Homeಕರ್ನಾಟಕಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

ಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

- Advertisement -
- Advertisement -

ಪೂರ್ವ ಬೆಂಗಳೂರಿನ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೈಬಲ್ ಬೋಧನೆ ಕಡ್ಡಾಯ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಿರ್ಧಾರವನ್ನು ವಿವರಿಸಲು ರಾಜ್ಯ ಸರ್ಕಾರ ಶಾಲೆಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಪೋಷಕರು ಮತ್ತು ಮಾಧ್ಯಮಗಳ ವರದಿಗಳನ್ನು ಪರಿಗಣಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಂಗಳವಾರ ಶಾಲೆಗೆ ನೋಟಿಸ್ ಜಾರಿ ಮಾಡಿದ್ದು, ಶಾಲೆಯ ಪ್ರತಿಕ್ರಿಯೆಯ ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಖಚಿತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯ ಕ್ರಮ ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಸಚಿವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಇತರ ಬೋರ್ಡ್‌ ಶಾಲೆಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಾಗ, ಅವರು ಕಾಯಿದೆಯ ನಿಬಂಧನೆಗಳನ್ನು ಪಾಲಿಸಬೇಕು ಎಂದು ನಾವು ಹೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಆಡಳಿತಾತ್ಮಕ ಸಡಿಲಿಕೆಗಳನ್ನು ಪಡೆಯಬಹುದಾದರೂ, ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅವಕಾಶವಿರುವುದಿಲ್ಲ. “ಶಾಲೆಗಳಲ್ಲಿ ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅಥವಾ ಬೋಧಿಸಲು ಪಠ್ಯಕ್ರಮದಲ್ಲಿ ಯಾವುದೇ ವಿಶೇಷ ನಿಬಂಧನೆಗಳಿಲ್ಲ. ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಇವೆಲ್ಲವನ್ನೂ ಉಲ್ಲೇಖಿಸಲಾಗಿದೆ” ಎಂದು ನಾಗೇಶ್ ತಿಳಿಸಿದ್ದಾರೆ.

ಪ್ರಸ್ತುತ ಶಾಲೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವ ನಡುವೆಯೆ, ಧಾರ್ಮಿಕ ಬೋಧನೆಗಳು ಮಾಡಲಾಗುತ್ತಿದೆಯೆ ಎಂದು ಶಾಲೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನೋಟಿಸ್‌ಗಳನ್ನು ನೀಡಲು ಇಲಾಖೆಯು ರಾಜ್ಯದ ಎಲ್ಲಾ ಬ್ಲಾಕ್ ಶೈಕ್ಷಣಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸುಳ್ಳು ಪ್ರಚಾರಕ್ಕೆ ಮಣಿಯಬೇಡಿ: ಡಾ. ಮಚಾದೊ

ಶಾಲೆಯ ಮೇಲೆ ಮಾಡಿರುವ ಆರೋಪಗಳು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ ಎಂದು ಬೆಂಗಳೂರಿನ ಆರ್ಚ್‌ಡಯಾಸಿಸ್‌ ಹೇಳಿದೆ. ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಅಧ್ಯಕ್ಷ ಡಾ.ಪೀಟರ್ ಮಚಾದೊ, “ಈ ಹಿಂದೆ ಇಂತಹ ಪದ್ಧತಿ ಇತ್ತು ಎಂದು ಶಾಲೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರೆ ಕಳೆದ ವರ್ಷದಿಂದ, ಯಾವುದೇ ಮಗುವಿಗೆ ಶಾಲೆಗೆ ಬೈಬಲ್ ಅನ್ನು ಕೊಂಡೊಯ್ಯುವಂತೆ ಅಥವಾ ಬಲವಂತವಾಗಿ ಓದಲು ಕೇಳಲಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಂಸ್ಥೆಯಾಗಿರುವುದರಿಂದ, ಶಾಲೆ ಮುಗಿದ ನಂತರ ಕ್ರಿಶ್ಚಿಯನ್ನರಿಗೆ ಬೈಬಲ್ ಅಥವಾ ಧಾರ್ಮಿಕ ತರಗತಿಗಳನ್ನು ನಡೆಸಲು ಶಾಲೆಗೆ ಹಕ್ಕುಗಲಿವೆ ಎಂದು ಅವರು ಹೇಳಿದ್ರುದಾರೆ.

ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಸಂಘಟನೆಗಳ ಸುಳ್ಳು ಪ್ರಚಾರಕ್ಕೆ ಜನರು ಮರುಳಾಗಬಾರದು ಎಂದು ಡಾ.ಮಚಾದೊ ಮನವಿ ಮಾಡಿದ್ದು, “ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಿ” ಎಂದು ಹೇಳಿದ್ದಾರೆ.

ಮುಂದಿನ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಸರ್ಕಾರದ ಯೋಜನೆಯನ್ನು ಉಲ್ಲೇಖಿಸಿದ ಅವರು, “ಮಕ್ಕಳಿಗೆ ಭಗವದ್ಗೀತೆ ಮತ್ತು ಇತರ ಧರ್ಮಗಳ ಪುಸ್ತಕಗಳನ್ನು ಖರೀದಿಸಲು ವಿನಂತಿಸಿದರೆ, ಅದು ಅವರ ಮೇಲೆ ಪ್ರಭಾವ ಬೀರಿದಂತೆ ಆಗುತ್ತದೆಯೆ? ಅಥವಾ ನಿರ್ದಿಷ್ಟ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರೇರೇಪಿಸಿದಂತೆ ಆಗುತ್ತದೆಯೆ? ಖಂಡಿತವಾಗಿಯೂ ಅಲ್ಲ.

ಇದನ್ನೂ ಓದಿ: ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

ಆದ್ದರಿಂದ, ನೈತಿಕತೆ ಮತ್ತು ನೈತಿಕ ಮೌಲ್ಯಗಳನ್ನು ಉತ್ತೇಜಿಸಲು ಅಲ್ಪಸಂಖ್ಯಾತ ಶಾಲೆಗಳಲ್ಲಿ ಧರ್ಮಗ್ರಂಥದ ಪುಸ್ತಕವನ್ನು ಬಳಸುವುದು ವಿದ್ಯಾರ್ಥಿಗಳನ್ನು ಅವರ ಧರ್ಮದ ಕಡೆಗೆ ಬಲವಂತವಾಗಿ ಆಕರ್ಷಿಸುತ್ತದೆ ಎಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಡಾ. ಮಚಾದೊ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...