Homeಮುಖಪುಟ2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

- Advertisement -
- Advertisement -

ಭಾರತ ಕೃಷಿ ಪ್ರಧಾನ ದೇಶ. ರೈತರು ನಮ್ಮ ದೇಶದ ಬೆನ್ನೆಲುಬು. ದೇಶದ ಜನರು ಕೃಷಿಯನ್ನು ಹೆಚ್ಚು ಅವಲಂಬಿತರಾಗಿದ್ದಾರೆ. ದುರದೃಷ್ಟವಶಾತ್ ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಕೂಡ ಹೆಚ್ಚಳವಾಗಿದೆ. ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುವುದನ್ನು ನಾವು ನೋಡುತ್ತೇವೆ. ಈ ಸಮಸ್ಯೆಯನ್ನು ತಡೆಗಟ್ಟಲು ಭಾರತ ಸರ್ಕಾರವು ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ.

2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ.

ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.

ರೈತರ ಆತ್ಮಹತ್ಯೆಗೆ ಕಾರಣಗಳೇನು?

ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...