Homeರಾಷ್ಟ್ರೀಯ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ (ಇಂದು) ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ಪೀಠವು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಒಂದು ಅರ್ಜಿಯನ್ನು ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ ಮತ್ತು ಇನ್ನೊಂದು ಅರ್ಜಿಯನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿವೆ.

ಸ್ವಾತಂತ್ಯ್ರ ಹೋರಾಟದ ಸಮದಯಲ್ಲಿ ಮಹಾತ್ಮಾ ಗಾಂಧಿಯಂತಹವರನ್ನು ಮೌನಗೊಳಿಸಲು ಬ್ರಿಟಿಷರು ಬಳಸಿದ ನಿಬಂಧನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಕಾನೂನು ಪುಸ್ತಕದಲ್ಲಿ ಯಾಕೆ ಉಳಿದುಕೊಂಡಿವೆ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರವನ್ನು ಕೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ್ರೋಹವು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸೆಕ್ಷನ್ 124 ಎ ರದ್ದುಗೊಳಿಸುವಂತೆ ವಕೀಲರಾದ ಪಿ ಬಿ ಸುರೇಶ್ ಮತ್ತು ಪ್ರಸನ್ನ ಎಸ್ ಅವರು ಪ್ರತಿನಿಧಿಸಿದ ಜನರಲ್ (ನಿವೃತ್ತ) ವೊಂಬಟ್ಕೆರೆ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಕಿಶೋರ್ ಚಂದ್ರ ವಾಂಗ್ಕೆಮ್ಚಾ ಮತ್ತು ಶ್ರೀಮತಿ ಆಮೋದಾ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಇತರ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ಪೀಠವು ಹೇಳಿದೆ. ಈ ಎರಡೂ ಪ್ರಕರಣಗಳು ದೇಶದ್ರೋಹದ ಆರೋಪಗಳಿಗೆ ಸಂಬಂಧಿಸಿವೆ.

ಹಿರಿಯ ಪತ್ರಕರ್ತ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುವ ಎನ್‌ಜಿಒ ಕಾಮನ್ ಕಾಸ್ ಕೂಡ ಸೆಕ್ಷನ್ 124 ಎ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯು “ಸಂವಿಧಾನಪೂರ್ವ ಕಾನೂನುಗಳಿಗೆ ಸಾಂವಿಧಾನಿಕತೆಯ ಊಹೆಯು ಅನ್ವಯಿಸುವುದಿಲ್ಲ. ಯಾಕೆಂದರೆ ಆ ಕಾನೂನುಗಳು ವಿದೇಶಿ ಶಾಸಕಾಂಗ ಅಥವಾ ಸಂಸ್ಥೆಯಿಂದ ಮಾಡಲ್ಪಟ್ಟಿದೆ” ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...