Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...