Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...