Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...