Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...