Homeಕರ್ನಾಟಕಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

ಬೈಬಲ್‌ ಕಡ್ಡಾಯ ಆರೋಪ: ಬೆಂಗಳೂರಿನ ಶಾಲೆಗೆ ಸರ್ಕಾರದಿಂದ ನೋಟಿಸ್ ಜಾರಿ; ಆರೋಪ ನಿರಾಕರಿಸಿದ ಸಂಸ್ಥೆ

- Advertisement -
- Advertisement -

ಪೂರ್ವ ಬೆಂಗಳೂರಿನ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೈಬಲ್ ಬೋಧನೆ ಕಡ್ಡಾಯ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಿರ್ಧಾರವನ್ನು ವಿವರಿಸಲು ರಾಜ್ಯ ಸರ್ಕಾರ ಶಾಲೆಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಪೋಷಕರು ಮತ್ತು ಮಾಧ್ಯಮಗಳ ವರದಿಗಳನ್ನು ಪರಿಗಣಿಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಂಗಳವಾರ ಶಾಲೆಗೆ ನೋಟಿಸ್ ಜಾರಿ ಮಾಡಿದ್ದು, ಶಾಲೆಯ ಪ್ರತಿಕ್ರಿಯೆಯ ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಖಚಿತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯ ಕ್ರಮ ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಸಚಿವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಇತರ ಬೋರ್ಡ್‌ ಶಾಲೆಗಳಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಾಗ, ಅವರು ಕಾಯಿದೆಯ ನಿಬಂಧನೆಗಳನ್ನು ಪಾಲಿಸಬೇಕು ಎಂದು ನಾವು ಹೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಆಡಳಿತಾತ್ಮಕ ಸಡಿಲಿಕೆಗಳನ್ನು ಪಡೆಯಬಹುದಾದರೂ, ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅವಕಾಶವಿರುವುದಿಲ್ಲ. “ಶಾಲೆಗಳಲ್ಲಿ ಧಾರ್ಮಿಕ ಪುಸ್ತಕಗಳನ್ನು ಕಲಿಸಲು ಅಥವಾ ಬೋಧಿಸಲು ಪಠ್ಯಕ್ರಮದಲ್ಲಿ ಯಾವುದೇ ವಿಶೇಷ ನಿಬಂಧನೆಗಳಿಲ್ಲ. ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಇವೆಲ್ಲವನ್ನೂ ಉಲ್ಲೇಖಿಸಲಾಗಿದೆ” ಎಂದು ನಾಗೇಶ್ ತಿಳಿಸಿದ್ದಾರೆ.

ಪ್ರಸ್ತುತ ಶಾಲೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವ ನಡುವೆಯೆ, ಧಾರ್ಮಿಕ ಬೋಧನೆಗಳು ಮಾಡಲಾಗುತ್ತಿದೆಯೆ ಎಂದು ಶಾಲೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನೋಟಿಸ್‌ಗಳನ್ನು ನೀಡಲು ಇಲಾಖೆಯು ರಾಜ್ಯದ ಎಲ್ಲಾ ಬ್ಲಾಕ್ ಶೈಕ್ಷಣಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸುಳ್ಳು ಪ್ರಚಾರಕ್ಕೆ ಮಣಿಯಬೇಡಿ: ಡಾ. ಮಚಾದೊ

ಶಾಲೆಯ ಮೇಲೆ ಮಾಡಿರುವ ಆರೋಪಗಳು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ ಎಂದು ಬೆಂಗಳೂರಿನ ಆರ್ಚ್‌ಡಯಾಸಿಸ್‌ ಹೇಳಿದೆ. ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕ್ಯಾಥೋಲಿಕ್ ಬಿಷಪ್ಸ್ ಕೌನ್ಸಿಲ್ ಅಧ್ಯಕ್ಷ ಡಾ.ಪೀಟರ್ ಮಚಾದೊ, “ಈ ಹಿಂದೆ ಇಂತಹ ಪದ್ಧತಿ ಇತ್ತು ಎಂದು ಶಾಲೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರೆ ಕಳೆದ ವರ್ಷದಿಂದ, ಯಾವುದೇ ಮಗುವಿಗೆ ಶಾಲೆಗೆ ಬೈಬಲ್ ಅನ್ನು ಕೊಂಡೊಯ್ಯುವಂತೆ ಅಥವಾ ಬಲವಂತವಾಗಿ ಓದಲು ಕೇಳಲಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಂಸ್ಥೆಯಾಗಿರುವುದರಿಂದ, ಶಾಲೆ ಮುಗಿದ ನಂತರ ಕ್ರಿಶ್ಚಿಯನ್ನರಿಗೆ ಬೈಬಲ್ ಅಥವಾ ಧಾರ್ಮಿಕ ತರಗತಿಗಳನ್ನು ನಡೆಸಲು ಶಾಲೆಗೆ ಹಕ್ಕುಗಲಿವೆ ಎಂದು ಅವರು ಹೇಳಿದ್ರುದಾರೆ.

ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಸಂಘಟನೆಗಳ ಸುಳ್ಳು ಪ್ರಚಾರಕ್ಕೆ ಜನರು ಮರುಳಾಗಬಾರದು ಎಂದು ಡಾ.ಮಚಾದೊ ಮನವಿ ಮಾಡಿದ್ದು, “ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಿ” ಎಂದು ಹೇಳಿದ್ದಾರೆ.

ಮುಂದಿನ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ಸರ್ಕಾರದ ಯೋಜನೆಯನ್ನು ಉಲ್ಲೇಖಿಸಿದ ಅವರು, “ಮಕ್ಕಳಿಗೆ ಭಗವದ್ಗೀತೆ ಮತ್ತು ಇತರ ಧರ್ಮಗಳ ಪುಸ್ತಕಗಳನ್ನು ಖರೀದಿಸಲು ವಿನಂತಿಸಿದರೆ, ಅದು ಅವರ ಮೇಲೆ ಪ್ರಭಾವ ಬೀರಿದಂತೆ ಆಗುತ್ತದೆಯೆ? ಅಥವಾ ನಿರ್ದಿಷ್ಟ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರೇರೇಪಿಸಿದಂತೆ ಆಗುತ್ತದೆಯೆ? ಖಂಡಿತವಾಗಿಯೂ ಅಲ್ಲ.

ಇದನ್ನೂ ಓದಿ: ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

ಆದ್ದರಿಂದ, ನೈತಿಕತೆ ಮತ್ತು ನೈತಿಕ ಮೌಲ್ಯಗಳನ್ನು ಉತ್ತೇಜಿಸಲು ಅಲ್ಪಸಂಖ್ಯಾತ ಶಾಲೆಗಳಲ್ಲಿ ಧರ್ಮಗ್ರಂಥದ ಪುಸ್ತಕವನ್ನು ಬಳಸುವುದು ವಿದ್ಯಾರ್ಥಿಗಳನ್ನು ಅವರ ಧರ್ಮದ ಕಡೆಗೆ ಬಲವಂತವಾಗಿ ಆಕರ್ಷಿಸುತ್ತದೆ ಎಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಡಾ. ಮಚಾದೊ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....