Homeಚಳವಳಿರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

ರೈತ ಚಳವಳಿಯನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳು: ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಅನ್ನದ ಋಣ ಆಯೋಜಿಸಿದ್ದ “ದೆಹಲಿ ರೈತ ಹೋರಾಟ- ಕನ್ನಡಿಗರ ಒಳನೋಟ” ವೆಬಿನಾರ್‌ನಲ್ಲಿ ಲೇಖಕರು, ಸಂಶೋಧಕರು ಆಗಿರುವ ಪುರುಷೋತ್ತಮ ಬಿಳಿಮಲೆ ಅವರು ಐತಿಹಾಸಿಕ ರೈತ ಹೋರಾಟವನ್ನು ಯಶಸ್ವಿಗೊಳಿಸುತ್ತಿರುವ 11 ಮುಖ್ಯ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

1. ಒಗ್ಗಟ್ಟು: ಸಂಯಕ್ತ ಕಿಸಾನ್ ಮೋರ್ಚಾವು ದೇಶದಾದ್ಯಂತ ಇರುವ ಸುಮಾರು 450 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಂದು ವೇದಿಕೆಗೆ ತಂದು ಒಗ್ಗಟ್ಟು ಪ್ರದರ್ಶಿಸಿದ್ದು.


2. ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ: ಆಧಾರ್ ಕಾರ್ಡ್, ಪಾನ್ ನಂಬರ್, ಇತ್ಯಾದಿ ಆಧಾರಗಳಿಲ್ಲದೆ ಯಾರಿಂದಲೂ ಹಣ ಸ್ವೀಕೃತಿಯಾಗಿಲ್ಲ. ಚಳವಳಿ ಕೇಂದ್ರಗಳಲ್ಲಿ ನಗದು ಸ್ವೀಕರಣೆ ಇಲ್ಲ. ರೈತರು ತಿಂಗಳಿಗೊಮ್ಮೆ ನೀಡಿದ ದೇಣಿಗೆಯಿಂದಲೇ ಖರ್ಚುಗಳನ್ನು ಭರಿಸಿಕೊಳ್ಳಲಾಗಿದೆ. ದಾನಿಗಳು ನೀಡಿದ ಧನಸಹಾಯ ನೇರವಾಗಿ ಬ್ಯಾಂಕಿಗೇ ರವಾನೆಯಾಗಿದೆ.


3. ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿ ಮತ್ತು ದೆಹಲಿ ಗುರುದ್ವಾರ ಮೇನೇಜ್ ಮೆಂಟ್ ಕಮಿಟಿ ರೈತರಿಗೆ ನೀಡಿದ ನಿರಂತರ ಬೆಂಬಲ.


4. ಲಂಗರ್: ಸಿಖ್ ಪರಂಪರೆಯ ಎಲ್ಲರಿಗೂ ಉಚಿತ ಆಹಾರ ನೀಡಿಕೆ ಮತ್ತು ಸಾಮೂಹಿಕ ಭೋಜನದ ಪರಿಕಲ್ಪನೆಯು ಹೋರಾಟವನ್ನು ಕಳೆಗುಂದದಂತೆ ನೋಡಿಕೊಂಡದ್ದು.


5. ಉಚಿತ ಸೇವೆಗಳು: ವೈದ್ಯರು, ಪ್ಲಂಬರ್ ಗಳು, ಇಲೆಕ್ಟ್ರಿಕಲ್ ಕೆಲಸಗಾರರು – ಹೀಗೆ ದೈನಂದಿನ ಅಗತ್ಯದ ಎಲ್ಲ ಸೇವೆಗಳೂ ರೈತರಿಗೆ ಉಚಿತವಾಗಿ ದೊರೆಯಿತು. ಸೇವೆ ಸಲ್ಲಿಸಿದವರೂ ಯಾವುದೇ ಸಂಭಾವನೆ ಪಡೆದಿಲ್ಲ.


6. ಪರ್ಯಾಯ ಮಾಧ್ಯಮಗಳ ಸೃಷ್ಟಿ: ಮುಖ್ಯ ಮಾಧ್ಯಮಗಳನ್ನು ಹೊರಗಿಟ್ಟು ( ಅವರಿಗೆ ಪ್ರವೇಶವಿಲ್ಲ ಎಂಬ ಫಲಕ ಹಾಕಿಯೇ) ಪರ್ಯಾಯ ಮಾಧ್ಯಮಗಳನ್ನು ಸೃಷ್ಟಿಸಿಕೊಂಡು ಪರಿಣಾಮಕಾರೀ ಸಂವಹನವನ್ನು ಸಾಧಿಸಿದ್ದು. ಈ ಕೆಲಸದಲ್ಲಿ ಚಂಡೀಗಡ ಮತ್ತು ಅಮೃತಸರದ ಇಂಜಿನೀಯರಿಂಗ್ ಓದುವ ವಿದ್ಯಾರ್ಥಿಗಳು ಅಸಾಧ್ಯವಾದ್ದನ್ನೇ ಸಾಧ್ಯಮಾಡಿದರು.

ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ


7. ಕೋಮುವಾದದಿಂದ ದೂರ: ಭಾರತ ವಿಭಜನೆಗೆ ದೊಡ್ಡ ಮಟ್ಟದಲ್ಲಿ ಬಲಿಯಾದ ಪಂಜಾಬಿಗಳು ಮುಂದಿನ ದಿನಗಳಲ್ಲಿ ಕೋಮುವಾದ ತಮ್ಮೊಳಗೆ ಪ್ರವೇಶಿಸದ ಎಚ್ಚರವನ್ನು ತೋರಿಸಿದ್ದು. ಜೊತೆಗೆ ಮಹಿಳೆಯರು, ದಲಿತರು, ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಚಳವಳಿಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘಟನೆಯನ್ನು ರೂಪಿಸಿದ್ದು.


8. ಸಕ್ರಿಯ ವಾತಾವರಣ: ಪ್ರತಿಭಟನೆಯ ಸ್ಥಳದಲ್ಲಿ ಸಂಗೀತ, ಉಪನ್ಯಾಸ, ಪ್ರವಚನ, ಜಿಮ್, ಕಲಾಶಿಬಿರ, ಗ್ರಂಥಾಲಯ ಇತ್ಯಾದಿಗಳು ಇರುವಂತೆ ಮಾಡಿ, ಹೋರಾಟದ ವಾತಾವರಣವನ್ನು ಜೀವಂತ ಇರಿಸಿದ್ದು.


9. ಒಳಗೊಳ್ಳುವಿಕೆಯ ಕೆಲಸಗಳು: ಪ್ರತಿಭಟನಕಾರರು ಸದಾ ಹೋರಾಟದೊಂದಿಗೇ ಇರುವಂತೆ ಮಾಡಲು ಟ್ರಾಕ್ಟರ್ ಮೆರವಣಿಗೆ, ಮಹಾಪಂಚಾಯತ್, ಕಿಸಾನ್ ಸಭಾ ಇತ್ಯಾದಿಗಳನ್ನು ನಿರಂತರವಾಗಿ ಆಯೋಜಿಸುತ್ತಾ ರೈತರು ಜಡವಾಗದಂತೆ ನೋಡಿಕೊಂಡದ್ದು.


10. ಹೋರಾಟವು ದೇಶ-ವಿದೇಶಗಳ ಗಮನಸೆಳೆಯುವಂತೆ ತಂತ್ರಗಳನ್ನು ರೂಪಿಸಿದ್ದು.


11. ವಿರೋಧಿಗಳು ಕಟ್ಟಿದ ಕಥನಗಳಿಗೆ ಪ್ರತಿಕ್ರಿಯೆ ನೀಡುತ್ತಾ ತಮ್ಮ ಸಮಯ ವ್ಯರ್ಥವಾಗದಂತೆ ನೋಡಿಕೊಂಡ ಹೋರಾಟಗಾರರು, ತಮ್ಮದೇ ಕಥನಗಳು ಜನರಿಗೆ ತಲುಪುವಂತೆ ಮಾಡಿದ್ದು.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತ ಚಳುವಳಿಯ ಬಗೆಗಿನ ಬಿಳಿಮಲೆಯವರ ಲೇಖನ ಅತ್ಯುಪಯುಕ್ತ ವಿಶ್ಲೇಷಣೆ!ಲಂಗುಲಗಾಮು ಇಲ್ಲದೆ, ಸಾರ್ವಜನಿಕ ಎನಿಸುವ ಕನಿಷ್ಠ ನಾಚಿಕೆಯೂ ಇಲ್ಲದೆ, ಸಂಸತ್ತಿನ ಭೀಮ ಬಲ ಉಪಯೋಗಿಸಿ ಕಾರ್ಯರೂಪಕ್ಕೆ ತರಲೆತ್ನಿಸಿದ ಗುಪ್ತ ಮತ್ತು ಸಮಾಜ ವಿರೋಧಿ ಕಾರ್ಯಸೂಚಿಯನ್ನು ಸಂಘಟಿತವಲ್ಲದ ಜನಸಮೂಹ ವಿರೋಧಿಸಿ ಗೆಲ್ಲುವುದು ಕಷ್ಟಸಾಧ್ಯ! ಅದು, ವಿರೋಧ ಪಕ್ಷಗಳ ಅಸಹಾಯಕ ಸ್ಥಿತಿ; ಅದು, ಧ್ವನಿ ಇಲ್ಲದವರ ಧ್ವನಿ ಆಗಿರಬೇಕಿದ್ದ ಮಾಧ್ಯಮಗಳ ಎಗ್ಗಿಲ್ಲದ ಬಫೂನ್ಗಿರಿ ವಾತಾವರಣ; ಅಂತಹ ಸಂದರ್ಭದಲ್ಲಿ, ರೈತಾಂದೋಲನ ಸಾರ್ವಜನಿಕ ಸದಭಿಪ್ರಾಯ ಕ್ರೋಡೀಕರಿಸಿಕೊಂಡು, ಬಲಪಡೆದು, ಹೋರಾಟವನ್ನು ಮುನ್ನಡೆಸಲು ಸಹಾಯ ಮಾಡಿದ್ದು, ರೈತ ನಾಯಕರ ಮುಂದಾಲೋಚನೆ, ಸಮಯಪ್ರಜ್ಞೆ, ಕೈಚೆಲ್ಲದ ಪ್ರಯತ್ನ ಮತ್ತು, ಅದ್ಭುತ ಸಂವಹನ ಸಾದ್ಯವಾಗಿಸಿದ ಇಂಟರ್ನೆಟ್!!

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...