Homeಮುಖಪುಟ2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

- Advertisement -
- Advertisement -

ಭಾರತ ಕೃಷಿ ಪ್ರಧಾನ ದೇಶ. ರೈತರು ನಮ್ಮ ದೇಶದ ಬೆನ್ನೆಲುಬು. ದೇಶದ ಜನರು ಕೃಷಿಯನ್ನು ಹೆಚ್ಚು ಅವಲಂಬಿತರಾಗಿದ್ದಾರೆ. ದುರದೃಷ್ಟವಶಾತ್ ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಕೂಡ ಹೆಚ್ಚಳವಾಗಿದೆ. ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುವುದನ್ನು ನಾವು ನೋಡುತ್ತೇವೆ. ಈ ಸಮಸ್ಯೆಯನ್ನು ತಡೆಗಟ್ಟಲು ಭಾರತ ಸರ್ಕಾರವು ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ.

2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ.

ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.

ರೈತರ ಆತ್ಮಹತ್ಯೆಗೆ ಕಾರಣಗಳೇನು?

ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...