Homeಕರ್ನಾಟಕತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ದೌರ್ಜನ್ಯದ ಕುರಿತು ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ದಲಿತರು ಆರೋಪಿಸಿದ್ದಾರೆ

- Advertisement -
- Advertisement -

ಮುಜರಾಯಿ ಇಲಾಖೆಗೆ ಸೇರಿದ ದೇವರ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಪರಿಶಿಷ್ಠ ಜಾತಿ ಸಮುದಾಯದವರು ವಾಸಿಸುವ ಕಾಲೊನಿಗೆ ಕಳುಹಿಸಲು ಒಪ್ಪದೆ ಜಾತಿ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಹುಣಸೆಘಟ್ಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ದೇವರ ಮೆರವಣಿಗೆಯನ್ನು ತಮ್ಮ ಕೇರಿಗೆ ಕಳುಹಿಸಿ ಎಂದು ಕೇಳಿಕೊಂಡರೂ ಅದಕ್ಕೆ ಒಪ್ಪದ ಸವರ್ಣೀಯರು, ದಲಿತರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ಧಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆನ್ನೂ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹುಣಸೆಘಟ್ಟ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯದಲ್ಲಿ ವರ್ಷ ಪ್ರತಿ ನಡೆಯುವಂತೆ ಈ ವರ್ಷವೂ ಎಪ್ರಿಲ್‌ 22 ರಿಂದ 24ರ ವರೆಗೆ ಜಾತ್ರೆ ನಡೆದಿತ್ತು. ಜಾತ್ರೆಯಲ್ಲಿ ಗ್ರಾಮದ ದೇವರುಗಳಾದ ಆಂಜನೇಯ ಸ್ವಾಮಿ ಹಾಗೂ ದೊಡ್ಡಮ್ಮ, ಚಿಕ್ಕಮ್ಮ ದೇವರುಗಳ ಮೆರವಣಿಗೆ ನಡೆಯುತ್ತದೆ. ಆದರೆ ಈ ಮೆರವಣಿಗೆಯನ್ನು ಆದಿದ್ರಾವಿಡ ಜನಾಂಗದ ವಾಸಿಸುವ ಕಾಲೋನಿಗೆ ಕರೆದುಕೊಂಡು ಬರುವಂತೆ ಕೇಳಿದ್ದಕ್ಕಾಗಿ ಅವರ ವಿರುದ್ದ ಜಾತಿ ದೌರ್ಜನ್ಯ ಎಸಗಲಾಗಿದೆ ಎಂದು ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವರ ಮೆರವಣಿಗೆಯನ್ನು ತಮ್ಮ ಕಾಲೋನಿಯಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಕರೆದುಕೊಂಡು ಬಂದು ಅಲ್ಲಿ ಮಂಗಳಾರತಿ ಮಾಡಿಸಿಕೊಂಡು ಹೋಗುವಂತೆ ದಲಿತರು ಕೇಳಿದ್ದರು. ಆದರೆ ಸವರ್ಣೀಯರು ಅವರ ವಿರುದ್ದವೇ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದಲಿತರು ತಿಪಟೂರು ತಹಸೀಲ್ದಾರರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ತಮ್ಮ ಕಾಲೋನಿಗೆ ದೇವರ ಮೆರವಣಿಗೆಯನ್ನು ಕಳುಹಿಸಿಕೊಡಿ ಎಂದು ಹಲವು ವರ್ಷಗಳಿಂದಲೂ ದಲಿತರು ಕೇಳುತ್ತಲೇ ಬಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ಜಾತಿ ದೌರ್ಜನ್ಯದ ವಿರುದ್ದ ದಲಿತರು ನೋಣವಿನಕೆರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಮನವಿಯನ್ನು ಕೂಡಾ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀನಿವಾಸ್ ಅವರು, “ನಾವು ಹಲವಾರು ವರ್ಷಗಳಿಂದ ನಮ್ಮ ಕಾಲೋನಿಗೆ ದೇವರ ಉತ್ಸವ ಮೂರ್ತಿ ತರಬೇಕು ಎಂದು ಕೇಳುತ್ತಲೆ ಇದ್ದೇವೆ. ಆದರೆ ಸವರ್ಣೀಯರು ಇದಕ್ಕೆ ಸೋಪ್ಪು ಹಾಕುತ್ತಿಲ್ಲ. ಈ ಬಾರಿ ನಾವು ಅಡ್ಡ ನಿಂತು ಕೇಳಿಕೊಂಡರೂ ಅವರು ನಾವು ದಲಿತರು ಎಂಬ ಕಾರಣಕ್ಕೆ ನಮಗೆ ಜಾತಿ ನಿಂದನೆ ಮಾಡಿ ಮುಂದುವರೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನವಿ ಪತ್ರ ಸ್ವೀಕರಿಸುತ್ತಿಲ್ಲ ಆರೋಪದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನೊಣವಿನಕರೆ ಪೊಲೀಸ್‌ ಠಾಣೆಯ ಪಿಎಸ್‌ಐ ಜಗದೀಶ್‌, “ಆ ರೀತಿ ಎಲ್ಲಾ ನಡೆದಿಲ್ಲ, ಅದು ತಪ್ಪು ಆರೋಪ. ಘಟನೆ ಕುರಿತು ತಹಸಿಲ್ದಾರ್‌ಗೆ ಮನವಿ ನೀಡಿದ್ದಾರೆ. ಅವರು ಹೇಳಿದ್ದನ್ನೆಲ್ಲಾ ಕೇಳಬೇಡಿ. ಇಂತಹ ಘಟನೆ ನಡೆದರೆ ನಾವು ಬೇಗನೇ ದೂರು ಸ್ವೀಕರಿಸುತ್ತೇವೆ. ಅಲ್ಲಿ ದೊಡ್ಡ ಗಲಾಟೆ ನಡೆಯುತ್ತಿರುವಾಗ ತಕ್ಷಣವೇ ನಾನು ಸ್ಥಳಕ್ಕೆ ತೆರಳಿ ಸಮಾಧಾನ ಮಾಡಿದ್ದೇನೆ. ದೇವಾಲಯ ಮುಜರಾಯಿಗೆ ಸೇರಿರುವುದರಿಂದ ನಾವು ತಹಸಿಲ್ದಾರ್‌ಗೆ ಪತ್ರ ಬರೆದಿದ್ದೇವೆ. ಅವರು ಬಂದು ಸ್ಥಳ ಪರಿಶೀಲನೆ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಕೊಡುತ್ತಾರೆ” ಎಂದು ಹೇಳಿದರು.

ಜಾತಿ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, “ಅವರ ಮನವಿಗಳನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಬೇರೆ ಪ್ರಕರಣವೊಂದರ ತನಿಖೆಗೆ ಹೊರಗಡೆ ಹೋಗಿದ್ದೆ. ಪೊಲೀಸ್‌‌ ಸ್ಟೇಷನ್‌ ಎಸ್‌ಎಚ್‌ಓಗಳು ತಗೊಂಡಿರಬಹುದು. ಅದನ್ನು ಪರಿಶೀಲನೆ ಮಾಡಿ ಹೇಳುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ನಂತರ ಮತ್ತೇ ನಾನುಗೌರಿ.ಕಾಂಗೆ ಕರೆ ಮಾಡಿದ ಅವರು, “ಜಾತಿ ದೌರ್ಜನ್ಯದ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೀಗಾಗಿ ನಾವು ಡಿಎಸ್‌ಪಿ ಅಥವಾ ಎಎಸ್‌ಪಿ ಜೊತೆಗೆ ಮಾತನಾಡಿ ಪ್ರಕರಣ ದಾಖಲಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿಗೆ ನಾನುಗೌರಿ.ಕಾಂ ಜಿಲ್ಲಾ ಎಎಸ್‌ಪಿ ಸಿದ್ದಾರ್ಥ್‌ ಗೋಯೆಲ್ ಅವರಿಗೆ ಕರೆ ಮಾಡಿತ್ತಾದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೇ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...