Homeಮುಖಪುಟ2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

- Advertisement -
- Advertisement -

ಭಾರತ ಕೃಷಿ ಪ್ರಧಾನ ದೇಶ. ರೈತರು ನಮ್ಮ ದೇಶದ ಬೆನ್ನೆಲುಬು. ದೇಶದ ಜನರು ಕೃಷಿಯನ್ನು ಹೆಚ್ಚು ಅವಲಂಬಿತರಾಗಿದ್ದಾರೆ. ದುರದೃಷ್ಟವಶಾತ್ ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಕೂಡ ಹೆಚ್ಚಳವಾಗಿದೆ. ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುವುದನ್ನು ನಾವು ನೋಡುತ್ತೇವೆ. ಈ ಸಮಸ್ಯೆಯನ್ನು ತಡೆಗಟ್ಟಲು ಭಾರತ ಸರ್ಕಾರವು ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ.

2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ.

ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.

ರೈತರ ಆತ್ಮಹತ್ಯೆಗೆ ಕಾರಣಗಳೇನು?

ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...