Homeಅಂತರಾಷ್ಟ್ರೀಯ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

- Advertisement -
- Advertisement -

ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ ಕನಿಷ್ಠ 11 ಜನರು ಹಸಿವಿನಿಂದಾಗಿ ಸಾಯುತ್ತಿದ್ದಾರೆ ಎಂದು ಆ‌ಕ್ಸ್‌ಫಾಮ್‌‌‌ನ ಹೊಸ ಅಂಕಿಅಂಶಗಳು ಹೇಳಿದೆ. ಇದಲ್ಲದೆ, ಜಗತ್ತಿನಾದ್ಯಂತ ಬರಗಾಲದ ಪರಿಸ್ಥಿತಿಗಳು ಕಳೆದ ವರ್ಷಕ್ಕಿಂತ 6 ಪಟ್ಟು ಹೆಚ್ಚಾಗಿದೆ ಎಂದು ಅದು ಉಲ್ಲೇಖಿಸಿದೆ. ‘‘ಹಸಿವಿನ ವೈರಸ್‌ ದ್ವಿಗುಣ’’ ಎಂಬ ಶಿರ್ಷಿಕೆ ಇರುವ ವರದಿ ಬಿಡುಗಡೆ ಮಾಡಿರುವ ಆಕ್ಸ್‌ಫಾಮ್‌‌, ನಿಮಿಷವೊಂದಕ್ಕೆ ಕೊರೊನಾ ಸಾಂಕ್ರಮಿಕದಿಂದ ಸಾಯುವವರಿಗಿಂತ, ಹಸಿವಿನಿಂದ ಸಾಯುವವರೆ ಹೆಚ್ಚು ಎಂದು ಹೇಳಿದೆ.

ಆ‌ಕ್ಸ್‌ಫಾಮ್‌‌ 20 ಸ್ವತಂತ್ರ ಚಾರಿಟೇಬಲ್‌‌‌ ಸಂಸ್ಥೆಗಳ ಒಕ್ಕೂಟವಾಗಿದ್ದು, ಜಾಗತಿಕ ಬಡತನವನ್ನು ಹೋಗಲಾಡಿಸಲು ಕೆಲಸ ಮಾಡುತ್ತಿದೆ. ಇದನ್ನು 1942 ರಲ್ಲಿ ಸ್ಥಾಪಿಸಲಾಯಿತು.

ಪ್ರಸ್ತುತ ಪ್ರಪಂಚದಾದ್ಯಂತ 15.5 ಕೋಟಿ ಜನರು ಆಹಾರ ಅಭದ್ರತೆಯ ಬಿಕ್ಕಟ್ಟಿನಲ್ಲಿ ವಾಸಿಸುತ್ತಿದ್ದಾರೆ ಎಂದು ಆಕ್ಸ್‌ಫ್ಯಾಮ್ ಹೇಳಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 2 ಕೋಟಿ ಜನರು ಹೆಚ್ಚಾಗಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ವಿಶ್ವದ ಹಸಿವಿಗೆ ಮಿಲಿಟರಿ ಸಂಘರ್ಷವು ಪ್ರಮುಖ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಮಿಲಿಟರಿ ಸಂಘರ್ಷಗಳನ್ನು ಎದುರಿಸುತ್ತಿರುವ ದೇಶಗಳಲ್ಲಿ 66% ದಷ್ಟು ದೇಶಗಳು ಹಸಿವಿನ ಬಿಕ್ಕಟ್ಟಿನೊಂದಿಗೆ ಕೂಡಾ ಹೋರಾಡುತ್ತಿವೆ. ಭೀಕರ ಸಾಂಕ್ರಾಮಿಕ ಸಮಯದಲ್ಲೂ ಜಾಗತಿಕವಾಗಿ ಮಿಲಿಟರಿಗೆ ಮಾಡಿರುವ ಖರ್ಚುಗಳು 51 ಬಿಲಿಯನ್ ಡಾಲರ್‌‌‌ ಹೆಚ್ಚಾಗಿದೆ ಎಂದು ಆಕ್ಸ್‌ಫಾಮ್ ಹೇಳಿದೆ.

“ಇಂದು, ಕೊರೊನಾದಿಂದಾದ ಆರ್ಥಿಕ ಕುಸಿತ ಮತ್ತು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟು 5,20,000 ಕ್ಕೂ ಹೆಚ್ಚು ಜನರನ್ನು ಹಸಿವಿನ ಅಂಚಿಗೆ ತಳ್ಳಿದೆ. ಸಾಂಕ್ರಾಮಿಕದ ವಿರುದ್ದ ಹೋರಾಡುವ ಬದಲು, ಪಕ್ಷಗಳು ಪರಸ್ಪರ ಹೋರಾಡುತ್ತಿದ್ದವು. ಇದು ಹವಾಮಾನ ವಿಪತ್ತುಗಳು ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಜರ್ಜರಿಗೊಂಡ ಲಕ್ಷಾಂತರ ಜನರಿಗೆ ಭಾರಿ ಹೊಡೆತವನ್ನು ನೀಡಿದೆ” ಎಂದು ಆಕ್ಸ್‌ಫಾಮ್‌ನ ಅಮೆರಿಕದ ಅಧ್ಯಕ್ಷ ಮತ್ತು ಸಿಇಒ ಅಬ್ಬಿ ಮ್ಯಾಕ್ಸ್‌ಮನ್ ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಪರಿಣಾಮಗಳು ಕೂಡಾ ಹಸಿವಿನ ಬಿಕ್ಕಟ್ಟಿನ ಉಲ್ಬಣಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವರದಿಯು ಗುರುತಿಸಿದೆ. ಈ ಎರಡೂ ಕಾರಣಗಳಿಂದಾಗಿ ಜಾಗತಿಕವಾಗಿ ಆಹಾರದ ಬೆಲೆ 40% ಹೆಚ್ಚಳವಾಗಿದ್ದು, ಇದು ಒಂದು ದಶಕದಲ್ಲೆ ಅತಿ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಇಂತಹ ಉಲ್ಬಣವು ಲಕ್ಷಾಂತರ ಜನರನ್ನು ಹಸಿವೆಗೆ ತಳ್ಳುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಪೋಷಿತ ಮಿಲಿಟರಿ ಸಂಘರ್ಷಗಳಿಗೆ ಅಂತ್ಯ ಹಾಡುವ ಮೂಲಕ “ಹಸಿವಿನ ದುರಂತವನ್ನು” ಅಂಗೀಕರಿಸಲು ಮತ್ತು ನಿಲ್ಲಿಸುವಂತೆ ಸರ್ಕಾರಗಳನ್ನು ಆಕ್ಸ್‌ಫಾಮ್‌‌ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...