Homeಅಂತರಾಷ್ಟ್ರೀಯ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

- Advertisement -
- Advertisement -

ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ ಕನಿಷ್ಠ 11 ಜನರು ಹಸಿವಿನಿಂದಾಗಿ ಸಾಯುತ್ತಿದ್ದಾರೆ ಎಂದು ಆ‌ಕ್ಸ್‌ಫಾಮ್‌‌‌ನ ಹೊಸ ಅಂಕಿಅಂಶಗಳು ಹೇಳಿದೆ. ಇದಲ್ಲದೆ, ಜಗತ್ತಿನಾದ್ಯಂತ ಬರಗಾಲದ ಪರಿಸ್ಥಿತಿಗಳು ಕಳೆದ ವರ್ಷಕ್ಕಿಂತ 6 ಪಟ್ಟು ಹೆಚ್ಚಾಗಿದೆ ಎಂದು ಅದು ಉಲ್ಲೇಖಿಸಿದೆ. ‘‘ಹಸಿವಿನ ವೈರಸ್‌ ದ್ವಿಗುಣ’’ ಎಂಬ ಶಿರ್ಷಿಕೆ ಇರುವ ವರದಿ ಬಿಡುಗಡೆ ಮಾಡಿರುವ ಆಕ್ಸ್‌ಫಾಮ್‌‌, ನಿಮಿಷವೊಂದಕ್ಕೆ ಕೊರೊನಾ ಸಾಂಕ್ರಮಿಕದಿಂದ ಸಾಯುವವರಿಗಿಂತ, ಹಸಿವಿನಿಂದ ಸಾಯುವವರೆ ಹೆಚ್ಚು ಎಂದು ಹೇಳಿದೆ.

ಆ‌ಕ್ಸ್‌ಫಾಮ್‌‌ 20 ಸ್ವತಂತ್ರ ಚಾರಿಟೇಬಲ್‌‌‌ ಸಂಸ್ಥೆಗಳ ಒಕ್ಕೂಟವಾಗಿದ್ದು, ಜಾಗತಿಕ ಬಡತನವನ್ನು ಹೋಗಲಾಡಿಸಲು ಕೆಲಸ ಮಾಡುತ್ತಿದೆ. ಇದನ್ನು 1942 ರಲ್ಲಿ ಸ್ಥಾಪಿಸಲಾಯಿತು.

ಪ್ರಸ್ತುತ ಪ್ರಪಂಚದಾದ್ಯಂತ 15.5 ಕೋಟಿ ಜನರು ಆಹಾರ ಅಭದ್ರತೆಯ ಬಿಕ್ಕಟ್ಟಿನಲ್ಲಿ ವಾಸಿಸುತ್ತಿದ್ದಾರೆ ಎಂದು ಆಕ್ಸ್‌ಫ್ಯಾಮ್ ಹೇಳಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 2 ಕೋಟಿ ಜನರು ಹೆಚ್ಚಾಗಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ವಿಶ್ವದ ಹಸಿವಿಗೆ ಮಿಲಿಟರಿ ಸಂಘರ್ಷವು ಪ್ರಮುಖ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಮಿಲಿಟರಿ ಸಂಘರ್ಷಗಳನ್ನು ಎದುರಿಸುತ್ತಿರುವ ದೇಶಗಳಲ್ಲಿ 66% ದಷ್ಟು ದೇಶಗಳು ಹಸಿವಿನ ಬಿಕ್ಕಟ್ಟಿನೊಂದಿಗೆ ಕೂಡಾ ಹೋರಾಡುತ್ತಿವೆ. ಭೀಕರ ಸಾಂಕ್ರಾಮಿಕ ಸಮಯದಲ್ಲೂ ಜಾಗತಿಕವಾಗಿ ಮಿಲಿಟರಿಗೆ ಮಾಡಿರುವ ಖರ್ಚುಗಳು 51 ಬಿಲಿಯನ್ ಡಾಲರ್‌‌‌ ಹೆಚ್ಚಾಗಿದೆ ಎಂದು ಆಕ್ಸ್‌ಫಾಮ್ ಹೇಳಿದೆ.

“ಇಂದು, ಕೊರೊನಾದಿಂದಾದ ಆರ್ಥಿಕ ಕುಸಿತ ಮತ್ತು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟು 5,20,000 ಕ್ಕೂ ಹೆಚ್ಚು ಜನರನ್ನು ಹಸಿವಿನ ಅಂಚಿಗೆ ತಳ್ಳಿದೆ. ಸಾಂಕ್ರಾಮಿಕದ ವಿರುದ್ದ ಹೋರಾಡುವ ಬದಲು, ಪಕ್ಷಗಳು ಪರಸ್ಪರ ಹೋರಾಡುತ್ತಿದ್ದವು. ಇದು ಹವಾಮಾನ ವಿಪತ್ತುಗಳು ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಜರ್ಜರಿಗೊಂಡ ಲಕ್ಷಾಂತರ ಜನರಿಗೆ ಭಾರಿ ಹೊಡೆತವನ್ನು ನೀಡಿದೆ” ಎಂದು ಆಕ್ಸ್‌ಫಾಮ್‌ನ ಅಮೆರಿಕದ ಅಧ್ಯಕ್ಷ ಮತ್ತು ಸಿಇಒ ಅಬ್ಬಿ ಮ್ಯಾಕ್ಸ್‌ಮನ್ ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಪರಿಣಾಮಗಳು ಕೂಡಾ ಹಸಿವಿನ ಬಿಕ್ಕಟ್ಟಿನ ಉಲ್ಬಣಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವರದಿಯು ಗುರುತಿಸಿದೆ. ಈ ಎರಡೂ ಕಾರಣಗಳಿಂದಾಗಿ ಜಾಗತಿಕವಾಗಿ ಆಹಾರದ ಬೆಲೆ 40% ಹೆಚ್ಚಳವಾಗಿದ್ದು, ಇದು ಒಂದು ದಶಕದಲ್ಲೆ ಅತಿ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಇಂತಹ ಉಲ್ಬಣವು ಲಕ್ಷಾಂತರ ಜನರನ್ನು ಹಸಿವೆಗೆ ತಳ್ಳುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಪೋಷಿತ ಮಿಲಿಟರಿ ಸಂಘರ್ಷಗಳಿಗೆ ಅಂತ್ಯ ಹಾಡುವ ಮೂಲಕ “ಹಸಿವಿನ ದುರಂತವನ್ನು” ಅಂಗೀಕರಿಸಲು ಮತ್ತು ನಿಲ್ಲಿಸುವಂತೆ ಸರ್ಕಾರಗಳನ್ನು ಆಕ್ಸ್‌ಫಾಮ್‌‌ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...