Homeರಾಷ್ಟ್ರೀಯ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ (ಇಂದು) ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ಪೀಠವು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಒಂದು ಅರ್ಜಿಯನ್ನು ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ ಮತ್ತು ಇನ್ನೊಂದು ಅರ್ಜಿಯನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿವೆ.

ಸ್ವಾತಂತ್ಯ್ರ ಹೋರಾಟದ ಸಮದಯಲ್ಲಿ ಮಹಾತ್ಮಾ ಗಾಂಧಿಯಂತಹವರನ್ನು ಮೌನಗೊಳಿಸಲು ಬ್ರಿಟಿಷರು ಬಳಸಿದ ನಿಬಂಧನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಕಾನೂನು ಪುಸ್ತಕದಲ್ಲಿ ಯಾಕೆ ಉಳಿದುಕೊಂಡಿವೆ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರವನ್ನು ಕೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ್ರೋಹವು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸೆಕ್ಷನ್ 124 ಎ ರದ್ದುಗೊಳಿಸುವಂತೆ ವಕೀಲರಾದ ಪಿ ಬಿ ಸುರೇಶ್ ಮತ್ತು ಪ್ರಸನ್ನ ಎಸ್ ಅವರು ಪ್ರತಿನಿಧಿಸಿದ ಜನರಲ್ (ನಿವೃತ್ತ) ವೊಂಬಟ್ಕೆರೆ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಕಿಶೋರ್ ಚಂದ್ರ ವಾಂಗ್ಕೆಮ್ಚಾ ಮತ್ತು ಶ್ರೀಮತಿ ಆಮೋದಾ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಇತರ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ಪೀಠವು ಹೇಳಿದೆ. ಈ ಎರಡೂ ಪ್ರಕರಣಗಳು ದೇಶದ್ರೋಹದ ಆರೋಪಗಳಿಗೆ ಸಂಬಂಧಿಸಿವೆ.

ಹಿರಿಯ ಪತ್ರಕರ್ತ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುವ ಎನ್‌ಜಿಒ ಕಾಮನ್ ಕಾಸ್ ಕೂಡ ಸೆಕ್ಷನ್ 124 ಎ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯು “ಸಂವಿಧಾನಪೂರ್ವ ಕಾನೂನುಗಳಿಗೆ ಸಾಂವಿಧಾನಿಕತೆಯ ಊಹೆಯು ಅನ್ವಯಿಸುವುದಿಲ್ಲ. ಯಾಕೆಂದರೆ ಆ ಕಾನೂನುಗಳು ವಿದೇಶಿ ಶಾಸಕಾಂಗ ಅಥವಾ ಸಂಸ್ಥೆಯಿಂದ ಮಾಡಲ್ಪಟ್ಟಿದೆ” ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...