಗೆಯನ್ನು ಕಳುಹಿಸಿಕೊಡಿ ಎಂದು ಹಲವು ವರ್ಷಗಳಿಂದಲೂ ದಲಿತರು ಕೇಳುತ್ತಲೇ ಬಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ಜಾತಿ ದೌರ್ಜನ್ಯದ ವಿರುದ್ದ ದಲಿತರು ನೋಣವಿನಕೆರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಮನವಿಯನ್ನು ಕೂಡಾ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀನಿವಾಸ್ ಅವರು, “ನಾವು ಹಲವಾರು ವರ್ಷಗಳಿಂದ ನಮ್ಮ ಕಾಲೋನಿಗೆ ದೇವರ ಉತ್ಸವ ಮೂರ್ತಿ ತರಬೇಕು ಎಂದು ಕೇಳುತ್ತಲೆ ಇದ್ದೇವೆ. ಆದರೆ ಸವರ್ಣೀಯರು ಇದಕ್ಕೆ ಸೋಪ್ಪು ಹಾಕುತ್ತಿಲ್ಲ. ಈ ಬಾರಿ ನಾವು ಅಡ್ಡ ನಿಂತು ಕೇಳಿಕೊಂಡರೂ ಅವರು ನಾವು ದಲಿತರು ಎಂಬ ಕಾರಣಕ್ಕೆ ನಮಗೆ ಜಾತಿ ನಿಂದನೆ ಮಾಡಿ ಮುಂದುವರೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನವಿ ಪತ್ರ ಸ್ವೀಕರಿಸುತ್ತಿಲ್ಲ ಆರೋಪದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನೊಣವಿನಕರೆ ಪೊಲೀಸ್‌ ಠಾಣೆಯ ಪಿಎಸ್‌ಐ ಜಗದೀಶ್‌, “ಆ ರೀತಿ ಎಲ್ಲಾ ನಡೆದಿಲ್ಲ, ಅದು ತಪ್ಪು ಆರೋಪ. ಘಟನೆ ಕುರಿತು ತಹಸಿಲ್ದಾರ್‌ಗೆ ಮನವಿ ನೀಡಿದ್ದಾರೆ. ಅವರು ಹೇಳಿದ್ದನ್ನೆಲ್ಲಾ ಕೇಳಬೇಡಿ. ಇಂತಹ ಘಟನೆ ನಡೆದರೆ ನಾವು ಬೇಗನೇ ದೂರು ಸ್ವೀಕರಿಸುತ್ತೇವೆ. ಅಲ್ಲಿ ದೊಡ್ಡ ಗಲಾಟೆ ನಡೆಯುತ್ತಿರುವಾಗ ತಕ್ಷಣವೇ ನಾನು ಸ್ಥಳಕ್ಕೆ ತೆರಳಿ ಸಮಾಧಾನ ಮಾಡಿದ್ದೇನೆ. ದೇವಾಲಯ ಮುಜರಾಯಿಗೆ ಸೇರಿರುವುದರಿಂದ ನಾವು ತಹಸಿಲ್ದಾರ್‌ಗೆ ಪತ್ರ ಬರೆದಿದ್ದೇವೆ. ಅವರು ಬಂದು ಸ್ಥಳ ಪರಿಶೀಲನೆ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಕೊಡುತ್ತಾರೆ” ಎಂದು ಹೇಳಿದರು.

ಜಾತಿ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಅವರ ಮನವಿಗಳನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಬೇರೆ ಪ್ರಕರಣವೊಂದರ ತನಿಖೆಗೆ ಹೊರಗಡೆ ಹೋಗಿದ್ದೆ. ಪೊಲೀಸ್‌‌ ಸ್ಟೇಷನ್‌ ಎಸ್‌ಎಚ್‌ಓಗಳು ತಗೊಂಡಿರಬಹುದು. ಅದನ್ನು ಪರಿಶೀಲನೆ ಮಾಡಿ ಹೇಳುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ನಂತರ ಮತ್ತೇ ನಾನುಗೌರಿ.ಕಾಂಗೆ ಕರೆ ಮಾಡಿದ ಅವರು, “ಜಾತಿ ದೌರ್ಜನ್ಯದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೀಗಾಗಿ ನಾವು ಡಿಎಸ್‌ಪಿ ಅಥವಾ ಎಎಸ್‌ಪಿ ಜೊತೆಗೆ ಮಾತನಾಡಿ ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿಗೆ ನಾನುಗೌರಿ.ಕಾಂ ಜಿಲ್ಲಾ ಎಎಸ್‌ಪಿ ಸಿದ್ದಾರ್ಥ್‌ ಗೋಯೆಲ್ ಅವರಿಗೆ ಕರೆ ಮಾಡಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೇ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...