Homeರಾಷ್ಟ್ರೀಯ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ (ಇಂದು) ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ಪೀಠವು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಒಂದು ಅರ್ಜಿಯನ್ನು ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ ಮತ್ತು ಇನ್ನೊಂದು ಅರ್ಜಿಯನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿವೆ.

ಸ್ವಾತಂತ್ಯ್ರ ಹೋರಾಟದ ಸಮದಯಲ್ಲಿ ಮಹಾತ್ಮಾ ಗಾಂಧಿಯಂತಹವರನ್ನು ಮೌನಗೊಳಿಸಲು ಬ್ರಿಟಿಷರು ಬಳಸಿದ ನಿಬಂಧನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಕಾನೂನು ಪುಸ್ತಕದಲ್ಲಿ ಯಾಕೆ ಉಳಿದುಕೊಂಡಿವೆ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರವನ್ನು ಕೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ್ರೋಹವು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸೆಕ್ಷನ್ 124 ಎ ರದ್ದುಗೊಳಿಸುವಂತೆ ವಕೀಲರಾದ ಪಿ ಬಿ ಸುರೇಶ್ ಮತ್ತು ಪ್ರಸನ್ನ ಎಸ್ ಅವರು ಪ್ರತಿನಿಧಿಸಿದ ಜನರಲ್ (ನಿವೃತ್ತ) ವೊಂಬಟ್ಕೆರೆ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಕಿಶೋರ್ ಚಂದ್ರ ವಾಂಗ್ಕೆಮ್ಚಾ ಮತ್ತು ಶ್ರೀಮತಿ ಆಮೋದಾ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಇತರ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ಪೀಠವು ಹೇಳಿದೆ. ಈ ಎರಡೂ ಪ್ರಕರಣಗಳು ದೇಶದ್ರೋಹದ ಆರೋಪಗಳಿಗೆ ಸಂಬಂಧಿಸಿವೆ.

ಹಿರಿಯ ಪತ್ರಕರ್ತ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುವ ಎನ್‌ಜಿಒ ಕಾಮನ್ ಕಾಸ್ ಕೂಡ ಸೆಕ್ಷನ್ 124 ಎ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯು “ಸಂವಿಧಾನಪೂರ್ವ ಕಾನೂನುಗಳಿಗೆ ಸಾಂವಿಧಾನಿಕತೆಯ ಊಹೆಯು ಅನ್ವಯಿಸುವುದಿಲ್ಲ. ಯಾಕೆಂದರೆ ಆ ಕಾನೂನುಗಳು ವಿದೇಶಿ ಶಾಸಕಾಂಗ ಅಥವಾ ಸಂಸ್ಥೆಯಿಂದ ಮಾಡಲ್ಪಟ್ಟಿದೆ” ಎಂದು ವಾದಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...