Homeಕರ್ನಾಟಕಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

ಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

- Advertisement -
- Advertisement -

ಪೂರ್ವ ಬೆಂಗಳೂರಿನ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೈಬಲ್ ಬೋಧನೆ ಕಡ್ಡಾಯ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಿರ್ಧಾರವನ್ನು ವಿವರಿಸಲು ರಾಜ್ಯ ಸರ್ಕಾರ ಶಾಲೆಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಪೋಷಕರು ಮತ್ತು ಮಾಧ್ಯಮಗಳ ವರದಿಗಳನ್ನು ಪರಿಗಣಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಂಗಳವಾರ ಶಾಲೆಗೆ ನೋಟಿಸ್ ಜಾರಿ ಮಾಡಿದ್ದು, ಶಾಲೆಯ ಪ್ರತಿಕ್ರಿಯೆಯ ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಖಚಿತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯ ಕ್ರಮ ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಸಚಿವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಇತರ ಬೋರ್ಡ್‌ ಶಾಲೆಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಾಗ, ಅವರು ಕಾಯಿದೆಯ ನಿಬಂಧನೆಗಳನ್ನು ಪಾಲಿಸಬೇಕು ಎಂದು ನಾವು ಹೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಆಡಳಿತಾತ್ಮಕ ಸಡಿಲಿಕೆಗಳನ್ನು ಪಡೆಯಬಹುದಾದರೂ, ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅವಕಾಶವಿರುವುದಿಲ್ಲ. “ಶಾಲೆಗಳಲ್ಲಿ ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅಥವಾ ಬೋಧಿಸಲು ಪಠ್ಯಕ್ರಮದಲ್ಲಿ ಯಾವುದೇ ವಿಶೇಷ ನಿಬಂಧನೆಗಳಿಲ್ಲ. ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಇವೆಲ್ಲವನ್ನೂ ಉಲ್ಲೇಖಿಸಲಾಗಿದೆ” ಎಂದು ನಾಗೇಶ್ ತಿಳಿಸಿದ್ದಾರೆ.

ಪ್ರಸ್ತುತ ಶಾಲೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವ ನಡುವೆಯೆ, ಧಾರ್ಮಿಕ ಬೋಧನೆಗಳು ಮಾಡಲಾಗುತ್ತಿದೆಯೆ ಎಂದು ಶಾಲೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನೋಟಿಸ್‌ಗಳನ್ನು ನೀಡಲು ಇಲಾಖೆಯು ರಾಜ್ಯದ ಎಲ್ಲಾ ಬ್ಲಾಕ್ ಶೈಕ್ಷಣಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸುಳ್ಳು ಪ್ರಚಾರಕ್ಕೆ ಮಣಿಯಬೇಡಿ: ಡಾ. ಮಚಾದೊ

ಶಾಲೆಯ ಮೇಲೆ ಮಾಡಿರುವ ಆರೋಪಗಳು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ ಎಂದು ಬೆಂಗಳೂರಿನ ಆರ್ಚ್‌ಡಯಾಸಿಸ್‌ ಹೇಳಿದೆ. ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಅಧ್ಯಕ್ಷ ಡಾ.ಪೀಟರ್ ಮಚಾದೊ, “ಈ ಹಿಂದೆ ಇಂತಹ ಪದ್ಧತಿ ಇತ್ತು ಎಂದು ಶಾಲೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರೆ ಕಳೆದ ವರ್ಷದಿಂದ, ಯಾವುದೇ ಮಗುವಿಗೆ ಶಾಲೆಗೆ ಬೈಬಲ್ ಅನ್ನು ಕೊಂಡೊಯ್ಯುವಂತೆ ಅಥವಾ ಬಲವಂತವಾಗಿ ಓದಲು ಕೇಳಲಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಂಸ್ಥೆಯಾಗಿರುವುದರಿಂದ, ಶಾಲೆ ಮುಗಿದ ನಂತರ ಕ್ರಿಶ್ಚಿಯನ್ನರಿಗೆ ಬೈಬಲ್ ಅಥವಾ ಧಾರ್ಮಿಕ ತರಗತಿಗಳನ್ನು ನಡೆಸಲು ಶಾಲೆಗೆ ಹಕ್ಕುಗಲಿವೆ ಎಂದು ಅವರು ಹೇಳಿದ್ರುದಾರೆ.

ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಸಂಘಟನೆಗಳ ಸುಳ್ಳು ಪ್ರಚಾರಕ್ಕೆ ಜನರು ಮರುಳಾಗಬಾರದು ಎಂದು ಡಾ.ಮಚಾದೊ ಮನವಿ ಮಾಡಿದ್ದು, “ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಿ” ಎಂದು ಹೇಳಿದ್ದಾರೆ.

ಮುಂದಿನ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಸರ್ಕಾರದ ಯೋಜನೆಯನ್ನು ಉಲ್ಲೇಖಿಸಿದ ಅವರು, “ಮಕ್ಕಳಿಗೆ ಭಗವದ್ಗೀತೆ ಮತ್ತು ಇತರ ಧರ್ಮಗಳ ಪುಸ್ತಕಗಳನ್ನು ಖರೀದಿಸಲು ವಿನಂತಿಸಿದರೆ, ಅದು ಅವರ ಮೇಲೆ ಪ್ರಭಾವ ಬೀರಿದಂತೆ ಆಗುತ್ತದೆಯೆ? ಅಥವಾ ನಿರ್ದಿಷ್ಟ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರೇರೇಪಿಸಿದಂತೆ ಆಗುತ್ತದೆಯೆ? ಖಂಡಿತವಾಗಿಯೂ ಅಲ್ಲ.

ಇದನ್ನೂ ಓದಿ: ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

ಆದ್ದರಿಂದ, ನೈತಿಕತೆ ಮತ್ತು ನೈತಿಕ ಮೌಲ್ಯಗಳನ್ನು ಉತ್ತೇಜಿಸಲು ಅಲ್ಪಸಂಖ್ಯಾತ ಶಾಲೆಗಳಲ್ಲಿ ಧರ್ಮಗ್ರಂಥದ ಪುಸ್ತಕವನ್ನು ಬಳಸುವುದು ವಿದ್ಯಾರ್ಥಿಗಳನ್ನು ಅವರ ಧರ್ಮದ ಕಡೆಗೆ ಬಲವಂತವಾಗಿ ಆಕರ್ಷಿಸುತ್ತದೆ ಎಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಡಾ. ಮಚಾದೊ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...