Homeಕರ್ನಾಟಕಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

- Advertisement -
- Advertisement -

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು.

ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, ನಯಾಝ್ ಖಾನ್ ಮತ್ತು ತಾಹೆರ್ ಪಟೇಲ್ ಸೇರಿದಂತೆ ಆರು ಮಂದಿ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಪ್ರಿಸ್ಕ್ರಿಪ್ಷನ್ ಮೂಲಕ ನೀಡಲಾಗುವ ಟೈಡಾಲ್ ಮಾತ್ರೆಗಳನ್ನು ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರಿಗೆ ಮಾದಕ ದ್ರವ್ಯವಾಗಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಸುಮಾರು 1,000 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

“ನಮಗೆ ಆಶ್ಚರ್ಯವಾಗುವಂತೆ, ಸಲ್ಮಾನ್ ಮಾದಕ ವಸ್ತು ಮಾರಾಟಕ್ಕೆ ಪೊಲೀಸರ ಬೆಂಬಲವಿದೆ ಎಂದು ಹೇಳಿಕೊಂಡಿದ್ದ. ಆರಂಭದಲ್ಲಿ ಆತ ನಮ್ಮನ್ನು ದಾರಿ ತಪ್ಪಿಸಲು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾನೆಂದು ನಾವು ಭಾವಿಸಿದ್ದೆವು. ಆದಾಗ್ಯೂ, ಸಲ್ಮಾನ್ ಮತ್ತು ಆತನ ಸಹಚರರ ಮೊಬೈಲ್ ಫೋನ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ಚಾಮರಾಜಪೇಟೆ ಮತ್ತು ಜೆಜೆ ನಗರದ ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದುಬಂದಿದೆ. ಪೊಲೀಸರಿಗೆ ಕಾರ್ಯನಿರ್ವಹಿಸಲು ಅವರ ಅಧಿಕಾರ ವ್ಯಾಪ್ತಿ ಇರುವಂತೆ, ಸಲ್ಮಾನ್ ಮತ್ತು ಅವನ ಗ್ಯಾಂಗ್ ಚಾಮರಾಜಪೇಟೆ ಮತ್ತು ಜೆಜೆ ನಗರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆರೋಪಿ ಪೊಲೀಸರಿಗೆ ಮಾದಕವಸ್ತು ಮಾರಾಟಗಾರರ ಚಲನವಲನಗಳು, ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ಸ್ಥಳಗಳು ಇತ್ಯಾದಿ ತಿಳಿದಿತ್ತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್. ಗಿರೀಶ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತ ಮಾದಕವಸ್ತು ವ್ಯಾಪಾರಿಗಳು ಸುಗಮವಾಗಿ ತಮ್ಮ ಕೆಲಸ ಮಾಡಲು ಪ್ರತಿ ತಿಂಗಳು 2 ಲಕ್ಷ ರೂ.ಗಳವರೆಗೆ ಹಣವನ್ನು ಪೊಲೀಸರಿಗೆ ಪಾವತಿಸುತ್ತಿದ್ದರು. ಕೆಲ ಪೊಲೀಸ್ ಸಿಬ್ಬಂದಿ ವ್ಯಾಪಾರಿಗಳೊಂದಿಗೆ ಪಾರ್ಟಿಗಳಲ್ಲಿ ಭಾಗವಹಿಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಕೆಂಗೇರಿ ಗೇಟ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಭರತ್ ರೆಡ್ಡಿ ಅವರು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಎಸ್. ಗಿರೀಶ್ ಅವರಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ನಂತರ ತನಿಖೆಯನ್ನು ವಿಜಯನಗರ ಎಸಿಪಿ ಚಂದನ್ ಅವರಿಗೆ ಹಸ್ತಾಂತರಿಸಲಾಗಿದೆ. ವಿಚಾರಣೆಯಲ್ಲಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಮಾದಕವಸ್ತು ಕಳ್ಳಸಾಗಣೆದಾರರನ್ನು ರಕ್ಷಿಸುವಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಇನ್‌ಸ್ಪೆಕ್ಟರ್‌ ಮಂಜಣ್ಣ ಅವರನ್ನು ಅಮಾನತುಗೊಳಿಸಿದರೆ, ಇತರ ಸಿಬ್ಬಂದಿಯನ್ನು ಡಿಸಿಪಿ ಗಿರೀಶ್ ಅಮಾನತುಗೊಳಿಸಿದ್ದಾರೆ.

ಮಾದಕ ವಸ್ತುಗಳ ಜಾಲಗಳನ್ನು ಹತ್ತಿಕ್ಕುವ ಬಗ್ಗೆ ಧ್ವನಿ ಎತ್ತುತ್ತಿದ್ದ ನಗರ ಪೊಲೀಸರಿಗೆ ಈ ಪ್ರಕರಣ ಮುಜುಗರ ತಂದಿದೆ. ನಿಷೇಧಿತ ಮಾತ್ರೆಗಳು ಎನ್‌ಡಿಪಿಎಸ್‌ ಕಾಯ್ದೆಯಡಿಯಲ್ಲಿ ಬರದ ಕಾರಣ, ಅಂತಹ ಪ್ರಕರಣಗಳ ವಿಚಾರಣೆ ಇನ್ನೂ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈದ್ಯಕೀಯ ವ್ಯವಸ್ಥೆಗಳ ದುರ್ಬಳಕೆಗೆ ಸಂಬಂಧಪಟ್ಟ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 278ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕರ್ನಾಟಕ ಸರ್ಕಾರ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಪ್ರತಿಜ್ಞೆ ಮಾಡುತ್ತಿರುವ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೇ ಮಾದಕವಸ್ತು ಜಾಲದ ಜೊತೆ ಶಾಮೀಲಾಗಿ ಅಮಾನತುಗೊಂಡಿರುವುದು ವಿಪರ್ಯಾಸ.

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...